ನರೇಂದ್ರ ಮೋದಿ ಆಹ್ವಾನದ ಮೇರೆಗೆ ದೆಹಲಿಯತ್ತ ಪೇಜಾವರ ಶ್ರೀಗಳು

Published : May 29, 2019, 03:54 PM ISTUpdated : May 29, 2019, 04:08 PM IST
ನರೇಂದ್ರ ಮೋದಿ ಆಹ್ವಾನದ ಮೇರೆಗೆ ದೆಹಲಿಯತ್ತ ಪೇಜಾವರ ಶ್ರೀಗಳು

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ|| ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ| ಮಂಗಳೂರಿಂದ ಇಂದೇ ದೆಹಲಿಗೆ ತೆರಳಲಿರುವ ಪೇಜಾವರ ಸ್ವಾಮೀಜಿ|

ಉಡುಪಿ, (ಮೇ.28): ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ  ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಹ್ವಾನ ಬಂದಿದೆ. 

ನಾಳೆ ಅಂದರೆ ಮೇ 30 ರಂದು ನರೇಂದ್ರ ಮೋದಿ  ಅವರು 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಕಚೇರಿಯಿಂದ ಪೆಜಾವರ ಶ್ರೀಗಳಿಗೆ ಆಹ್ವಾನ ಬಂದಿದೆ.

ಸಿಎಂ ಎಚ್.ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಆಹ್ವಾನ

ಈ ಹಿನ್ನೆಲೆಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಇಂದು (ಬುಧವಾರ) ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಇನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಆಹ್ವಾನ ಬಂದಿದ್ದು, ಗುರುವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ..

ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನ ಮುಂಭಾಗ  ನರೇಂದ್ರ ಮೋದಿ ಅವರು ಪ್ರತಿಜ್ಞೆ ಸ್ವೀಕಾರ ಮಾಡಲಿದ್ಧಾರೆ. ಈ ಬಾರಿ ದರ್ಬಾರ್​ ಹಾಲ್​ ಬದಲು ಫೋರ್​ಕೋರ್ಟ್​ನಲ್ಲಿ ಸಮಾರಂಭ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ದೇಶ-ವಿದೇಶದ ಸುಮಾರು 6,500 ಗಣ್ಯ ಅತಿಥಿಗಳ ಹಾಜರಾಗುವ ಸಾಧ್ಯತೆ ಇದೆ. 

PREV
click me!

Recommended Stories

ಡಾಕ್ಟರ್ ಹೆಸರಿನ ಮುಂದೆ Dr. ಇದ್ದಂತೆ ಇನ್ಮುಂದೆ ಶಿಕ್ಷಕರಿಗೆ Tr, ಸಿಎಂ ಡಿಕೆ ಶಿವಕುಮಾರ್ ಘೋಷಣೆ
ಚಂಡಿಕಾಯಾಗಕ್ಕೂ ಮುನ್ನ ಬೂದೇಶ್ವರ ದೇಗುಲಕ್ಕೆ ಭೇಟಿ ನೀಡಿದ ಸಿಎಂ ಡಿಕೆಶಿ: ಕಾರಣ ಇದೇನಾ?