ಬಾರದ ಸಚಿವ ಅಂಗಾರ: ಹೂಗುಚ್ಛ ಕಡಲಿಗೆಸೆದು ಮೀನುಗಾರರ ಆಕ್ರೋಶ

Kannadaprabha News   | Asianet News
Published : Jun 09, 2021, 10:46 AM IST
ಬಾರದ ಸಚಿವ ಅಂಗಾರ: ಹೂಗುಚ್ಛ ಕಡಲಿಗೆಸೆದು ಮೀನುಗಾರರ ಆಕ್ರೋಶ

ಸಾರಾಂಶ

*  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದ ಘಟನೆ * ಬಂದರಿಗೆ ಬಾರದೇ ವಾಪಸ್‌ ತೆರಳಿದ ಸಚಿವ ಎಸ್‌. ಅಂಗಾರ  * ಮನವಿ ಪತ್ರವನ್ನೂ ಕಡಲಿಗೆ ಅರ್ಪಿಸಿದ ಮೀನುಗಾರರು

ಹೊನ್ನಾವರ(ಜೂ.09): ಕರಾವಳಿ ಜಿಲ್ಲೆಯ ಬಹುತೇಕ ಎಲ್ಲ ಬಂದರು ಪ್ರದೇಶ, ಕಡಲ ಕೊರೆತಕ್ಕೆ ತುತ್ತಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಜ್ಯ ಮೀನುಗಾರಿಕಾ ಸಚಿವ ಎಸ್‌. ಅಂಗಾರ ಅವರು ಹೊನ್ನಾವರ ಬಂದರಿಗೆ ಬಾರದೇ ತೆರಳಿದ್ದು, ಸ್ಥಳೀಯ ಮೀನುಗಾರರಿಗೆ ತೀವ್ರ ನಿರಾಸೆ ಉಂಟು ಮಾಡಿದೆ. 

ಸಚಿವರ ಸ್ವಾಗತಕ್ಕೆ ತಂದಿದ್ದ ಹೂ ಮಾಲೆ, ಹೂಗುಚ್ಛವನ್ನು ಕಡಲಿಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಸಚಿವರಿಗೆ ನೀಡಬೇಕೆಂದು ಸಿದ್ಧಪಡಿಸಿಕೊಂಡಿದ್ದ ಮನವಿ ಪತ್ರವನ್ನೂ ಕಡಲಿಗೆ ಅರ್ಪಿಸಿದರು. ಕಾಸರಗೋಡಿನಲ್ಲಿ ಖಾಸಗಿ ಬಂದರು ಸ್ಥಾಪನೆ ಕುರಿತಂತೆ ವಿವಾದ ನಡೆಯುತ್ತಿದ್ದು, ಇದಕ್ಕೆ ಉತ್ತರಿಸಬೇಕಾಗುತ್ತದೆ. ಮೀನುಗಾರರಿಗೆ ಸಮಜಾಯಿಷಿ ನೀಡಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಸಚಿವರು ಇದೇ ಮಾರ್ಗದಲ್ಲಿ ತೆರಳಿದರೂ ಬಂದರಿಗೆ ಭೇಟಿ ನೀಡಲಿಲ್ಲ ಎಂದು ಮೀನುಗಾರರು ದೂರಿದರು.

ಮಲೆನಾಡಿನಲ್ಲಿ ಎಲ್ಲೆಲ್ಲೂ ಈಗ ಹಳದಿ ಕಪ್ಪೆಗಳು!

ಹೊನ್ನಾವರ, ಕಾಸರಗೋಡು ಬಂದರು ಪ್ರದೇಶಕ್ಕೆ ಮಂಗಳವಾರ ಬೆಳಗ್ಗೆ 10.30ಕ್ಕೆ ಸಚಿವರ ಭೇಟಿ ನಿಗದಿ ಆಗಿತ್ತು. ಆದಾಗ್ಯೂ ಸಚಿವರು ಭೇಟಿ ನೀಡದೆ ಇರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ. 
 

PREV
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!