ಉತ್ತರಕನ್ನಡ: ಇದ್ದೂ ಇಲ್ಲದಂತಾದ ಅಧಿಕಾರಿಗಳು, ರಸ್ತೆ ಗುಂಡಿ ಮುಚ್ಚುವ ವೃದ್ಧ..!

Published : Oct 07, 2023, 12:00 AM IST
ಉತ್ತರಕನ್ನಡ: ಇದ್ದೂ ಇಲ್ಲದಂತಾದ ಅಧಿಕಾರಿಗಳು, ರಸ್ತೆ ಗುಂಡಿ ಮುಚ್ಚುವ ವೃದ್ಧ..!

ಸಾರಾಂಶ

ಹಬ್ಬುವಾಡ ರಸ್ತೆಯಲ್ಲಿ ಪ್ರತಿನಿತ್ಯ ಗುಂಡಿ ತಪ್ಪಿಸಲು ಹೋಗಿ ವಾಹನಗಳ ಸವಾರರು ಅಪಘಾತದಿಂದ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇರುತ್ತಾರೆ. ಈ ಬಗ್ಗೆ ಸ್ಥಳೀಯರ ಒತ್ತಾಯವಿದ್ದರೂ, ಅಧಿಕಾರಿಗಳ ಗಮನಕ್ಕಿದ್ದರೂ ರಸ್ತೆ ದುರಸ್ತಿ ಕಾರ್ಯ ಮಾತ್ರ ಆಗುತ್ತಿಲ್ಲ. ಇದನ್ನ ಗಮನಿಸಿದ ಬಾಂಡಿಶಿಟ್ಟಾ ನಿವಾಸಿ ಜಾನ್ ಎಂಬಬರು ಈ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಉತ್ತರಕನ್ನಡ(ಅ.07):  ಸಂಪೂರ್ಣ ಗುಂಡಿಮಯವಾಗಿರುವ ಕಾರವಾರದ ಹಬ್ಬುವಾಡ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸುವ ಮೂಲಕ ವೃದ್ಧರೋರ್ವರು ವರ್ಷಗಳಿಂದ ಸದ್ದಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

ಹಬ್ಬುವಾಡ ರಸ್ತೆಯಲ್ಲಿ ಪ್ರತಿನಿತ್ಯ ಗುಂಡಿ ತಪ್ಪಿಸಲು ಹೋಗಿ ವಾಹನಗಳ ಸವಾರರು ಅಪಘಾತದಿಂದ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇರುತ್ತಾರೆ. ಈ ಬಗ್ಗೆ ಸ್ಥಳೀಯರ ಒತ್ತಾಯವಿದ್ದರೂ, ಅಧಿಕಾರಿಗಳ ಗಮನಕ್ಕಿದ್ದರೂ ರಸ್ತೆ ದುರಸ್ತಿ ಕಾರ್ಯ ಮಾತ್ರ ಆಗುತ್ತಿಲ್ಲ. ಇದನ್ನ ಗಮನಿಸಿದ ಬಾಂಡಿಶಿಟ್ಟಾ ನಿವಾಸಿ ಜಾನ್ ಎಂಬಬರು ಈ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಉತ್ತರಕನ್ನಡ: ಅನ್ನದಾತನಿಗೆ ಏಟಿನ ಮೇಲೆ ಏಟು, ಬೆಳೆಗೆ ರೋಗ ಕಾಟ, ಸಂಕಷ್ಟದಲ್ಲಿ ರೈತರು..!

ಬೆಳ್ಳಂಬೆಳಿಗ್ಗೆಯೇ ಸೈಕಲನ್ನೇರಿ, ಆ ಸೈಕಲನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಇಳಿಯುತ್ತಾರೆ. ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಆಗಮಿಸಿ, ಕಲ್ಲು- ಮಣ್ಣನ್ನು ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಈ ವೃದ್ಧ ನಡೆಸುತ್ತಾರೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಈ ವೃದ್ಧನ ವಿಡಿಯೋವನ್ನು ಇದೀಗ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ವೃದ್ಧನ ಸಮಾಜ ಸೇವೆಗೆ ಬಾಂಡಿಶಿಟ್ಟಾ ನಿವಾಸಿ ಜಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

PREV
Read more Articles on
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ