ಬಾಲಕಿ ಮೇಲೆ ರೇಪ್ ಕೇಸ್‌: ಯಾದಗಿರಿ ಹಳ್ಳೀಲಿ ದಲಿತರ ಮೇಲಿನ ಬಹಿಷ್ಕಾರ ವಾಪಸ್‌

By Kannadaprabha NewsFirst Published Sep 14, 2024, 5:15 AM IST
Highlights

ರಾತ್ರಿವರೆಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಅಧಿಕಾರಿಗಳು ಬಹಿಷ್ಕಾರ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಯಶಸ್ವಿಯಾದರು. ಸವರ್ಣೀಯರ ಯುವಕನೊಬ್ಬ 15 ವರ್ಷದ ದಲಿತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಆಕೆ ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟಿದ್ದ. ಈ ಸಂಬಂಧ ಬಾಲಕಿ ಕುಟುಂಬಸ್ಥರು ಕಳೆದ ತಿಂಗಳು ಆರೋಪಿ ವಿರುದ್ಧ ಪೋಕೋ ಪ್ರಕರಣ ದಾಖಲಿಸಿದ್ದರು. 

ಬಸವರಾಜ್ ಕಟ್ಟಿಮನಿ 

ಹುಣಸಗಿ(ಯಾದಗಿರಿ) (ಸೆ.14): ಪೋಕ್ಸೋ ಪ್ರಕರಣದಲ್ಲಿ ರಾಜೀ ಪಂಚಾಯ್ತಿ ಗೊಪ್ಪದೆ ಪೋಕೋ ಕಾಯ್ದೆಯಡಿ ದೂರು ದಾಖಲಿಸಿದ್ದರಿಂದ ಆಕ್ರೋಶಗೊಂಡ ಯಾದಗಿರಿಯ ಬಪರಗಾ ಗ್ರಾಮದ ಸವರ್ಣೀಯ ಮುಖಂಡರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ತೆರಳಿ ಶಾಂತಿ ಸಭೆ ನಡೆಸಿದರು. 

Latest Videos

ರಾತ್ರಿವರೆಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಅಧಿಕಾರಿಗಳು ಬಹಿಷ್ಕಾರ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಯಶಸ್ವಿಯಾದರು. ಸವರ್ಣೀಯರ ಯುವಕನೊಬ್ಬ 15 ವರ್ಷದ ದಲಿತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಆಕೆ ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟಿದ್ದ. ಈ ಸಂಬಂಧ ಬಾಲಕಿ ಕುಟುಂಬಸ್ಥರು ಕಳೆದ ತಿಂಗಳು ಆರೋಪಿ ವಿರುದ್ಧ ಪೋಕೋ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ರಾಜೀ ಪಂಚಾ ಯಿಗೆ ಬರುವ ಬದಲು ನೇರವಾಗಿ ಪೊಲೀಸ್ ಠಾಣೆಮೆಟ್ಟಿಲೇರಿದ್ದರಿಂದಸಿಟಿಗೆ ಸವರ್ಣೀಯ ಮುಖಂಡರುಗ್ರಾಮದದಲಿತರಿಗೆ ಅಂಗಡಿಗಳಲ್ಲಿ ದಿನಸಿ ಸೇರಿ ಯಾವುದೇ ವಸ್ತು ಮಾರಾಟ ಮಾಡದಂತೆ ಬಹಿಷ್ಕಾರ ಹಾಕಿದ್ದು, ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. 

ಬಾಲಕಿ ಮೇಲೆ ರೇಪ್‌: ಕೇಸ್‌ ಹಾಕಿದ್ದಕ್ಕೆ ದಲಿತರಿಗೆ ಯಾದಗಿರಿಯಲ್ಲಿ ಬಹಿಷ್ಕಾರ..!

'ಬಾಲಕಿ ಮೇಲೆ ರೇಪ್: 

ಕೇಸ್ ಹಾಕಿದ್ದಕ್ಕೆ ದಲಿ ತರಿಗೆ ಬಹಿಷ್ಕಾರ!' ಶೀರ್ಷಿಕೆಯಡಿ ಶುಕ್ರವಾರ (ಸೆ.13) 'ಕನ್ನಡಪ್ರಭ' ಈ ಕುರಿತು ಮುಖವು ಟದಲ್ಲಿ ವರದಿ ಪ್ರಕಟಿಸಿತ್ತು. ಈ ವರದಿ ನೋಡಿ ಕಾರ್ಯಪ್ರವೃತ್ತವಾದ ಜಿಲ್ಲಾಡಳಿತ ಘಟನೆ ಕುರಿತು ಮಾಹಿತಿ ಸಂಗ್ರಹಿಸಿತು. ನಂತರ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರ ಸೂಚನೆಯಂತೆ ಎಸ್ಪಿ ಸೇರಿ ವಿವಿಧ ಅಧಿಕಾರಿಗಳು ಹುಣಸಗಿ ತಾಲೂಕಿನ ಬಪ್ಪರಗಾ ಗ್ರಾಮಕ್ಕೆ ದೌಡಾಯಿಸಿ ಸಂತ್ರಸ್ತ ಬಾಲಕಿ, ಆಕೆಯ ಕುಟುಂಬ ಸೇರಿ ಸ್ಥಳೀಯರನ್ನು ಭೇಟಿಯಾಗಿ ಶಾಂತಿ ಸಭೆ ನಡೆಸಿದ್ದಲ್ಲದೆ, ಎಲ್ಲರ ಮನವೊಲಿಸಿ ಸೌಹಾರ್ದತ ಯುತವಾಗಿ ಬಹಿಷ್ಕಾರ ಸಮಸ್ಯೆಯನ್ನು ಬಗೆಹರಿಸಿದರು. ಇದಕ್ಕೂ ಮೊದಲು ತಹಸೀಲ್ದಾ‌ರ್, ಸಮಾಜ ಕಲ್ಯಾಣ ಇಲಾಖೆ ಮತ್ತಿತರ ಅಧಿಕಾರಿಗಳು ಸಂತ್ರಸ್ತ ಬಾಲಕಿ, ಆಕೆಯ ಕುಟುಂಬಸ್ಥರು ಹಾಗೂ ಅಲ್ಲಿನ ಜನರೊಡನೆ ಮಾತುಕತೆ ನಡೆಸಿ ಘಟನೆ ಕುರಿತು ಮಾಹಿತಿ ಪಡೆದರು. ಸಂಜೆ ವೇಳೆಗೆ ಎಸ್ಪಿ ಸಂಗೀತಾ ಅವರು ಗ್ರಾಮಕ್ಕೆ ತೆರಳಿ ಸಂಧಾನಕ್ಕೆ ಪ್ರಯತ್ನಿಸಿದರು. ಬಹಿಷ್ಠಾರದಂಥ ಕಾನೂನುಬಾಹಿರ ಕೃತ್ಯಗಳಿಗೆ ಯಾರಾದರೂ ಮುಂದಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಸಂದೇಶವನ್ನೂ ನೀಡಿದರು. 

ಈ ವೇಳೆ ದಲಿತರು ಬಹಿಷ್ಕಾರದಿಂದಾಗುತ್ತಿರುವ ಸಮಸ್ಯೆ ಕುರಿತು ನೋವು ತೋಡಿಕೊಂ ಡರು. ಜತೆಗೆ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದರು. ಬಹಿಷ್ಕಾರ ಹಾಕುವಂತೆ ಅಧಿಕಾರಿ ಗಳನ್ನು ಮನವಿ ಮಾಡಿದರು. ಆ ಸಂದರ್ಭದಲ್ಲಿ ಎಸ್ಪಿ ಸಂಗೀತಾ ಹಾಗೂ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ ಅವರು ರಾತ್ರಿವರೆಗೂ ಗ್ರಾಮಸ್ಥರ ಸಭೆ ನಡೆಸಿ ಬಹಿಷ್ಕಾರ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಯಶಸ್ವಿಯಾದರು. ದಲಿತರು ಮತ್ತು ಸವರ್ಣೀಯ ಮುಖಂಡರನ್ನು ಪರಸ್ಪರ ಹಸ್ತಲಾಘವ ಮಾಡಿಸಿ ಇನ್ನು ಮುಂದೆ ಬಹಿಷ್ಕಾರದಂಥ ಘಟನೆ ಪುನರಾವರ್ತನೆಯಾ ಗದಂತೆ ನೋಡಿಕೊಳ್ಳಬೇಕೆಂದು ಬುದ್ದಿಮಾತು ಹೇಳಿದರು. 

ಯಾದಗಿರಿ: ಮನೆಯ ಛಾವಣಿ ಕುಸಿದು ಬಾಲಕಿ ಸಾವು

ತಹಸೀಲ್ದಾರ್ ಬಸಲಿಂಗಪ್ಪ ನಾಯ್ಯೋಡಿ, ಡಿವೈಎಸ್ಪಿ ಜಾವೀದ್ ಇನಾಂದಾರ್, ಸಮಾಜ ಕಲ್ಯಾಣ ಅಧಿಕಾರಿ ಮೊತ್ತದ್ ಅಲಿ, ಹುಣಸಗಿ ಸಿಪಿಐ ಸಚಿನ್ ಚೆಲವಾದಿ, ನಾರಾಯಣಪುರ ಪಿಎಸ್ ರಾಜಶೇಖರ ರಾಠೋಡ್, ಕೊಡೇಕಲ್ ಪಿಎಸ್ ಆಯಪ, ಸಿಡಿಪಿಓ ಅನಿಲ್ ಕುಮಾರ್ ಕಾಂಬ್ಳೆ ಮತ್ತಿತರ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

17ಕ್ಕೆ ಗ್ರಾಮಕ್ಕೆ ಛಲವಾದಿ ಭೇಟಿ 

ಯಾದಗಿರಿ: ಬಪ್ಪರಗಾ ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣಸ್ವಾಮಿ ಅವರು ಸೆ.17ರಂದು ಗ್ರಾಮಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳ ಮೂಡಿಸಿದೆ ಎಂದಿರುವ ಅವರು, ದಲಿತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ. ದಲಿತರ ಮಕ್ಕಳಿಗೆ ಪೆನ್ನು, ಪುಸ್ತಕ ನೀಡಲೂ ಬಹಿಷ್ಕಾರ ಹಾಕಿರುವುದು ಅಮಾನವೀಯ ಎಂದಿರುವ ಅವರು, ಈ ಕುರಿತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಜತೆಗೆ, ಸೆ.17ರಂದು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತೆ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ! 

ಪೋಕ್ಸೋ ದೂರು ದಾಖಲಿಸಿದ್ದಕ್ಕೆ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಕುರಿತು ಕನ್ನಡಪ್ರಭ' ನಿನ್ನೆ ವರದಿ ಮಾಡಿತು.

click me!