ಹೆಚ್ಚಳವಾಗುತ್ತಾ ಹಾಲಿನ ದರ ? - ಡಿಕೆ ಸುರೇಶ್‌ ಪ್ರತಿಕ್ರಿಯೆ

Kannadaprabha News   | Kannada Prabha
Published : Nov 06, 2025, 08:07 AM IST
dk suresh

ಸಾರಾಂಶ

ಹಾಲು ಮಾರಾಟದಿಂದಾಗುತ್ತಿರುವ ನಷ್ಟದ ಕುರಿತು ಕೆಎಂಎಫ್‌ಗೆ ಮನವಿ ಮಾಡಿದ್ದು, ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಬೆಂಗಳೂರು : ಹಾಲು ಮಾರಾಟದಿಂದಾಗುತ್ತಿರುವ ನಷ್ಟದ ಕುರಿತು ಕೆಎಂಎಫ್‌ಗೆ ಮನವಿ ಮಾಡಿದ್ದು, ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಆದರೆ, ಹಾಲು ಮಾರಾಟದಿಂದ ಬೆಂಗಳೂರು ಹಾಲು ಒಕ್ಕೂಟಕ್ಕಾಗುತ್ತಿರುವ ನಷ್ಟ ಕುರಿತು ತಿಳಿಸಿದ್ದೇವೆ. ನಮಗೆ ಪ್ರತಿ ಲೀಟರ್‌ ಹಾಲಿಗೆ 20 ಪೈಸೆಯಿಂದ 1.20 ರು.ವರೆಗೆ ನಷ್ಟವಾಗುತ್ತಿದೆ. ಬಮೂಲ್‌ನಲ್ಲಿ 5 ಪ್ರಕಾರದ ಹಾಲು ಮಾರಾಟ ಮಾಡಲಾಗುತ್ತಿದೆ. ಅದರಲ್ಲಿ ಒಂದೊಂದು ರೀತಿಯ ಹಾಲಿನಿಂದ ಒಂದೊಂದು ರೀತಿ ನಷ್ಟವಾಗುತ್ತಿದೆ. ಅರ್ಧ ಲೀ. ಹಾಲು ಮಾರಾಟದಿಂದ ಲಾಭವಾಗುತ್ತಿದ್ದರೆ, 1 ಲೀ.ಗಿಂತ ಹೆಚ್ಚಿನ ಪ್ರಮಾಣ ಹಾಲು ಮಾರಾಟದಿಂದ ನಷ್ಟವಾಗುತ್ತಿದೆ ಎಂದರು.

ಸರಿಯಾಗಿ ಲೆಕ್ಕ ಹಾಕದೆ ನಷ್ಟ

ಅರ್ಧ ಲೀ. ಹಾಲಿಗೆ 26 ರು.ಗಳಿದ್ದರೆ, 1 ಲೀ. ಹಾಲಿಗೆ 48 ರು.ಗಳಿವೆ. ಈ ಹಿಂದೆ 1 ಲೀ. ಹಾಲಿನ ದರ ಹೆಚ್ಚಳ ವೇಳೆ ನಮ್ಮ ಅಧಿಕಾರಿಗಳು ಸರಿಯಾಗಿ ಲೆಕ್ಕ ಹಾಕದೆ, ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದ ಕಾರಣ ನಷ್ಟ ಉಂಟಾಗುವಂತಾಗಿದೆ. ಈ ಬಗ್ಗೆ ಕೆಎಂಎಫ್‌ ಗಮನಕ್ಕೆ ತಂದಿದ್ದು, ದರ ಹೆಚ್ಚಳ ಮಾಡಿ ಎಂದು ಪ್ರಸ್ತಾವನೆ ನೀಡಿಲ್ಲ ಎಂದು ಹೇಳಿದರು.

PREV
Read more Articles on
click me!

Recommended Stories

Illegal Foreign Migrants: ರಾಜ್ಯದಲ್ಲಿ 13,675 ಅಕ್ರಮ ವಿದೇಶಿ ವಲಸಿಗರ ಪತ್ತೆ: ಬೆಂಗಳೂರಲ್ಲೇ 10,650! ಗೃಹ ಸಚಿವರೇ ಕ್ರಮ ಯಾವಾಗ?
ಕಾಂಗ್ರೆಸ್ಸಿಗೆ ಹೆಚ್ಚು ಅಡ್ಡಮತ ಬಂದಿದ್ದು ಬೆಳಗಾವಿಯಿಂದ! 4-5 ಮತ ನಿರೀಕ್ಷಿಸಿದ್ದ ಕೈಗೆ ಸಿಕ್ಕಿದ್ದು ಭರ್ಜರಿ 11!