ನರಳಿ ನಾಲ್ಕು ತಿಂಗಳ ಗರ್ಭಿಣಿ ಕಾಡಾನೆ ಸಾವು

Suvarna News   | Asianet News
Published : Aug 18, 2020, 07:33 AM ISTUpdated : Aug 18, 2020, 08:31 AM IST
ನರಳಿ ನಾಲ್ಕು ತಿಂಗಳ ಗರ್ಭಿಣಿ ಕಾಡಾನೆ ಸಾವು

ಸಾರಾಂಶ

ನಾಲ್ಕು ತಿಂಗಳ ಗರ್ಭಿಣಿ ಹೆಣ್ಣಾನೆಯೊಂದು ನರಳಿ ಪ್ರಾಣ ಬಿಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ. 

ಮಡಿಕೇರಿ (ಆ.18): ನಾಲ್ಕು ತಿಂಗಳ ಗರ್ಭಿಣಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ಬೈರಂಬಾಡದಲ್ಲಿ ಸೋಮವಾರ ಬೆಳಕಿಗೆ ಬಂದಿದೆ.

ಬೈರಂಬಾಡ ಗ್ರಾಮದ ಮುಕ್ಕಾಟಿರ ರಂಜನ್‌ ಎಂಬವರ ಕಾಫಿ ತೋಟದಲ್ಲಿ ಕಳೆದ ಎರಡು ದಿನಗಳಿಂದ ಹೆಣ್ಣಾನೆಯೊಂದು ನೋವಿನಲ್ಲಿ ನರಳಾಡುತ್ತಿತ್ತು. ಆನೆಗೆ ಚಿಕಿತ್ಸೆ ನೀಡುವ ಸಲುವಾಗಿ ಅರಣ್ಯಾಧಿಕಾರಿಗಳು ತೆರಳಿದ್ದ ಸಂದರ್ಭ ಕಾಡಾನೆ ಸ್ಪಂದಿಸಲಿಲ್ಲ.

 ನೋವು ತಾಳಲಾರದೆ ತೋಟದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ ಎಂದು ಅರಣ್ಯ ಅಧಿಕಾರಿ ರೋಶಿನಿ ತಿಳಿಸಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯ ಮುಜೀಬ್‌ ನೆರವೇರಿಸಿದರು. ಆನೆಯ ಅಂತ್ಯಸಂಸ್ಕಾರವನ್ನು ತೋಟದಲ್ಲೇ ನೆರವೇರಿಸಲಾಗಿದೆ. ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಮನೋಜ್…, ಸಚಿನ್, ಸಂಜಿತ್‌ ಸೇರಿದಂತೆ ಅರಣ್ಯ ಇಲಾಖೆಯ ರಾರ‍ಯಪಿಡ್‌ ರೆಸ್ಪಾನ್‌ ಟೀಂ ಪಾಲ್ಗೊಂಡಿತ್ತು.

PREV
click me!

Recommended Stories

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ನಾಗರ ಹಾವು ಆಯ್ತು, ಈಗ ದಿಢೀರ್ ಕೋತಿಗಳ ಸೈನ್ಯವೇ ಪ್ರತ್ಯಕ್ಷ!
ಮೈಷುಗರ್ ಕಾರ್ಖಾನೆ ಅವ್ಯವಹಾರ, ಮಹಾರಾಷ್ಟ್ರದ ಅಧಿಕಾರಿಯ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಆದೇಶ