ಮಂಗಳೂರು ಸೇರಿ 4 ಜಿಲ್ಲೆಗಳಲ್ಲಿ ರಾಮಮಂದಿರ ಹೋರಾಟಕ್ಕೆ ಸಿದ್ದತೆ

Published : Nov 13, 2018, 12:31 PM ISTUpdated : Nov 13, 2018, 12:43 PM IST
ಮಂಗಳೂರು ಸೇರಿ 4 ಜಿಲ್ಲೆಗಳಲ್ಲಿ ರಾಮಮಂದಿರ ಹೋರಾಟಕ್ಕೆ ಸಿದ್ದತೆ

ಸಾರಾಂಶ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡಿನಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ. ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶಗಳನ್ನು ಮಂಗಳೂರು ವಿಭಾಗದ ನಾಲ್ಕು ಕಡೆ ಆಯೋಜಿಸಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಎಂ. ಬಿ. ಪುರಾಣಿಕ್ ತಿಳಿಸಿದ್ದಾರೆ.

ಮಂಗಳೂರು[ನ.13]: ಮಂಗಳೂರು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಬೃಹತ್ ರಾಮಮಂದಿರ ಹೋರಾಟಕ್ಕೆ ಸಿದ್ದತೆ ನಡೆದಿದೆ. ಇದಕ್ಕಾಗಿ ಬೃಹತ್ ಮಟ್ಟದ ಸಮಾವೆಶವನ್ನೂ ಆಯೋಜಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡಿನಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ. ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶಗಳನ್ನು ಮಂಗಳೂರು ವಿಭಾಗದ ನಾಲ್ಕು ಕಡೆ ಆಯೋಜಿಸಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಎಂ. ಬಿ. ಪುರಾಣಿಕ್ ತಿಳಿಸಿದ್ದಾರೆ.

ನವೆಂಬರ್ 25ರಂದು ಮಂಗಳೂರು, 18ರಂದು ಕಾಸರಗೋಡು, 30ರಂದು ಕೊಡಗು ಮತ್ತು ಡಿಸೆಂಬರ್ 2 ರಂದು ಉಡುಪಿಯಲ್ಲಿ ಸಮಾವೇಶಗನ್ನು ಆಯೋಜಿಸಲಾಗಿದ್ದು, ದೇಶದ ಪ್ರಮುಖ ಸಾಧು-ಸಂತರು ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಶೀಘ್ರದಲ್ಲೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದು ಪುರಾಣಿಕ್ ತಿಳಿಸಿದ್ದಾರೆ.

PREV
click me!

Recommended Stories

ಬೆಳ್ತಂಗಡಿ ಬಾಲಕ ಸುಮಂತ್ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್ : ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
ಮಂಗಳೂರಿನಿಂದ ಮರವಂತೆಗೆ ಇನ್ನು 110 ಕಿ.ಮೀ ಕರಾವಳಿ ದೋಣಿ ಜಾಲ, ಈ ಐದು ಸ್ಥಳಗಳಲ್ಲಿ ಇರಲಿದೆ ಸ್ಟಾಪ್‌!