ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಹಿಂದೂ ಧರ್ಮಕ್ಕೆ ವಾಪ್ಸಿ

Published : Aug 21, 2022, 07:45 AM ISTUpdated : Aug 21, 2022, 10:07 AM IST
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಹಿಂದೂ ಧರ್ಮಕ್ಕೆ ವಾಪ್ಸಿ

ಸಾರಾಂಶ

ಓಂಕಾರೇಶ್ವರ ದೇವಾಲಯ ಅರ್ಚಕ ದಿ.ರೇಣುಕಾರಾಧ್ಯ ಎಂಬುವರ ಪುತ್ರ ಎಚ್‌.ಆರ್‌. ಚಂದ್ರಶೇಖರಯ್ಯ ಅಲಿಯಾಸ್‌ ಮಂಜಣ್ಣ ಎಂಬುವರು ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು. 

ತುಮಕೂರು(ಆ.21):  ಹಿಂದೂ ದೇವಾಲಯದ ಅರ್ಚಕರೊಬ್ಬರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಎರಡು ದಿವಸದೊಳಗೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸೊಗಡು ಶಿವಣ್ಣ ನೇತೃತ್ವದಲ್ಲಿ ಪುನಃ ಹಿಂದೂ ಧರ್ಮಕ್ಕೆ ವಾಪಾಸ್‌ ಕರೆ ತಂದ ಘಟನೆ ನಡೆದಿದೆ.

ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯ ಅರ್ಚಕ ದಿ.ರೇಣುಕಾರಾಧ್ಯ ಎಂಬುವರ ಪುತ್ರ ಎಚ್‌.ಆರ್‌. ಚಂದ್ರಶೇಖರಯ್ಯ ಅಲಿಯಾಸ್‌ ಮಂಜಣ್ಣ ಎಂಬುವರು ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಮತಾಂತರಗೊಂಡಿದ್ದ ಚಂದ್ರಶೇಖರಯ್ಯ ಅವರು ತಮ್ಮ ಹೆಸರನ್ನು ಮುಬಾರಕ್‌ ಪಾಷಾ ಎಂದು ಬದಲಾಯಿಸಿಕೊಂಡಿದ್ದು ವೈಯಕ್ತಿಕ ಕಾರಣದಿಂದ ತಮ್ಮ ಸ್ವಇಚ್ಛೆಯಿಂದ ಮತಾಂತರಗೊಂಡಿರುವುದಾಗಿ ಹೇಳಿಕೊಂಡಿದ್ದರು. ಈ ವಿಷಯ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಗಮನಕ್ಕೆ ಬಂದ ಕೂಡಲೇ ಆತನನ್ನು ತಮ್ಮ ಕಚೇರಿಗೆ ಕರೆಸಿ ಬುದ್ದಿವಾದ ಹೇಳಿ ಪುನಃ ಹಿಂದೂ ಧರ್ಮಕ್ಕೆ ವಾಪಾಸ್‌ ಕರೆ ತಂದಿದ್ದಾರೆ.

Chitradurgaದಲ್ಲಿ ಇನ್ನೂ ನಿಲ್ಲದ ಬಲವಂತದ ಮತಾಂತರ!

ಶನಿವಾರ ಸಂಜೆ ತಮ್ಮ ಕಚೇರಿಯಲ್ಲಿ ಆತನಿಗೆ ಹಿಂದೂ ಧರ್ಮದ ಶ್ರೇಷ್ಠತೆ ಬಗ್ಗೆ ತಿಳಿ ಹೇಳಿ ಬುದ್ದಿವಾದ ಹೇಳಿದರು. ಬಳಿಕ ವ್ಯಾಸರಾಯ ಮಠದ ವಿದ್ಯಾಶ್ರೀಶ ತೀರ್ಥ ಶ್ರೀಪಾದಂಗಳವರ ಬಳಿ ಮಂತ್ರಾಕ್ಷತೆ ಕೊಡಿಸುವುದರೊಂದಿಗೆ ಮಾತೃ ಧರ್ಮಕ್ಕೆ ಕರೆ ತಂದರು.
 

PREV
Read more Articles on
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ