‘ರೈತ ರತ್ನ’ ಪುರಸ್ಕೃತ ಬಸವರಾಜ ಕೊರೋನಾದಿಂದ ನಿಧನ

Kannadaprabha News   | Asianet News
Published : May 02, 2021, 07:54 AM IST
‘ರೈತ ರತ್ನ’ ಪುರಸ್ಕೃತ ಬಸವರಾಜ  ಕೊರೋನಾದಿಂದ ನಿಧನ

ಸಾರಾಂಶ

ಸುಸ್ಥಿರ ಕೃಷಿಯಲ್ಲಿ ತೊಡಗಿಕೊಳ್ಳುವ ಮೂಲಕ ರೈತರಿಗೆ ಮಾದರಿಯಾಗಿದ್ದ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಾಹಿನಿ ಹಾಗೂ ಕನ್ನಡಪ್ರಭ ಕೊಡ ಮಾಡಿದ ರೈತ ರತ್ನ ಪ್ರಶಸ್ತಿಗೆ ಭಾಜನರಾಗಿದ್ದ ಬಸವರಾಜ ವಿಭೂತಿ ಕೊರೋನಾದಿಂದ ಮೃತಪಟ್ಟಿದ್ದಾರೆ. 

ಧಾರವಾಡ (ಮೇ.02): ಇಳಿ ವಯಸ್ಸಿನಲ್ಲೂ ಸುಸ್ಥಿರ ಕೃಷಿಯಲ್ಲಿ ತೊಡಗಿಕೊಳ್ಳುವ ಮೂಲಕ ರೈತರಿಗೆ ಮಾದರಿಯಾಗಿದ್ದ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಾಹಿನಿ ಹಾಗೂ ಕನ್ನಡಪ್ರಭ ಕೊಡ ಮಾಡಿದ ರೈತ ರತ್ನ ಪ್ರಶಸ್ತಿಗೆ ಭಾಜನರಾಗಿದ್ದ ಬಸವರಾಜ ವಿಭೂತಿ(83) ಕೊರೋನಾ ಸೋಂಕಿಗೆ ಶನಿವಾರ ವಿಧಿವಶವಾಗಿದ್ದಾರೆ. 

80ರ ವಯಸ್ಸಲ್ಲೂ ಕುಗ್ಗದ ಆಸಕ್ತಿ: ವರ್ಷಕ್ಕೆ 40 ಲಕ್ಷ ಆದಾಯ ಗಳಿಸುವ ರೈತ ...

ಧಾರವಾಡದ ಕಲ್ಯಾಣನಗರದ ನಿವಾಸಿಯಾಗಿದ್ದ ಇವರಿಗೆ ಸೋಂಕು ತಗುಲಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದರು.

ಒಂದೇ ತಿಂಗಳಲ್ಲಿ 3 ಲಕ್ಷ ಮಂದಿಗೆ ಸೋಂಕು: ಬೆಚ್ಚಿ ಬಿದ್ದ ಬೆಂಗ್ಳೂರು..! ...

 ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರು ಹೊನ್ನಾಪೂರದಲ್ಲಿ 20 ಎಕರೆ ಪ್ರದೇಶದಲ್ಲಿ ಅತ್ಯದ್ಭುತವಾಗಿ ಸಮಗ್ರ ಕೃಷಿಯಲ್ಲಿ ತೊಡಗಿದ್ದು ಹೊಸ ಹೊಸ ಕೃಷಿ ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!