ಈದ್ ಪ್ರಾರ್ಥನೆ, ಗುಂಪು, ಸಂಭ್ರಮಕ್ಕೆ ಅವಕಾಶ ಇಲ್ಲ; ಕಮಲ್ ಕಟ್ಟುನಿಟ್ಟು

By Suvarna NewsFirst Published May 13, 2021, 10:39 PM IST
Highlights

* ರಂಜಾನ್ ಹಬ್ಬ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್
* ಎಲ್ಲರೂ ಲಾಕ್ ಡೌನ್ ರೂಲ್ಸ್  ಎಲ್ಲರೂ ಫಾಲೋ ಮಾಡಲೇಬೇಕು
* ಹಬ್ಬವೆಂದು ಮನೆಯಿಂದ ಹೊರ ಬರುವಂತಿಲ್ಲ, ಗುಂಪು ಸೇರುವಂತಿಲ್ಲ 
* ಈಗಾಗಲೇ ಮುಸ್ಲಿಂ ಸಮುದಾಯಗಳ ಜೊತೆ ಮಾತುಕತೆ ನಡೆಸಿರುವ ಕಮಿಷನರ್ ಕಮಲ್ ಪಂತ್

ಬೆಂಗಳೂರು (ಮೇ 13)  ರಂಜಾನ್ ಆಚರಣೆಗೂ ಮುನ್ನ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದು ಅನೇಕ ವಿಚಾರಗಳನ್ನು ಸ್ಪಷ್ಟಮಾಡಿದ್ದಾರೆ.

ರಂಜಾನ್​ ತಿಂಗಳ ಉಪವಾಸದ ಕೊನೆಯ ದಿನದ ಹಬ್ಬ ಈದ್​ ಉಲ್​ ಫಿತರ್​ ಆಚರಣೆಗೆ ಈಗಾಗಲೇ ಸಿದ್ದತೆ ನಡೆಸಿದೆ.  ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗುವುದು ಸಂಪ್ರದಾಯವಾಗಿತ್ತು.

ಆದರೆ ಈ ಬಾರಿ ಕೋವಿಡ್​ ಆತಂಕ ಎದುರಾಗಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಈ ಹಿನ್ನಲೆ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸುವಂತೆ ಕೋರಲಾಗಿದೆ. 

ಈ ಲಸಿಕೆ ಎಲ್ಲದಕ್ಕಿಂತ ಪರಿಣಾಮಕಾರಿ ಎಂದ ಸುಧಾಕರ್

ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದ್ದು, ಮನೆಯಲ್ಲಿಯೇ ನಮಾಜ್ ಮಾಡಬಹುದು.  ನಿಯಮ ಜಾರಿಯಲ್ಲಿರುವುದರಿಂದ ಯಾರು ಮನೆಯಿಂದ ಹೊರ ಬರುವಂತಿಲ್ಲ. ಗುಂಪು ಸೇರುವಂತಿಲ್ಲ ಎಂದು ಪಂತ್ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯಗಳ ಜೊತೆ ಮಾತುಕತೆ ನಡೆಸಲಾಗಿದೆ.   ಬೆಂಗಳೂರಿನಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದು,  ಗುಂಪು ಸೇರುವಂತಿಲ್ಲ.  ಅಗತ್ಯ ಮುನ್ನೆಚ್ಚರಿಕೆವಹಿಸಬೇಕು. ಕೊರೋನಾ ನಿಯಮಗಳ ಪಾಲನೆ ಅಗತ್ಯ ಎಂದು ತಿಳಿಸಿದ್ದಾರೆ. 

 

 

KIND ATTN📢:

It is to clarify that in view of being celebrated TOMORROW (May 14) as decided by the concerned committee, no prayers, gatherings, or celebrations of any kind can be held in mosques/eidgahs/grounds. (1/2)

— Kamal Pant, IPS (@CPBlr)
click me!