ಉಗ್ರರ ಹಾವಳಿ: ಶಿವಮೊಗ್ಗದಲ್ಲಿ ಹೈ ಅಲರ್ಟ್‌

By Kannadaprabha NewsFirst Published Aug 18, 2019, 7:39 AM IST
Highlights

ದೇಶದಲ್ಲಿ ಹಲವೆಡೆ ಉಗ್ರ ದಾಳಿ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹಲವೆಡೆ ಈಗಾಗಲೇ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಶಿವಮೊಗ್ಗದಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ(ಆ.18): ದೇಶದಲ್ಲಿ ಹಲವೆಡೆ ಉಗ್ರ ದಾಳಿ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹಲವೆಡೆ ಈಗಾಗಲೇ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಶಿವಮೊಗ್ಗದಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಪರಿಶೀಲನೆ ನಡೆಸಿದ್ದಾರೆ.

ದೇಶದೊಳಕ್ಕೆ ಉಗ್ರರು ನುಗ್ಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಭದ್ರಾ, ಲಿಂಗನಮಕ್ಕಿ, ತುಂಗಾ, ವರಾಹಿ ಸೇರಿದಂತೆ ಪ್ರಮುಖ ಜಲಾಶಯದಲ್ಲಿ ಬೆಚ್ಚಿನ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.

ಉಗ್ರರ ಹಾವಳಿ, ಇಡೀ ಕರ್ನಾಟಕಕ್ಕೆ ಮುನ್ನೆಚ್ಚರಿಕೆ: ಜೋಪಾನ

ನಗರದ ಬಸ್‌ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಅಲ್ಲದೆ ನಗರದ ಲಾಡ್ಜ್‌ಗಳಲ್ಲಿ ತಂಗುವ ವ್ಯಕ್ತಿಗಳ ಬಗ್ಗೆಯೂ ತೀವ್ರ ನಿಗಾ ವಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

click me!