
ವಿಜಯನಗರ: ವೈದ್ಯಾಧಿಕಾರಿಯೊಬ್ಬರಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಕರ್ತವ್ಯನಿರತ ನರ್ಸ್ ಒಬ್ಬರು ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆತ್ಮ*ಹತ್ಯೆಗೆ ಯತ್ನಿಸಿದ ನರ್ಸ್ನ್ನು ಸುನಿತಾ ಎಂದು ಗುರುತಿಸಲಾಗಿದ್ದು, ಅವರು ಕರ್ತವ್ಯದ ಮಧ್ಯೆ 20ಕ್ಕೂ ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಅಸ್ವಸ್ಥಗೊಂಡ ಸುನಿತಾಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ.
ಮಾಹಿತಿಗಳ ಪ್ರಕಾರ, ಮರಿಯಮ್ಮನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿರುವ ಮಂಜುಳಾ ಅವರು ಸುನಿತಾಗೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಈ ಕಿರುಕುಳದಿಂದ ಮನನೊಂದುಕೊಂಡ ಸುನಿತಾ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸುಮಾರು 16 ವರ್ಷಗಳಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಅನುಭವಿ ಸಿಬ್ಬಂದಿಯಾಗಿರುವ ಸುನಿತಾ, ವೈದ್ಯಾಧಿಕಾರಿಯ ವರ್ತನೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕಚೇರಿ ಸಂಬಂಧಿತ ವಿಚಾರಗಳು, ಕರ್ತವ್ಯ ಒತ್ತಡ ಹಾಗೂ ಮಾತಿನ ಕಿರುಕುಳಗಳು ಈ ದುರ್ಘಟನೆಗೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಘಟನೆಗೆಯು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಸ್ಪತ್ರೆಯಂತಹ ಸೇವಾ ಕ್ಷೇತ್ರದಲ್ಲೇ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಎದುರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಪ್ರಕರಣವು ಆರೋಗ್ಯ ಇಲಾಖೆಯೊಳಗಿನ ಕಾರ್ಯಪದ್ದತಿ ಹಾಗೂ ಮೇಲಧಿಕಾರಿಗಳ ವರ್ತನೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಪ್ರಕರಣದ ಸತ್ಯಾಸತ್ಯತೆ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.
ಸ್ಟಾಫ್ ನರ್ಸ್ ಸುನೀತಾ ಆತ್ಮ*ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತಿ ಸೋಮಶೇಖರ್ ಹೇಳಿಕೆ ನೀಡಿ, ಸಮುದಾಯ ಕೇಂದ್ರದ ಮುಖ್ಯಸ್ಥರಾಗಿದ್ದ ಮಂಜುಳ ಅವರು ಕಿರುಕುಳ ನೀಡಿದ್ದಾರೆ. ಕಳೆದ ಹದಿನಾರು ವರ್ಷ ದಿಂದ ಕೆಲಸ ಮಾಡ್ತಿದ್ರು ಲೋ ಪರ್ಮಾಮನ್ಸ್ ಎಂದು ವರದಿ ನೀಡಿದ್ರು. ಶಿಫ್ಟ್ ಹಾಕೋ ವೇಳೆ ಹೆಚ್ಚುವರಿ ಕೆಲಸಕ್ಕೆ ನಿಯೋಜನೆ ಮಾಡುವುದು. ಕಳೆದ ಮೂರು ತಿಂಗಳ ಹಿಂದೆ ಆಪರೇಷನ್ ಅಗಿದ್ರೂ ಮೆಡಿಕಲ್ ಲೀವ್ ನೀಡಿರಲಿಲ್ಲ. ಪ್ರತಿ ಹಂತದಲ್ಲಿ ನಿಂದನೆ, ಅವಮಾನ ಮಾಡ್ತಿರೋ ಹಿನ್ನೆಲೆ, ಬೇಸತ್ತು ಇವತ್ತು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.