ಮತಾಂತರ ಆದ್ರೆ ಮಗಳನ್ನು ಕಳಿಸ್ತೀವಿ: ಪ್ರೀತಿಸಿ ಮದುವೆಯಾದವ್ರಿಗೆ ಅಡ್ಡಿಯಾಯ್ತು ಧರ್ಮ!

Published : Jul 06, 2019, 05:55 PM IST
ಮತಾಂತರ ಆದ್ರೆ ಮಗಳನ್ನು ಕಳಿಸ್ತೀವಿ: ಪ್ರೀತಿಸಿ ಮದುವೆಯಾದವ್ರಿಗೆ ಅಡ್ಡಿಯಾಯ್ತು ಧರ್ಮ!

ಸಾರಾಂಶ

ಪ್ರೀತಿಸಿ ಮದುವೆಯಾದ ಜೊಡಿಗೆ ಅಡ್ಡಿಯಾಯ್ತು ಧರ್ಮ| ಏಳುವರ್ಷ ಲವ್ ಮಾಡಿ ಮದುವೆಯಾಗಿದ್ದ ಸಿದ್ದಲಿಂಗಸ್ವಾಮಿ| ರಂಜಾನ್ ಹಬ್ಬಕ್ಕೆಂದು ಯುವತಿ ಕರೆದೊಯ್ದು ವಾಪಸ್ ಕಳುಹಿಸದ ಪೋಷಕರು| ಹೆಂಡ್ತಿಯನ್ನ ಮನೆಗೆ ಕಳುಹಿಸುವಂತೆ ಯುವಕನಿಂದ ಒತ್ತಾಯ| ಹೆಂಡ್ತಿ ಬೇಕು ಅಂದ್ರೆ ಮತಾಂತರ ಆಗು ಎಂದ ಯುವತಿ ಪೋಷಕರು.

ಕೊಡಗು[ಜು.06]: ಪ್ರೀತಿಸಿ ಮದುವೆಯಾದ ಜೋಡಿಗೆ ಧರ್ಮ ಅಡ್ಡಿಯಾಗಿದೆ.  ಹೌದು ಪ್ರೀತಿಸಿ ಮದುವೆಯಾಗಿದ್ದ ತಮ್ಮ ಮಗಳನ್ನು ಹಬ್ಬದ ನೆಪದಲ್ಲಿ ಮನೆಗೆ ಕರೆದೊಯ್ದ ಹೆತ್ತವರು ಈಗ ಆಕೆಯನ್ನು ಕಳುಹಿಸಿಕೊಡಬೇಕಾದರೆ, ನೀನು ಮತಾಂತರ ಆಗಬೇಕು ಎಮಬ ಕಂಡೀಷನ್ ಹಾಕಿದ್ದಾರೆ.

ಕಳೆದ ಏಳು ವರ್ಷಗಳಿಂದ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ತಿರುಮಲಾಪುರ ನಿವಾಸಿ ಸಿದ್ದಲಿಂಗಸ್ವಾಮಿ ಹಾಗೂ ಶಿಫಾನಿ ಜ.19 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮದುವೆಯಾಗಿದ್ದರು.  ಸಿದ್ದಲಿಂಗಸ್ವಾಮಿ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆದರೆ ಈ ಮದುವೆ ಶಿಫಾನಿ ಪೋಷಕರಿಗೆ ಇಷ್ಟವಿರಲಿಲ್ಲ. 

ಹೀಗಾಗಿ ಮದುವೆಯಾದ ನಾಲ್ಕು ತಿಂಗಳಿಗೆ ಬಂದಿದ್ದ ರಂಜಾನ್ ಹಬ್ಬಕ್ಕೆಂದು ಶಿಫಾನಿ ಪೋಷಕರು ಆಕೆಯನ್ನು ತಮ್ಮ ಮನೆಗೆ ಕರೆದೊಯ್ದಿದ್ದರು. ಆದರೆ ಹಲವಾರು ದಿನಗಳು ಕಳೆದಿದ್ದರೂ ಹೆಂಡತಿಯನ್ನು ಕಳುಹಿಸದಾಗ ಸಿದ್ದಲಿಂಗಸ್ವಾಮಿ ತಾನೇ ಖುದ್ದಾಗಿ ವರ ಮನೆಗೆ ತೆರಳಿ ಹೆಂಡತಿಯನ್ನು ಕಳುಹಿಸಿಕೊಡುವಂತೆ ಕೇಳಿಕೊಂಡಿದ್ದಾನೆ.  ಈ ವೇಳೆ ಶಿಫಾನಿ ಪೋಷಕರು ಸಿದ್ದಲಿಂಗಸ್ವಾಮಿಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಕಂಡೀಷನ್ ಹಾಕಿದ್ದಾರೆ. ಆದರೆ ಆತ ಇದಕ್ಕೆ ಒಪ್ಪದಾಗ ಶಿಫಾನಿಯನ್ನು ಕಳುಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಅತ್ತ ಶಿಫಾನಿಯೂ ನೀನಿಲ್ಲದೆ ನಾನು ಬದುಕಲ್ಲ ಎಂದು ಕೀಟನಾಶಕ ಕುಡಿಯುವ ವಿಡಿಯೋ ಒಂದನ್ನು ಗಂಡನಿಗೆ ಕಳುಹಿಸಿದ್ದಾಳೆ. ಇದರಿಂದ ಆತಂಕಕ್ಕೀಡಾದ ಸಿದ್ದಲಿಂಗಸ್ವಾಮಿ ಬೈಲುಕುಪ್ಪೆ ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾನೆ.

PREV
click me!

Recommended Stories

ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ; 'ಮಾಡಿದ್ದುಣ್ಣೋ ಮಾರಾಯ' ಎಂದ ಮುಖಂಡ ಚಮನ್ ಸಾಬ್