ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ : ಕುಡಿದು ವಾಹನ ಚಲಾಯಿಸಿದ್ದೇ ಕಾರಣ

By Suvarna NewsFirst Published Sep 18, 2020, 1:10 PM IST
Highlights

ಕುಡಿದು ವಾಹನ  ಚಾಲನೆ ಮಾಡಿದ್ದರಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು (ಸೆ.18) : ಕುಡಿದು ಕಾರು ಚಾಲನೆ ಮಾಡಿದ್ದರಿಂದ ಆದ ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ನಡೆದಿದೆ.

ಆರೋಪಿ ರೋಹಿತ್ ಕೇಡಿಯಾ ಎಂಬಾತ ಕುಡಿದು ಕಾರು ಚಲಾಯಿಸಿಕೊಂಡು ಬರುವಾಗ ಸರಣಿ ಅಪಘಾತವಾಗಿದೆ. ಈ ವೇಳೆ ರಿಚ್ಮಂಡ್ ವೃತ್ತದ ಬಳಿ ನಿಂತಿದ್ದ ದ್ವಿಚಕ್ರ ವಾಹನ ಸವಾರ ಕಿರಣ್ ಎಂಬಾತ ಸಾವಿಗೀಡಾಗಿದ್ದಾನೆ. 

Latest Videos

ಇನ್ಶುರೆನ್ಸ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ್ ಬೈಕಿಗೆ ಕಾರು ಗುದ್ದಿದ್ದು ಇದರಿಂದ ಸ್ಥಳದಲ್ಲಿಯೇ ಕಿರಣ್ ಸಾವಿಗೀಡಾಗಿದ್ದಾರೆ. 

ಮಗನ ಕೊಲೆಗೆ ಅಪ್ಪನೇ ಸುಪಾರಿ ಕೊಟ್ಟ : ಪುತ್ರ ದ್ವೇಷಕ್ಕೆ ಕಾರಣವೇ ಇದು! .

ಈ ಸಂಬಂಧ 304 ರ ಅಡಿಯಲ್ಲಿ ರೋಹಿತ್ ಕೇಡಿಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 14 ದಿನಗಳ ಕಾಲ ರೋಹಿತ್‌ನನ್ನು ನ್ಯಾಯಾಂಗ ಬಂಧನ್ಕೆ ಒಪ್ಪಿಸಲಾಗಿದೆ. ವಾಹನ ಚಾಲನೆ ಮಾಡುವಾಗ ರೋಹಿತ್ ಡ್ರಗ್ಸ್ ಸೇವಿಸಿದ್ದನೇ ಎನ್ನುವ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

click me!