ಸೇನೆ ಸೇರಿದ ರಫೇಲ್, ಬಿಸಿ ಬಿಸಿ ಜಿಲೇಬಿ ಹಂಚಿದ ಉಡುಪಿ

Published : Jul 30, 2020, 11:02 PM ISTUpdated : Jul 30, 2020, 11:07 PM IST
ಸೇನೆ ಸೇರಿದ ರಫೇಲ್, ಬಿಸಿ ಬಿಸಿ ಜಿಲೇಬಿ ಹಂಚಿದ ಉಡುಪಿ

ಸಾರಾಂಶ

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಸಂಭ್ರಮಾಚರಣೆ/ ಉಡುಪಿಯಲ್ಲಿ ಮನೆ ಮಾಡಿದ ಸಂಭ್ರಮ/ ಸ್ಥಳದಲ್ಲಿಯೇ ಬಿಸಿ ಬಿಸಿ ಜಿಲೇಬಿ/ ಸೈನ್ಯ ಸೇರಿದ ಅತ್ಯಾಧುನಿಕ ಅಸ್ತ್ರ

ಉಡುಪಿ(ಜು.30)  ದೇಶದ ಸೇನೆಗೆ ರಫೇಲ್ ಯುದ್ಧ ವಿಮಾನಗಳ ಸೇರ್ಪೆಡೆಯ ಹಿನ್ನೆಲೆ ಜಿಲ್ಲಾ ನಾಗರಿಕ ಸಮಿತಿಯು ಗುರುವಾರ ವಿಶಿಷ್ಟ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿತು. ನಗರದ ಮಾರುಥಿ ವೀಥಿಕಾದಲ್ಲಿ ಬೃಹತ್ ರಾಷ್ಟಧ್ವಜವನ್ನು ಪ್ರದರ್ಶಿಸುವ ಮೂಲಕ ದೇಶದ ಈ  ಸಾಧನೆಯ ಬಗ್ಗೆ ಹೆಮ್ಮೆ ಗೌರವ ವ್ಯಕ್ತಪಡಿಸಲಾಯಿತು.

ನಂತರ 'ಉಡುಪಿ ಸ್ವಿಟ್ಸ್' ಮಳಿಗೆಯವರು  ಸ್ಥಳದಲ್ಲಿಯೇ ಬಿಸಿಬಿಸಿ ಜಿಲೇಬಿಗಳನ್ನು ತಯಾರಿಸಿ ಸಾರ್ವಜನಿಕರಿಗೆ ವಿತರಿಸಿದರು.

ರಫೇಲ್ ವಿಮಾನದ ವಿಶೇಷಗಳು ಏನು? ಶಕ್ತಿ ಅನಾವರಣ

ಕಾರ್ಯಕ್ರಮದ ನೇತೃತ್ವವನ್ನು ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ವಹಿಸಿದ್ದರು, ಸಮಿತಿಯ ಪದಾಧಿಕಾರಿಗಳಾದ ಕೆ.ಬಾಲಗಂಗಾಧರ ರಾವ್, ಪಾಡಿಗಾರ್ ಲಕ್ಷ್ಮೀನಾರಾಯಣ ಉಪಾಧ್ಯಾಯ, ತಾರಾನಾಥ್ ಮೇಸ್ತ ಶಿರೂರು, ಮಹಮ್ಮದ್, ಸುಧಾಕರ ಶೆಟ್ಟಿ, ರಾಜೇಶ್ ಕಲ್ಮಾಡಿ ಹಾಗೂ ಕೋಟಕ್ ಮಹೇಂದ್ರ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಅತ್ಯಾಧುನಿಕ ಯುದ್ಧ ವಿಮಾನ ಭಾರತೀಯ ಸೇನಾ ಬತ್ತಳಿಕೆ ಸೇರಿದೆ.  ರಫೇಲ್ ಬಗ್ಗೆ ಅದೆಷ್ಟೂ ವಾದ ವಿವಾದಗಳು ಇದ್ದರೂ ಭಾರತದ ಸೇನಾ ಶಕ್ತಿ ಡಬಲ್ ಆಗಿದೆ.

PREV
click me!

Recommended Stories

16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ
ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!