ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಬೆಂಗಳೂರಿಗೆ ಬರುತ್ತಿದ್ದ ಬಸ್

Published : Sep 14, 2019, 11:22 AM IST
ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಬೆಂಗಳೂರಿಗೆ ಬರುತ್ತಿದ್ದ ಬಸ್

ಸಾರಾಂಶ

ಬೆಂಗಳೂರಿಗೆ ಆಗಮಿಸುತ್ತಿದ್ದ ಬಸ್ ಒಂದು ತುಮಕೂರಿನಲ್ಲಿ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದಿದೆ. 

ತುಮಕೂರು [ಸೆ.14]: ಸಂಚರಿಸುತ್ತಿದ್ದ ವೇಳೆಯೇ ರಸ್ತೆಯಲ್ಲಿ ಖಾಸಗಿ ಬಸ್ ಒಂದು ಏಕಾ ಏಕಿ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಯಾದಗಿರಿಯ ಕೆಂಬಾವಿಯಿಂದ  ಬೆಂಗಳೂರಿಗೆ ಆಗಮಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ರಾಯಲ್ ಹೆಸರಿನ ಖಾಸಗಿ ಬಸ್ ಹೊತ್ತಿ ಉರಿದಿದೆ. 

ಬಸ್ ಏಕಾ ಏಕಾ ಹೊತ್ತಿ ಉರಿದಿದ್ದರಿಂದ ಬೆಂಕಿಯಲ್ಲಿ ಓರ್ವ ಮಹಿಳೆ ಹೆಚ್ಚು ಗಾಯಗೊಂಡಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಕಿ ತಗುಲುತ್ತಿದ್ದಂತೆ ಪ್ರಯಾಣಿಕರು ಕಿರುಚಾಡಿದ್ದು, ಈ ವೇಳೆ ಎಲ್ಲರೂ ತಕ್ಷಣವೇ ಬಸ್ ನಿಂದ ಇಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಬಸ್ ಕ್ಷಣಾರ್ಧದಲ್ಲಿ ಬಸ್ ಸುಟ್ಟು ಕರಕಲಾಗಿದೆ. 

PREV
click me!

Recommended Stories

Tumakuru: ಏಕಕಾಲದಲ್ಲಿ ಹಲವು ಇಲಾಖೆಗಳ ಸಚಿವರಾಗಿದ್ದ ಹಿರಿಯ ನಾಯಕ ಸಿ. ವೀರಪ್ಪ ನಿಧನ
‘ವಿಸ್ಕಿ, ಬಿಯರ್ ಹಾಗೂ ರಮ್.. ಸ್ವಾಮಿ.. ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ, ಸರ್ಕಾರದ ವಿರುದ್ಧ ಕೋರ್ಟ್ ಗರಂ