ಕಲಬುರಗಿ: ಅಕ್ರಮ ಮರಳು ಸಾಗಾಟಕ್ಕೆ ಕಾನ್‌ಸ್ಟೇಬಲ್‌ ಬಲಿ, ಕೊಲೆಯೋ, ಆಕಸ್ಮಿಕವೋ?

Published : Jun 16, 2023, 08:46 AM ISTUpdated : Jun 16, 2023, 11:33 AM IST
ಕಲಬುರಗಿ: ಅಕ್ರಮ ಮರಳು ಸಾಗಾಟಕ್ಕೆ ಕಾನ್‌ಸ್ಟೇಬಲ್‌ ಬಲಿ, ಕೊಲೆಯೋ, ಆಕಸ್ಮಿಕವೋ?

ಸಾರಾಂಶ

ಕರ್ತವ್ಯದ ಮೇಲೆ ತೆರಳಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಮಯೂರ ಅವರು ಟ್ರಾಕ್ಟರ್ ತಡೆಯಲು ಹೋಗಿದ್ದಾರೆ. ಈ ವೇಳೆ ಮಯೂರ ಅವರ ಮೇಲೆ ಟ್ರಾಕ್ಟರ್ ಹತ್ತಿಸಲಾಗಿದೆ. ಹೀಗಾಗಿ ಟಯರನಡಿ ಸಿಲುಕಿ ಪೇದೆ ಮಯೂರ ಸಾವನ್ನಪ್ಪಿದ್ದಾರೆ.  

ಕಲಬುರಗಿ(ಜೂ.16): ಅಕ್ರಮ ಮರಳು ಸಾಗಣಿಕೆಗೆ ಕಾನ್‌ಸ್ಟೇಬಲ್‌ವೊಬ್ಬರು ಬಲಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನಾರಾಯಣಪೂರ ಬಳಿ ನಡೆದಿದೆ. ನೆಲೋಗಿ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಯೂರ (50) ಮೃತ ದುರ್ದೈವಿಯಾಗಿದ್ದಾರೆ. 

ಕರ್ತವ್ಯದ ಮೇಲೆ ತೆರಳಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಮಯೂರ ಅವರು ಟ್ರಾಕ್ಟರ್ ತಡೆಯಲು ಹೋಗಿದ್ದಾರೆ. ಈ ವೇಳೆ ಮಯೂರ ಅವರ ಮೇಲೆ ಟ್ರಾಕ್ಟರ್ ಹತ್ತಿಸಲಾಗಿದೆ. ಹೀಗಾಗಿ ಟಯರನಡಿ ಸಿಲುಕಿ ಪೇದೆ ಮಯೂರ ಸಾವನ್ನಪ್ಪಿದ್ದಾರೆ. 

ಮಣಿಪುರ ಗಲಾಟೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ಇದು ಆಕಸ್ಮಿಕ ಅಪಘಾತವೋ ಇಲ್ಲವೇ ಮರಳು ಲೂಟಿಕೋರರಿಂದ ಉದ್ದೇಶ ಪೂರ್ವಕವಾಗಿ ನಡೆದ ಹತ್ಯೆಯೋ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಪೊಲೀಸ್ ಕಾನ್‌ಸ್ಟೇಬಲ್ ಸಾವಿಗೆ ಕಾರಣ ತಿಳಿದು ಬರಬೇಕಿದೆ. ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ