ಚಂದ್ರಯಾನ ಟೀಕಿಸಿದ ಪ್ರಕಾಶ್‌ ರೈ ದೇಶ ಬಿಟ್ಟು ಹೋಗಲಿ: ಸಚಿವೆ ಶೋಭಾ ಕರಂದ್ಲಾಜೆ

Published : Aug 24, 2023, 03:00 AM IST
ಚಂದ್ರಯಾನ ಟೀಕಿಸಿದ ಪ್ರಕಾಶ್‌ ರೈ ದೇಶ ಬಿಟ್ಟು ಹೋಗಲಿ: ಸಚಿವೆ ಶೋಭಾ ಕರಂದ್ಲಾಜೆ

ಸಾರಾಂಶ

ಪ್ರಕಾಶ್‌ ರೈ ಅವರು ಚಂದ್ರಯಾನದಂಥ ವಿಷಯವನ್ನು ಗೇಲಿ, ತಮಾಷೆ ಮಾಡಿರುವುದು, ನಮ್ಮ ವಿಜ್ಞಾನಿಗಳಿಗೆ ಮಾಡಿದ ಅಪಮಾನ, ಭಾರತಕ್ಕೆ ಮಾಡುತ್ತಿರುವ ಅಪಮಾನ ಎಂದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ರೈತ, ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ 

ಉಡುಪಿ(ಆ.24):  ಇಡೀ ವಿಶ್ವವೇ ಭಾರತದ ಇಸ್ರೋವನ್ನು ಕೊಂಡಾಡುತ್ತಿದೆ, ಆದರೆ ನಟ ಪ್ರಕಾಶ್‌ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ. ಅಂಥವರು ಭಾರತದಲ್ಲಿ ಇರಬೇಕಾದ ಅವಶ್ಯಕತೆ ಇಲ್ಲ, ಅವರು ಭಾರತ ಬಿಟ್ಟು ಹೋಗಲಿ ಎಂದು ಕೇಂದ್ರ ರೈತ, ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕಾಶ್‌ ರೈ ಅವರು ಚಂದ್ರಯಾನದಂಥ ವಿಷಯವನ್ನು ಗೇಲಿ, ತಮಾಷೆ ಮಾಡಿರುವುದು, ನಮ್ಮ ವಿಜ್ಞಾನಿಗಳಿಗೆ ಮಾಡಿದ ಅಪಮಾನ, ಭಾರತಕ್ಕೆ ಮಾಡುತ್ತಿರುವ ಅಪಮಾನ ಎಂದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 

ಚಂದ್ರಯಾನ-3: ಪ್ರತಿಯೊಬ್ಬ ದೇಶವಾಸಿಗೂ ಹೆಮ್ಮೆಯ ಕ್ಷಣ, ಸಚಿವ ಸತೀಶ್ ಜಾರಕಿಹೊಳಿ

ಪ್ರಕಾಶ್‌ ರೈ ಭಾರತವನ್ನು ಪ್ರೀತಿಸುವುದಿಲ್ಲ, ಆದರೆ ಅವರಿಗೆ ಭಾರತದ ಗಾಳಿ, ನೀರು, ಅನ್ನ ಬೇಕು, ಅವರ ದೇಹ ಮಾತ್ರ ಇಲ್ಲಿದೆ, ಮನಸ್ಸು ಬೇರೆಲ್ಲೋ ಇದೆ. ಆದ್ದರಿಂದ ಅವರು ಭಾರತದ ಬಗ್ಗೆ ಇಷ್ಟು ದುಃಖಪಟ್ಟು ಇಲ್ಲಿರಬೇಕಾದ ಅವಶ್ಯಕತೆ ಇಲ್ಲ, ಅವರ ಮನಸ್ಸು ಎಲ್ಲಿದೆಯೋ ಅಲ್ಲಿಗೆ ಹೋಗಲಿ ಎಂದರು.

PREV
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!