ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗರಿ

Published : Aug 29, 2026, 10:01 AM IST
Parthagali bronze statue of Lord Rama

ಸಾರಾಂಶ

ಗೋವಾದ ಪರ್ತಗಾಳಿಯ ಶ್ರೀ ಸಂಸ್ಥಾನ ಗೋಕರ್ಣ ಮಠದಲ್ಲಿ ಸ್ಥಾಪಿಸಲಾದ ಶ್ರೀರಾಮನ ಕಂಚಿನ ಪ್ರತಿಮೆಯು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.

ಕಾರವಾರ: ಗೋವಾದ ಕಾಣಕೋಣದ ಪರ್ತಗಾಳಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಆದರ್ಶ ಧಾಮದಲ್ಲಿ ಸ್ಥಾಪಿಸಲಾಗಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಕಂಚಿನ ಪ್ರತಿಮೆಯು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ದಾಖಲೆಗೆ ಪಾತ್ರವಾಗಿದೆ.

ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಗಳ 82ನೇ ಜನ್ಮತಿಥಿಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನ ಅಧಿಕೃತ ತೀರ್ಪುಗಾರ್ತಿ ಡಾ. ಚಿತ್ರಾ ಜೈನ್ ದಾಖಲೆ ಪ್ರಮಾಣಪತ್ರಗಳನ್ನು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಗೆ ಹಸ್ತಾಂತರಿಸಿದರು.

2025ರ ನ.28ರಂದು ಪ್ರತಿಮೆ ಲೋಕಾರ್ಪಣೆ

ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿರುವ ಈ ಭವ್ಯ ಪ್ರತಿಮೆಯು ಪೀಠದಿಂದ 78.74 ಅಡಿ (24 ಮೀಟರ್) ಎತ್ತರ ಹೊಂದಿದೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025ರ ನ.28ರಂದು ಪ್ರತಿಮೆ ಲೋಕಾರ್ಪಣೆಗೊಳಿಸಿದ್ದರು. ಖ್ಯಾತ ಶಿಲ್ಪಿ ಪದ್ಮಭೂಷಣ ದಿವಂಗತ ರಾಮ್ ಸುತಾರ್ ಹಾಗೂ ಅವರ ಪುತ್ರ ಅನಿಲ್ ಸುತಾರ್ ಪ್ರತಿಮೆಯನ್ನು ರೂಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿಠ್ಠಲ ಮಾಸ್ತರ ಗೌರವ ಪುರಸ್ಕಾರವನ್ನು ರಾಮಚಂದ್ರ ಪದ್ಮನಾಭ ಭಟ್ಟ ಗಾಂವ್ಕರ ಅವರಿಗೆ ನೀಡಿ ಗೌರವಿಸಲಾಯಿತು. ವಿವಿಧ ಸ್ಥಳಗಳಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು.

ಮಠದ ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ದೆಂಪೊ, ಗೋವಾ ಲೋಕೋಪಯೋಗಿ ಸಚಿವ ದಿಗಂಬರ ಕಾಮತ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಅನಿಲ್ ಪೈ ಇದ್ದರು.

PREV
Read more Articles on
click me!

Recommended Stories

ಅನುಮೋದನೆ ಸಿಕ್ಕರೂ ಗದಗ-ಯಲವಿಗಿ ರೈಲು ಮಾರ್ಗದ ಯೋಜನೆ ವಿಳಂಬಕ್ಕೆ ಕಾರಣ ಏನು? ಮನವಿ ಸಲ್ಲಿಕೆ
ಬಿ ನಾಗೇಂದ್ರ ರಾಜೀನಾಮೆ ಆಯ್ತು, ಕೆಪಿಎಸ್‌ಸಿ ಎಇಇ ನೇಮಕಾತಿ ಹಗರಣದಲ್ಲಿ ಈಗ ಪ್ರಿಯಾಂಕ್ ಖರ್ಗೆ ಸರದಿ! ಹೆಚ್‌ಡಿಕೆ ಗಂಭೀರ ಆರೋಪ!