ಮೈಸೂರು ಮೃಗಾಲಯ ಸಂಕಷ್ಟಕ್ಕೆ ನೆರವಾದ ಖಾಸಗಿ ಕಾಲೇಜಿನ ಪ್ರಾಂಶುಪಾಲೆ

Suvarna News   | Asianet News
Published : Apr 30, 2020, 03:31 PM ISTUpdated : Apr 30, 2020, 03:57 PM IST
ಮೈಸೂರು ಮೃಗಾಲಯ ಸಂಕಷ್ಟಕ್ಕೆ ನೆರವಾದ ಖಾಸಗಿ ಕಾಲೇಜಿನ ಪ್ರಾಂಶುಪಾಲೆ

ಸಾರಾಂಶ

ಲಾಕ್‌ಡೌನ್‌ನಿಂದ ಪ್ರವಾಸಿಗರಿಲ್ಲದೆ ಮೈಸೂರು ಮೃಗಾಲಯದಲ್ಲಿ ವೆಚ್ಚಗಳನ್ನು ಭರಿಸುವುದು ಕಷ್ಟವಾಗಿರುವ ಬಗ್ಗೆ ಮೃಗಾಲಯದಿಂದ ಸಾರ್ವಜನಿಕರ ನೆರವು ಕೇಳಲಾಗಿತ್ತು. ಇದಕ್ಕೆ ಸ್ಪಂದಿಸಿದ ಖಾಸಗಿ ಕಾಲೇಜಿನ ಪ್ರಾಂಶುಪಾಲೆಯೊಬ್ಬರು ಆರ್ಥಿಕ ನೆರವು ನೀಡಿದ್ದಾರೆ.  

ಮೈಸೂರು(ಏ.30): ಲಾಕ್‌ಡೌನ್‌ನಿಂದ ಪ್ರವಾಸಿಗರಿಲ್ಲದೆ ಮೈಸೂರು ಮೃಗಾಲಯದಲ್ಲಿ ವೆಚ್ಚಗಳನ್ನು ಭರಿಸುವುದು ಕಷ್ಟವಾಗಿರುವ ಬಗ್ಗೆ ಮೃಗಾಲಯದಿಂದ ಸಾರ್ವಜನಿಕರ ನೆರವು ಕೇಳಲಾಗಿತ್ತು. ಇದಕ್ಕೆ ಸ್ಪಂದಿಸಿದ ಖಾಸಗಿ ಕಾಲೇಜಿನ ಪ್ರಾಂಶುಪಾಲೆಯೊಬ್ಬರು ಆರ್ಥಿಕ ನೆರವು ನೀಡಿದ್ದಾರೆ.

ಮೃಗಾಲಯ ಸಂಕಷ್ಟಕ್ಕೆ ನೆರವಾದ ಖಾಸಗಿ ಕಾಲೇಜಿನ ಪ್ರಾಂಶುಪಾಲೆ ಮೈಸೂರು ಮೃಗಾಲಯಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ ಸೆಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲೆ ನಿವೇದಿತಾ ಲೋಕೇಶ್ ಸಹಾಯ ಮಾಡಿದ್ದಾರೆ.

ಮೊದಲ ಬಾರಿ ಜನರ ನೆರವು ಕೇಳಿದ ಮೈಸೂರು ಮೃಗಾಲಯ..!

ತಮ್ಮ ವೈಯುಕ್ತಿಕ ಹಣದಿಂದ‌ ಒಂದು ಲಕ್ಷ ದೇಣಿಗೆ ನೀಡಿದ್ದು, ಮೃಗಾಲಯ ಸಂಕಷ್ಟದಲ್ಲಿದೆ ಎಂದು ತಿಳಿದು ಸಹಾಯಕ್ಕೆ ನೆರವಾಗಿದ್ದಾರೆ. ನಿವೇದಿತಾ ಮೃಗಾಲಯ ನಿರ್ದೇಶಕರಿಗೆ ಚೆಕ್ ಹಸ್ತಾಂತರ ಮಾಡಿದ್ದಾರೆ.

ಮೃಗಾಲಯದಲ್ಲಿ ವಿದ್ಯುತ್, ನೀರು ಆಹಾರ ಸೇರಿ ಎಲ್ಲದಕ್ಕೂ ಸಮಸ್ಯೆಯಾಗಿದ್ದು, ನಿರ್ವಹಣೆಗೆ ತಿಂಗಳಿಗೆ ಸುಮಾರು 2 ಕೋಟಿ ರೂಪಾಯಿ ಖರ್ಚಾಗುತ್ತದೆ. ಆದರೆ ಲಾಕ್‌ಡೌನ್‌ನಿಂದ ಮೃಗಾಲಯ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಮೃಗಾಲಯದಿಂದ ಸಾರ್ವಜನಿಕೆ ನೆರವು ಕೋರಲಾಗಿತ್ತು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!