ಮೈಸೂರು ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

By Kannadaprabha NewsFirst Published Apr 22, 2021, 12:57 PM IST
Highlights

ರಾಜ್ಯದಲ್ಲಿ ಮಹಮಾರಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಗತಿಯಲ್ಲಿ ಸಾಗುತ್ತಿದ್ದು ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. 

ಮೈಸೂರು (ಏ.22): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ.  ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಮುಖ ದೇವಾಲಗಳ ಪ್ರವೇಶ ನಿಷೇಧಿಸಲಾಗಿದೆ. 

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ  ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಗಮನಿಸಿ : ನಾಡಿನ ಪ್ರಮುಖ ದೇಗುಲಗಳಿಗೆ ಸಾರ್ವಜನಿಕ ಪ್ರವೇಶ ಬಂದ್‌ ..

ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದ್ದಾರೆ.

click me!