ಮಳೆಗಾಗಿ ಕಾಯುವ ದಿನ ಮುಗಿದಿದೆ.. ಹವಾಮಾನ ಇಲಾಖೆಯಿಂದ ಬಿಗ್ ಅಪ್‌ಡೇಟ್ಸ್

Published : Jul 04, 2026, 06:44 PM IST
rain alert

ಸಾರಾಂಶ

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದೇಶದ ಹಲವೆಡೆ ಮುಂಗಾರು ಮತ್ತೆ ಚುರುಕುಗೊಂಡಿದೆ. ಇದರ ಪರಿಣಾಮವಾಗಿ, ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

ದೇಶದ ಹಲವು ಭಾಗಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ 4 ರಿಂದ 5 ದಿನಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದ ಎಫೆಕ್ಟ್

ಇದರಿಂದಾಗಿ ದೆಹಲಿ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯಿದೆ. ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಮುಂದಿನ ಮೂರು ದಿನಗಳಲ್ಲಿ ಒಡಿಶಾ ಮತ್ತು ಉತ್ತರ ಛತ್ತೀಸ್‌ಗಢದತ್ತ ಚಲಿಸಲಿದೆ. ಇದರ ಪ್ರಭಾವದಿಂದಾಗಿ ಮಧ್ಯ ಭಾರತ, ಉತ್ತರ ಭಾರತ ಮತ್ತು ಪಶ್ಚಿಮ ಭಾರತದ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ.

ಎಲ್ಲೆಲ್ಲಿ ಮಳೆ..?

ದೆಹಲಿ-ಎನ್‌ಸಿಆರ್: ಜುಲೈ 4 ರಿಂದ 7 ರವರೆಗೆ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಸುಡುಬಿಸಿಲಿನಿಂದ ಬಳಲುತ್ತಿದ್ದ ದೆಹಲಿ ಜನತೆಗೆ ನಿರಾಳ ಸಿಗಲಿದೆ. ಉಷ್ಣಾಂಶವು 30 ರಿಂದ 32 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಬಹುದು.

ಮುಂಬೈ ಮತ್ತು ಮಹಾರಾಷ್ಟ್ರ: ಮುಂಬೈ ಸೇರಿದಂತೆ ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಜುಲೈ 7 ರವರೆಗೆ 'ಅತಿ ಭಾರೀ ಮಳೆ'ಯಾಗುವ ಎಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಉತ್ತರ ಪ್ರದೇಶ: ಜುಲೈ 10 ರವರೆಗೆ ಯುಪಿಯ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಿಡಿಲಿನ ಸಂದರ್ಭದಲ್ಲಿ ಬಯಲು ಪ್ರದೇಶ ಅಥವಾ ಮರಗಳ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕದಲ್ಲೂ ಮಳೆ

ದಕ್ಷಿಣ ಭಾರತದ ಕರ್ನಾಟಕ, ಕೇರಳ ಮತ್ತು ತೆಲಂಗಾಣದಲ್ಲಿಯೂ ಮಳೆ ಮುಂದುವರಿಯಲಿದೆ. ಇವುಗಳ ಜೊತೆಗೆ ಗುಜರಾತ್, ರಾಜಸ್ಥಾನ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ 'ರೆಡ್ ಅಲರ್ಟ್' ಹಾಗೂ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಹವಾಮಾನ ಇಲಾಖೆ ಎಚ್ಚರಿಕೆ

ಹವಾಮಾನ ಇಲಾಖೆಯು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಭಾರೀ ಮಳೆಯಿಂದಾಗಿ ರಸ್ತೆ ಸಂಚಾರ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು, ಪ್ರಯಾಣಿಸುವ ಮುನ್ನ ಹುಷಾರಾಗಿರಬೇಕು ಎಂದು ಹೇಳಿದೆ. ಮಳೆ ಬರುವ ಮುನ್ನ ಗಾಳಿ ಮತ್ತು ಸಿಡಿಲಿನ ಅಬ್ಬರ ಇರುವುದರಿಂದ ವಿದ್ಯುತ್ ಕಂಬಗಳಿಂದ ದೂರವಿರಿ.

PREV
Read more Articles on
click me!

Recommended Stories

ಆರೋಗ್ಯ ಸಚಿವ ಯುಟಿ ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಗಂಭೀರವಾಗಿ ಗಾಯಗೊಂಡ ರೈಡರ್
Sara Mahesh: ಕಾಂಗ್ರೆಸ್‌ ವಿರುದ್ಧ ಗುಡುಗಿದ ಸಾರಾ ಮಹೇಶ; ವ್ಯಂಗ್ಯವಾಗಿ ಮಾಜಿ ಸಿಎಂ ಟೀಕೆ!