ತಂಪೆರೆದ ವರುಣ: ರೈತರ ಮೊಗದಲ್ಲಿ ನಗು

Published : Sep 02, 2023, 08:22 AM IST
 ತಂಪೆರೆದ ವರುಣ: ರೈತರ ಮೊಗದಲ್ಲಿ ನಗು

ಸಾರಾಂಶ

ವರುಣನ ಕೃಪೆಯಿಂದಾಗಿ ತಾಲೂಕಿನಾದ್ಯಂತ ಗುರುವಾರ ತಡರಾತ್ರಿ ಸುರಿದ ಹದ ಮಳೆಯಿಂದ ಮುಂಗಾರು ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

 ತುರುವೇಕೆರೆ :  ವರುಣನ ಕೃಪೆಯಿಂದಾಗಿ ತಾಲೂಕಿನಾದ್ಯಂತ ಗುರುವಾರ ತಡರಾತ್ರಿ ಸುರಿದ ಹದ ಮಳೆಯಿಂದ ಮುಂಗಾರು ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಜುಲೈ ಮಧ್ಯ ಭಾಗದಿಂದ ಮುಂಗಾರು ಮಳೆ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಬಿದ್ದಿತ್ತು. ಹಾಗಾಗಿ ಕೆಲವು ಆಯ್ದ ಕಡೆಗಳಲ್ಲಿ ರೈತರು ಬಿತ್ತನೆ ಮಾಡಿದ್ದರು. ತದ ನಂತರ ಜುಲೈ ಅಂತ್ಯದಲ್ಲಿ ಚದುರಿದ ರೀತಿಯಲ್ಲಿ ಸೋನೆ ಮಳೆಯಾಗಿದ್ದರಿಂದ ರೈತರಲ್ಲಿ ಭರವಸೆ ಮೂಡಿಸಿತ್ತು. ಆದರೆ ಅಲ್ಲಿಂದ ಆಗಸ್ಟ್‌ ಅಂತ್ಯದವರೆಗೂ ಮಳೆ ಬೀಳದ ಕಾರಣ ಬಿತ್ತಿದ್ದ ಮುಂಗಾರು ಬೆಳೆಗಳು ಒಣಗ ತೊಡಗಿದವು. ಇತ್ತ ಇನ್ನೂ ಮುಂಗಾರು ಬಿತ್ತನೆ ಮಾಡದ ರೈತರಲ್ಲಿ ಆತಂಕ ಮನೆ ಮಾಡಿತ್ತು. ರಾತ್ರಿ ಹದ ಮಳೆ ಬಿದ್ದಿದ್ದರಿಂದ ತಾಲೂಕಿನ ಕೆಲ ಭಾಗದಲ್ಲಿ ಮುಂಗಾರು ಬಿತ್ತನೆ ಕಾರ‍್ಯ ಚುರುಕುಗೊಳ್ಳಲು ಸಾಧ್ಯವಾಗಿದೆ. ಮಾಯಸಂದ್ರ ಹೋಬಳಿಯಲ್ಲಿ 112. ಮಿಲಿ ಮೀಟರ್‌ ಮಳೆಯಾಗಿದೆ. ಇದರಿಂದ ರೈತರು ಬಿತ್ತಿದ್ದ ಮುಂಗಾರು ಬೆಳೆಗಳಾದ ರಾಗಿ, ಅವರೆ, ಜೋಳ, ತೊಗರಿ, ಹರಳು ಗಿಡಗಳಿಗೆ ತಂಪೆರೆದಿದೆ. ಇನ್ನು ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ಬಾಳೆ ಗಿಡಗಳಿಗೆ ಈ ಮಳೆ ಕೊಂಚ ಚೇತರಿಕೆ ನೀಡಿದೆ.

ಗುರುವಾರ ಸುರಿದ ಮಳೆಯಿಂದಾಗಿ ತೋಟ, ಹೊಲ, ಗದ್ದೆ ಸಾಲುಗಳ ಅಲ್ಲಲ್ಲಿ ಮಳೆಯ ನೀರು ಸಂಗ್ರಹವಾಗಿದೆ. ಈ ಬಾರಿ ಮುಂಗಾರು ಬಿತ್ತನೆ ಕಾರ್ಯ ತಡವಾಗಿ ಆರಂಭವಾಗಿದೆ. ತಾಲೂಕಿನಲ್ಲಿ ಒಟ್ಟು ಶೇ 40 ರಷ್ಟುಮಾತ್ರ ಮುಂಗಾರು ಬಿತ್ತನೆಯಾಗಿದೆ. ಇನ್ನು ಕೆಲವೆಡೆ ಭೂಮಿ ತೇವಾಂಶವಿದ್ದು, ಮಳೆ ನಿಂತ ತಕ್ಷಣರಾಗಿ ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ. ಕೆಲವು ಭಾಗಗಳಲ್ಲಿನ ರೈತರು ರಾಗಿ ಬಿತ್ತನೆ ಕಾರ್ಯ ಮಾಡುತ್ತಿದ್ದು ಕಂಡು ಬಂದಿದೆ.

ಕಸಬಾ 33 ಮಿಲಿ ಮೀಟರ್‌, ದಂಡಿನಶಿವರ 25.8 ಮಿಲಿ ಮೀಟರ್‌, ಮಾಯಸಂದ್ರ, 112.4 ಮಿಲಿ ಮೀಟರ್‌, ಸಂಪಿಗೆ 60.6 ಮಿಲಿ ಮೀಟರ್‌, ದಬ್ಬೇಘಟ್ಟ8 ಮಿಲಿ ಮೀಟರ್‌ ಮಳೆಯಾಗಿದೆ. 

PREV
Read more Articles on
click me!

Recommended Stories

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದ ಈ 2 ನಿಲ್ದಾಣಗಳ ನಡುವೆ ರೈಲಿನ ವೇಗಕ್ಕೆ ಬ್ರೇಕ್!
ಆಧಾರ್ ಬಯೋಮೆಟ್ರಿಕ್ ಶಿಲ್ಪಿ, ಬೆಂಗಳೂರಿನ ಸರ್ವಂ AI ಕಂಪನಿ ಕಟ್ಟಿದ ವಿವೇಕ್ ರಾಘವನ್ ಈಗ TIME100 AI 2026 ಪಟ್ಟಿಯಲ್ಲಿ ಪ್ರಭಾವಿ ವ್ಯಕ್ತಿ!