ಗದಗ ಬಸ್‌ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿ ಹೆಸರು

Kannadaprabha News   | Asianet News
Published : Nov 25, 2020, 07:55 AM IST
ಗದಗ ಬಸ್‌ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿ ಹೆಸರು

ಸಾರಾಂಶ

 ಗದಗ ಪಟ್ಟಣದ  ಬಸ್‌ ನಿಲ್ದಾಣಕ್ಕೆ ಪಂ ಪುಟ್ಟರಾಜ ಗವಾಯಿ ಅವರ ಹೆಸರು ನಾಮಕರಣ ಮಾಡಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ   ಸವದಿ ತಿಳಿಸಿದ್ದಾರೆ. 

ಬೆಂಗಳೂರು (ನ.25):  ಗದಗ ಪಟ್ಟಣದ ನವೀಕೃತ ಬಸ್‌ ನಿಲ್ದಾಣಕ್ಕೆ ಪಂ ಪುಟ್ಟರಾಜ ಗವಾಯಿ ಅವರ ಹೆಸರು ನಾಮಕರಣ ಮಾಡಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದ್ದಾರೆ. 

‘ಬಸ್‌ ನಿಲ್ದಾಣಕ್ಕೆ ಪಂಡಿತ್‌ ಪುಟ್ಟರಾಜ ಗವಾಯಿ ಅವರಂತಹ ಮಹಾತ್ಮರ ಹೆಸರಿಡಲು ನನಗೆ ಅವಕಾಶ ಸಿಕ್ಕಿರುವುದು ಸುಯೋಗ ಮತು ಪೂರ್ವಜನ್ಮದ ಪುಣ್ಯ ಎಂದು ಭಾವಿಸುತ್ತೇನೆ. 

ಎಲೆಕ್ಟ್ರಿಕ್‌ ವಾಹನಗಳ ಹೆಚ್ಚು ಬಳಸಿ: ಸಾರಿಗೆ ಸಚಿವ ಲಕ್ಷ್ಮಣ್‌ ಸವದಿ ...

ಈ ಮೂಲಕ ಎಲ್ಲರಿಗೂ ದೊಡ್ಡ ಆದರ್ಶ ಹಾಗೂ ದಾರಿದೀಪವಾಗಿರುವ ಗವಾಯಿಗಳಿಗೆ ನಮ್ಮೆಲ್ಲರ ಭಕ್ತಿ ಹಾಗೂ ಗೌರವ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು ಇತ್ತೀಚೆಗಷ್ಟೆ ಇಡಲಾಗಿತ್ತು. ಇದೀಗ ಗದಗ ಬಸ್ ನಿಲ್ದಾಣಕ್ಕೆ ಗವಾಯಿ ಹೆಸರಿಡಲಾಗುತ್ತಿದೆ. 

PREV
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!