ಕುಷ್ಟಗಿ: ಅಕ್ರಮ ಮರಳು ಗಣಿಗಾರಿಕೆ ವೇಳೆ ಗುಡ್ಡೆ ಕುಸಿದು ವ್ಯಕ್ತಿ ಸಾವು

Kannadaprabha News   | Asianet News
Published : Feb 03, 2021, 12:20 PM IST
ಕುಷ್ಟಗಿ: ಅಕ್ರಮ ಮರಳು ಗಣಿಗಾರಿಕೆ ವೇಳೆ ಗುಡ್ಡೆ ಕುಸಿದು ವ್ಯಕ್ತಿ ಸಾವು

ಸಾರಾಂಶ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂ​ಕಿನ ಹಿರೇ​ನಂದಿ​ಹಾ​ಳ​ದಲ್ಲಿ ನಡೆದ ಘಟ​ನೆ| ಅವ್ಯಾಹತವಾಗಿ ಮುಂದುವರಿದ ಅಕ್ರಮ ಮರಳು ಗಣಿಗಾರಿಕೆ| ಮುಂದು​ವ​ರಿದ ಅಕ್ರಮ| 

ಕುಷ್ಟಗಿ(ಫೆ.03): ತಾಲೂ​ಕಿ​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ಮುಂದುವರಿದಿದ್ದು, ಮಣ್ಣುಗುಡ್ಡೆ ಕುಸಿದು ವ್ಯಕ್ತಿಯೊಬ್ಬ ಸಿಲುಕಿ ಹಾಕಿಕೊಂಡು ಸಾವನ್ನಪ್ಪಿದ ಘಟನೆ ತಾಲೂಕಿನ ಹಿರೇನಂದಿಹಾಳ ಗ್ರಾಮದ ಕೆರೆಯಲ್ಲಿ ನಡೆದಿದೆ.

ಗ್ರಾಮದ ಮಹಾದೇವಪ್ಪ ಮುರಡಿ (45)ಮೃತ ವ್ಯಕ್ತಿ. ಪತ್ನಿ ಲಕ್ಷ್ಮವ್ವ ನೀಡಿದ ದೂರಿನ ಅನ್ವಯ ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ಮಂಗಳ​ವಾರ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಸರ್ಕಲ್‌ ಇನಸ್ಪೆಕ್ಟ​ರ್‌ ನಿಂಗಪ್ಪ ರುದ್ರಪ್ಪಗೋಳ, ಸಬ್‌ ಇನಸ್ಪೆಕ್ಟ​ರ್‌ ತಿಮ್ಮಣ್ಣ ನಾಯಕ ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು.

ನಂತರ ಗ್ರಾಮಸ್ಥರ ಸಹಕಾರದಿಂದ ಮೃತದೇಹವನ್ನು ಹೊರತೆಗೆಯಲಾಯಿತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು. ಗ್ರಾಮದ ವ್ಯಕ್ತಿಯೊಬ್ಬ ರಾತ್ರಿ ವೇಳೆ ಕೆರೆಯಲ್ಲಿ ಮರಳು ಬಗೆಯಲು ಟ್ರ್ಯಾಕ್ಟರ್‌ ಸಹಿತ ಕೂಲಿಕಾರರನ್ನು ಕರೆದುಕೊಂಡು ಹೋಗಿದ್ದರು. ಆದರೆ, ಅಸುರಕ್ಷಿತ ರೀತಿಯಲ್ಲಿ ಗುಂಡಿಗೆ ಇಳಿದು ಮರಳು ತೆಗೆಯುವಾಗ ಮೇಲಿನ ಮಣ್ಣಿನ ಗುಡ್ಡೆ ಕುಸಿದಿದೆ. ಸ್ಥಳದಲ್ಲಿದ್ದ ಇತರರು ವ್ಯಕ್ತಿ​ಗಳು ಸಿಲುಕಿಕೊಂಡ ವ್ಯಕ್ತಿಯನ್ನು ತೆಗೆಯಲು ಮುಂದಾಗಿದ್ದಾರೆ. ಆದರೆ ಆತ ಸಾವಿಗೀಡಾಗಿದ್ದು ತಿಳಿಯುತ್ತಿದ್ದಂತೆ ಪರಾರಿಯಾಗಿದ್ದಾರೆ.

ಕೊಪ್ಪಳ: ಸ್ವತಃ ಚರಂಡಿ ಸ್ವಚ್ಛಗೊಳಿಸಿದ ಗವಿಸಿದ್ಧೇಶ್ವರ ಶ್ರೀ..!

ಮುಂದು​ವ​ರಿದ ಅಕ್ರಮ:

ತಾಲೂಕಿನ ಹಿರೇನಂದಿಹಾಳ, ನಿಡಶೇಸಿ, ವಣಗೇರಿ, ತಾವರಗೇರಾ, ಹನುಮಸಾಗರ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಮರಳುಗಾರಿಕೆ ಮುಂದುವರಿದಿದೆ. ಅಲ್ಲದೆ, ಕೆಲವರು ರಾತ್ರಿ ವೇಳೆ ಅಕ್ರಮ ಮರಳು ಸಾಗಾಣಿಕೆಯಲ್ಲಿ ತೊಡಗಿದ್ದಾರೆ. ಆದರೆ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾತ್ರ ಸೂಕ್ತ ಕಾನೂನು ಕ್ರಮ ಜರುಗಿಸದಿರುವು​ದ​ರಿಂದ ಅಕ್ರಮ ಮರಳು ಸಾಗಾಣಿಕೆ ಮುಂದುವರಿದಿದೆ.
 

PREV
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?