ಮಲ್ಪೆಯಲ್ಲಿ ಬೋಟು ನಿಲ್ಲಿಸಲು ಸ್ಥಳವಿಲ್ಲ, ಮೀನುಗಾರಿಕಾ ಬೋಟುಗಳಿಗೆ ರಕ್ಷಣೆಯೂ ಇಲ್ಲ!

Published : Jun 27, 2022, 01:24 PM IST
ಮಲ್ಪೆಯಲ್ಲಿ ಬೋಟು ನಿಲ್ಲಿಸಲು ಸ್ಥಳವಿಲ್ಲ, ಮೀನುಗಾರಿಕಾ ಬೋಟುಗಳಿಗೆ ರಕ್ಷಣೆಯೂ ಇಲ್ಲ!

ಸಾರಾಂಶ

ಏಷ್ಯಾದ ಅತೀದೊಡ್ಡ ಸರ್ವಋತು ಮೀನುಗಾರಿಕಾ ಬಂದರಿನ ಅಭಿವೃದ್ಧಿ ನಿರೀಕ್ಷಿತ ಮಟ್ಡದಲ್ಲಿ ಆಗದಿರುವುದು ಮೀನುಗಾರರಿಗೆ ದೊಡ್ಡ ತಲೆನೋವಾಗಿದೆ.

ಶಶಿಧರ ಮಾಸ್ತಿಬೈಲು, ಏಷ್ಯಾನೆಟ್ ಸುವರ್ಣ ನ್ಯೂಸ್

ಉಡುಪಿ(ಜೂ.27): ಮಲ್ಪೆ ಬಂದರಿನಲ್ಲಿ ಬೋಟ್ ನಿಲ್ಲಿಸಲು ಜಾಗವೂ ಇಲ್ಲ, ರಕ್ಷಣೆಯೂ ಇಲ್ಲ ಎಂಬ ಸ್ಥಿತಿ ಉಂಟಾಗಿದೆ. ಏಷ್ಯಾದ ಅತೀದೊಡ್ಡ ಸರ್ವಋತು ಮೀನುಗಾರಿಕಾ ಬಂದರಿನ ಅಭಿವೃದ್ಧಿ ನಿರೀಕ್ಷಿತ ಮಟ್ಡದಲ್ಲಿ ಆಗದಿರುವುದು ಮೀನುಗಾರರಿಗೆ ದೊಡ್ಡ ತಲೆನೋವಾಗಿದೆ.

ಬೇಸಿಗೆ ಮುಗಿದು ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಮೀನುಗಾರಿಕೆ ನಿಂತಿದೆ. ಸರ್ವ ಋತು ಬಂದರು ಎನಿಸಿರುವ ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಗಳನ್ನು ನಿಲ್ಲಿಸಲು ಸ್ಥಳಾವಕಾಶದ ಕೊರತೆ ಇದೆ, ಜೊತೆಗೆ ನಿಲ್ಲಿಸಿದ ಬೋಟ್ ಗಳಿಗೆ ರಕ್ಷಣೆಯೂ ಇಲ್ಲದಂತಾಗಿದೆ.

ಉಡುಪಿಯ ಮಲ್ಪೆಯಲ್ಲಿ  ಬೇರೆಲ್ಲೂ ಇರದ ಸರ್ವ ಋತು ಮೀನುಗಾರಿಕಾ ಬಂದರಿದೆ. ವರ್ಷದ 365 ದಿನವೂ ಇಲ್ಲಿ ಮೀನುಗಾರಿಕಾ ಚಟುವಟಿಕೆ  ನಡೆಸಬಹುದು. ಮಂಗಳೂರು ಹಾಗೂ ಕಾರವಾರ ನಡುವೆ ಇರುವ ಈ ಬಂದರಿನಲ್ಲಿ ಸಾವಿರಾರು ಕೋಟಿಯ ಮೀನುಗಾರಿಕಾ ವ್ಯವಹಾರ ನಡೆಯುತ್ತದೆ. ಡಿಸೇಲ್ ಸಮಸ್ಯೆ,ಆಳಸಮುದ್ರ ಮೀನುಗಾರಿಕೆಯ ಸವಾಲಿನ ನಡುವೆ ಮತ್ತೊಂದು ಸಮಸ್ಯೆ ಮೀನುಗಾರನ್ನು ಕಾಡುತ್ತಿದೆ. 

ಸದ್ಯ  ಮಳೆಗಾಲ ಆರಂಭವಾದ ಹಿನ್ನಲೆಯಲ್ಲಿ ಬೋಟ್ ಗಳು ಬಂದರು ಸೇರಿವೆ. ಆದರೆ ಇಲ್ಲಿರುವ ಬಂದರ್ ನಲ್ಲಿ ಬೋಟ್ ಗಳನ್ನು ನಿಲ್ಲಿಸಲು ಸಾಕಷ್ಟು ಸ್ಥಳಾವಕಾಶ ಇಲ್ಲ ಎಂಬುದು ಮೀನುಗಾರರ ಹಲವು ವರ್ಷಗಳ ಅಳಲು.

ಮಲ್ಪೆ ವ್ಯಾಪ್ತಿಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಬೋಟ್ ಗಳಿವೆ. ಆದರೆ 1 ಸಾವಿರ ಬೋಟ್ ಗಳು ನಿಲ್ಲುವುದಕ್ಕೆ ಮಾತ್ರ ಅವಕಾಶವಿದೆ. ಇದಲ್ಲದೆ ಇಲ್ಲಿ ಯಾವುದೇ ರಕ್ಷಣೆಯೂ ಇಲ್ಲ.ಕಳ್ಳಕಾಕರ ಉಪಟಳ ಜೋರಾಗಿದೆ. ಇಷ್ಟು ದೊಡ್ಡ ಬಂದರಿನಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆಯೂ ಇಲ್ಲ.

ಮಳೆಗಾಲದಲ್ಲಿ ಸಾವಿರಾರು ಬೋಟುಗಳು ಇಲ್ಲೇ ತಂಗುತ್ತವೆ. ಇತ್ತೀಚಿನ ವರ್ಷಗಳಲ್ಲಿ ನಿಲ್ಲಿಸಿದ ಬೋಟ್ ಗಳಿಂದ ಕಳ್ಳರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವುದು ಸಾಮಾನ್ಯವಾಗಿದೆ.ಆದ್ದರಿಂದ ಮೀನುಗಾರಿಕಾ ಇಲಾಖೆ ಇಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರ ಜೊತೆಗೆ ಬೋಟ್ ಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಮೀನುಗಾರರು ಒತ್ತಾಯಿಸಿದ್ದಾರೆ.

ಕರಾವಳಿಯ ಹೆಬ್ಬಾಗಿಲುಗಳಾದ ಮೀನುಗಾರಿಕಾ ಬಂದರುಗಳು ಸೂಕ್ಷ್ಮ ಪ್ರದೇಶಗಳಾಗಿಯೂ ಗುರುತಿಸಿಕೊಂಡಿದೆ. ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಬಂದರಿನ ಸುರಕ್ಷತೆಯ ದೃಷ್ಟಿಯಿಂದ, ಕಡ್ಡಾಯವಾಗಿ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಹಾಕಲೇಬೇಕಾಗಿದೆ.

ಒಟ್ಟಿನಲ್ಲಿ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟ್ ನಿಲುಗಡೆ ಜಾಗ ಮಾಡಿಕೊಳ್ಳುವುದಕ್ಕೆ ಒದ್ದಾಡುವ  ಸ್ಥಿತಿ ಮೀನುಗಾರರದ್ದು.ಇನ್ನೊಂದೆಡೆ ಕೋಟ್ಯಂತರ ಬೆಲೆ ಬಾಳುವ ಬೋಟ್ ಗಳಿಗೆ ಯಾವುದೇ ರಕ್ಷಣೆ ಯೂ ಇಲ್ಲ.ಸಂಬಂಧಪಟ್ಟ ಇಲಾಖೆ ತಕ್ಷಣ ಇತ್ತ ಕಡೆ ಗಮನ ಹರಿಸಬೇಕಿದೆ.

PREV
Read more Articles on
click me!

Recommended Stories

ಶಿರೂರು ಪರ್ಯಾಯೋತ್ಸವ : ಗರಿಗೆದರಿದ ಉಡುಪಿ
ಕಾರವಾರ ಯುವತಿ ಆತ್ಮಹ*ತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರು ಮರಣೋತ್ತರ ಪರೀಕ್ಷೆಗೆ ಪೋಷಕರ ಪಟ್ಟು!