ಐಹೊಳೆ ರಕ್ಷಣೆಗೆ ಮೋದಿಗೆ ಪತ್ರ ಬರೆದ ಯುವಕ: ಪ್ರಧಾನಿ ಕಚೇರಿಯಿಂದ ಬಂತು ಉತ್ತರ!

Kannadaprabha News   | Asianet News
Published : Mar 02, 2020, 03:04 PM ISTUpdated : Mar 02, 2020, 04:40 PM IST
ಐಹೊಳೆ ರಕ್ಷಣೆಗೆ ಮೋದಿಗೆ ಪತ್ರ ಬರೆದ ಯುವಕ: ಪ್ರಧಾನಿ ಕಚೇರಿಯಿಂದ ಬಂತು ಉತ್ತರ!

ಸಾರಾಂಶ

ಐಹೊಳೆ ರಕ್ಷಣೆಗೆ ಕ್ರಮಕೈಗೊಳ್ಳಲು ಮೋದಿಗೆ ಬರೆದ ಪತ್ರಕ್ಕೆ ಸ್ಪಂದನೆ| ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಐತಿಹಾಸಿ ತಾಣ ಐಹೊಳೆ|ಸೂಳಿಬಾವಿ ಗ್ರಾಮದ ಪ್ರಕಾಶ ಕಡೂರ ಪ್ರಧಾನಿಗೆ ಪತ್ರ ಬರೆದ ಯುವಕ|ಪ್ರಕಾಶ ಕಡೂರಗೆ ಪ್ರಧಾನಿ ಕಚೇರಿಯಿಂದ ಸೂಕ್ತ ಸ್ಪಂದನೆ|

ಬಾಗಲಕೋಟೆ[ಮಾ.02]: ಜಿಲ್ಲೆಯ ಐತಿಹಾಸಿಕ ತಾಣವಾಗಿರುವ ಐಹೊಳೆ ಗ್ರಾಮದ ರಕ್ಷಣೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಜಿಲ್ಲೆಯ ಹುನಗುಂದ ತಾಲೂಕಿನ ಸೂಳಿಬಾವಿ ಗ್ರಾಮದ ಪ್ರಕಾಶ ಕಡೂರಗೆ ಪ್ರಧಾನಿ ಕಚೇರಿಯಿಂದ ಸೂಕ್ತ ಸ್ಪಂದನೆ ದೊರಕಿದೆ. 

"

ಪ್ರವಾಹದಿಂದ ಮುಳುಗಡೆಯಾಗಿದ್ದ ಪಾರಂಪರಿಕ ತಾಣ ಐಹೊಳೆ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಎಂದು ಅ.10 ರಂದು ಪ್ರಧಾನಿಗೆ ಪತ್ರ ಬರೆದಿದ್ದ ಪ್ರಕಾಶ ಕಡೂರ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಉತ್ತರ ಬಂದಿದೆ. ಐಹೊಳೆಯಲ್ಲಿ ಚಾಲುಕ್ಯರ ಕಾಲದ 125ಕ್ಕೂ ಹೆಚ್ಚು ದೇಗುಲಗಳಿದ್ದೂ ಮಲಪ್ರಭಾ ನದಿಯಿಂದ ಪ್ರವಾಹ ಉಂಟಾದ ಸಂದರ್ಭದಲ್ಲಿ ಮುಳುಗಡೆಯಾಗಿದ್ದರಿಂದ ಗ್ರಾಮದ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕೆಂಬ ಮನವಿಯನ್ನು ಪತ್ರದಲ್ಲಿ ಮಾಡಲಾಗಿತ್ತು. 

ಇದೀಗ ಪ್ರಧಾನಿ ಕಾರ್ಯಾಲಯದಿಂದ ಯುವಕನ ದೂರು ಗಮನಿಸಿ ಧಾರವಾಡದ ಪುರಾತತ್ವ ಇಲಾಖೆಯ ಅಧೀಕ್ಷಕರಿಗೆ ಐಹೊಳೆ ಸ್ಥಳಾಂತರದ ಕುರಿತು ಸಲಹೆಗಳನ್ನು ಪ್ರಧಾನಿ ಕಾರ್ಯಾಲಯ ನೀಡಿದೆ. ಹೀಗಾಗಿ ಪತ್ರ ಬರೆದ ಪ್ರಕಾಶ ಕಡೂರಗೆ ಪ್ರಧಾನಿ ಕಾರ್ಯಾಲಯದ ಸ್ಪಂದನೆ ಸಂತಸ ತಂದಿದೆ.

PREV
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!