ಬೆಂಗಳೂರು: ಗರ್ಭಿಣಿಗೆ ಲಾರಿ ಡಿಕ್ಕಿ, ಹೊಟ್ಟೆಯಿಂದ ಬಂದ ಮಗು ವಿಲವಿಲ ಒದ್ದಾಡಿ ಸಾವು..!

Published : Aug 08, 2024, 09:04 AM ISTUpdated : Aug 08, 2024, 11:19 AM IST
ಬೆಂಗಳೂರು: ಗರ್ಭಿಣಿಗೆ ಲಾರಿ ಡಿಕ್ಕಿ, ಹೊಟ್ಟೆಯಿಂದ ಬಂದ ಮಗು ವಿಲವಿಲ ಒದ್ದಾಡಿ ಸಾವು..!

ಸಾರಾಂಶ

ಮಂಜುನಾಥ್ ಪತ್ನಿಯನ್ನು ಕರೆದುಕೊಂಡು ಶಿವಗಂಗೆಯ ಹರಕೆ ಗಣಪತಿ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ವಾಪಸ್ ಬರುತ್ತಿದ್ದಾಗ ವೇಗವಾಗಿ ಬಂದ ಟಿಪ್ಪ‌ಲಾರಿ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದ ಸಿಂಚನಾ ಮೇಲೆ ಟಿಪ್ಪ‌ರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ.

ದಾಬಸ್‌ಪೇಟೆ(ಆ.08):  ನೆಲಮಂಗಲದ ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಬುಧವಾರ ಬೆಳಗ್ಗೆ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. 

ಹೊಟ್ಟೆಯಲ್ಲಿದ್ದ 8 ತಿಂಗಳ ಭ್ರೂಣ ಹೊರ ಬಂದು, ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ತೋಟನಹಳ್ಳಿ ಗ್ರಾಮದ ಸಿಂಚನಾ (30) ಮೃತರು. ಸ್ಕೂಟರ್ ಚಾಲನೆ ಮಾಡುತ್ತಿದ್ದ ಸಿಂಚನಾ ಪತಿ ಮಂಜುನಾಥ್ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. 

ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ: ಬಾಲ್ಯದಿಂದಲೂ ಜೊತೆಯಾಗಿದ್ದ ಸ್ನೇಹಿತರು ಸಾವಿನಲ್ಲೂ ಒಂದಾದರು!

ಮಂಜುನಾಥ್ ಪತ್ನಿಯನ್ನು ಕರೆದುಕೊಂಡು ಶಿವಗಂಗೆಯ ಹರಕೆ ಗಣಪತಿ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ವಾಪಸ್ ಬರುತ್ತಿದ್ದಾಗ ವೇಗವಾಗಿ ಬಂದ ಟಿಪ್ಪ‌ಲಾರಿ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದ ಸಿಂಚನಾ ಮೇಲೆ ಟಿಪ್ಪ‌ರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ.

PREV
Read more Articles on
click me!

Recommended Stories

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ; ಪೊಲೀಸ್ ಠಾಣೆಗೆ ನುಗ್ಗಿದ ಗುಂಪಿನ ಮೇಲೆ ಲಾಠಿ ಚಾರ್ಜ್, 49 ಜನರ ಮೇಲೆ ಎಫ್‌ಐಆರ್!
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ! ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಬರ್ತಿದ್ದಂತೆ ಅಲರ್ಟ್