ಪೊಲೀಸರ ಮೇಲೆಯೇ ಮಾರಕಾಸ್ತ್ರದಿಂದ ಹಲ್ಲೆ: ಆರೋಪಿ ಮೇಲೆ ಫೈರಿಂಗ್‌

Suvarna News   | Asianet News
Published : Apr 16, 2020, 10:27 AM IST
ಪೊಲೀಸರ ಮೇಲೆಯೇ ಮಾರಕಾಸ್ತ್ರದಿಂದ ಹಲ್ಲೆ: ಆರೋಪಿ ಮೇಲೆ ಫೈರಿಂಗ್‌

ಸಾರಾಂಶ

ಡಬಲ್ ಮರ್ಡರ್ ಆರೋಪಿ ಮೇಲೆ ಪೊಲೀಸರ ಫೈರಿಂಗ್| ಬೆಂಗಳೂರಿನಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು| ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಕಾಲಿಗೆ ಗುಂಡು| ಕುಮಾರಸ್ವಾಮಿ ಲೇಔಟ್ ನ ದೇವರ ಕೆರೆ ಬಳಿ ಘಟನೆ|  

ಬೆಂಗಳೂರು(ಏ.16): ಡಬಲ್ ಮರ್ಡರ್ ಆರೋಪಿಯನ್ನ ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಕುಮಾರಸ್ವಾಮಿ ಲೇಔಟ್‌ನ ದೇವರ ಕೆರೆ ಬಳಿ ನಡೆದಿದೆ. ಈ ವೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ. 

ಈ ವೇಳೆ ಆರೋಪಿ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಕಾಲಿಗೆ ಗುಂಡು ತಗುಲಿದೆ.  ಮೊನ್ನೆಯಷ್ಟೆ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ ಮಾಡಿದ್ದ ಆರೋಪಿಯಾಗಿದ್ದಾನೆ. ಆರೋಪಿ ಸುಳಿವಿನ ಮೆರೆಗೆ ಪೊಲೀಸರು ಬಂಧಿಸಲು ಹೋಗಿದ್ದರು. ಈ ವೇಳೆ ಸುಬ್ರಮಣ್ಯ ಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಮಧು ಅವರ ಮೇಲೆ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಮುಂದಾಗಿದ್ದನು. 

ಬೆಳಗಾವಿ: ಸಾರ್ವಜನಿಕ ಪ್ರದೇಶದಲ್ಲಿ ಪೊಲೀ​ಸರ ಮುಂದೆಯೇ ಫೈರಿಂಗ್..!

ಆಗ ಕೋಣನಕುಂಟೆ ಇನ್ಸ್‌ಪೆಕ್ಟರ್‌ ಧರ್ಮೇಂದ್ರ ಅವರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಇದೇ ಏಪ್ರಿಲ್ 12 ರಂದು ರೌಡಿ ಮುಕುಂದ @ ಕರಿಹಂದಿ ಹಾಗೂ ಮನೋಜ್‌ನನ್ನು ಸಂಜಯ್ ಮತ್ತು ಅವನ ತಂಡ ಹತ್ಯೆಗೈದಿದ್ದರು ಎಂದು ಆರೋಪಿಸಲಾಗಿದೆ. ಅದೃಷ್ಟವಷಾತ್‌ ಪೊಲೀಸ್‌ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
 

PREV
click me!

Recommended Stories

ಗೆಳೆಯರ ಶವ ನೋಡಿ ಶವಾಗಾರದಿಂದ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಸ್ನೇಹಿತ
ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕ್ಕೆ ‘ಹೈ’ ಕಿಡಿ