ಕಾಫಿನಾಡಲ್ಲಿ 4 ಎಕರೆ ಕಾಫಿ ತೋಟ ಕಡಿದು ಹಾಕಿದ ಅಧಿಕಾರಿಗಳು

Published : Mar 12, 2020, 10:45 AM IST
ಕಾಫಿನಾಡಲ್ಲಿ 4 ಎಕರೆ ಕಾಫಿ ತೋಟ ಕಡಿದು ಹಾಕಿದ ಅಧಿಕಾರಿಗಳು

ಸಾರಾಂಶ

ತುಮಕೂರಿನಲ್ಲಿ ಮರಗಳ ಮಾರಣಹೋಮ ನಡೆಸಿದ ಬೆನ್ನಲ್ಲೇ  ಇದೀಗ ಚಿಕ್ಕಮಗಳೂರಿನಲ್ಲಿಯೂ ಇಂತಹದ್ದೆ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಎಕರೆಗಟ್ಟಲೇ ತೋಟ ಹಡಿದು ಹಾಕಲಾಗಿದೆ. 

ಚಿಕ್ಕಮಗಳೂರು [ಮಾ.12]: ತುಮಕೂರಿನಲ್ಲಿ ಎರಡು ಕಡೆ ಅಡಕೆ, ತೆಂಗು ಮರಗಳ ಮಾರಣಹೋಮ ನಡೆಸಿದ ಬೆನ್ನಲ್ಲೇ ಇದೀಗ ಮತ್ತೊಂದು ಕಡೆ ಬೆಳೆಗಳ ಮಾರಣಹೋಮ ನಡೆಸಿರುವುದು ಬೆಳಕಿಗೆ ಬಂದಿದೆ. 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೇವಗೂಡು ಗ್ರಾಮದ ದಿನೇಶ್ ಹೆಬ್ಬಾರ್ ಎಂಬುವವರಿಗೆ ಸೇರಿದ್ದ ಇನ್ನೇನು ಫಸಲು ಬರಲು ಸಿದ್ಧವಾಗಿದ್ದ ಗಿಡಗಳಿಗೆ ಕೊಡಲಿ ಹಾಕಲಾಗಿದೆ. 

  ಹೂ ಬಿಟ್ಟ ಕಾಫಿ ಗಿಡಗಳನ್ನು ಅಧಿಕಾರಿಗಳು ಕಡಿದು ಉರುಳಿಸಿದ್ದಾರೆ. 4ಎಕರೆಯಲ್ಲಿದ್ದ ಕಾಫಿ ಗಿಡಗಳನ್ನು ನಾಶ ಮಾಡಿದ್ದಾರೆ.ಅಧಿಕಾರಿಗಳ ದಿಢೀರ್ ನಿರ್ಧಾರದಿಂದ ರೈತ ಕಂಗಾಲಾಗಿದ್ದಾರೆ.

ಮಕ್ಕಳಂತೆ ಸಾಕಿದ್ದ ಮರಗಳ ಮಾರಣ ಹೋಮ..! ಮುಗಿಲು ಮುಟ್ಟಿತು ರೈತ ಮಹಿಳೆಯ ಆಕ್ರಂದನ...

ಸರ್ವೆ ನಂಬರ್ 78ರಲ್ಲಿರುವ ತೋಟದಲ್ಲಿ ಒತ್ತುವರಿ ಆರೋಪದಡಿಯಲ್ಲಿ ಅಧಿಕಾರಿಗಳು ಕಾಫಿ ಗಿಡಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. 

ತುಮಕೂರಿನ ಗುಬ್ಬಿ ತಾಲೂಕಿನಲ್ಲಿಯೂ ಎರಡು ಕಡೆ ನೂರಾರು ಅಡಕೆ ಹಾಗೂ ತೆಂಗಿನ ಮರಗಳನ್ನು ಮಾರಣಹೋಮ ನಡೆಸಿದ್ದು, ಇದರ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

PREV
click me!

Recommended Stories

ಬಡ ಬೈಕರ್‌ನ ಬಿಟ್ಟು ಸರ್ಕಾರಿ ಕಾರ್‌ಗಳನ್ನ ಟ್ರಾಫಿಕ್‌ ಪೊಲೀಸರು ಹಿಡಿಯೋದು ಯಾವಾಗ? 3 ವರ್ಷದಲ್ಲಿ 82 ಸಾವಿರ ಕೇಸ್‌, 19 ಕೋಟಿ ಪೆಂಡಿಂಗ್‌!
Dharwad: ಕೋನರೆಡ್ಡಿ ಎಸ್ಕಾರ್ಟ್ ವಿವಾದ; ಗೃಹ ಇಲಾಖೆ ಸೈಲೆಂಟ್, ಕಾರ್ಯಕರ್ತ ವೈಲೆಂಟ್! ಪೈಸೆ ಪೈಸೆಯೂ ವಸೂಲಿ ಮಾಡಿ ಎಂದು ಲೋಕಾಯುಕ್ತಕ್ಕೆ ದೂರು!