ಪುತ್ರಿ ಕಾಣೆ ದೂರು : ಸೀಡಿ ಲೇಡಿ ಕುಟುಂಬಕ್ಕೆ ಸಿಸಿಬಿ ಬುಲಾವ್‌

Kannadaprabha News   | Asianet News
Published : May 26, 2021, 07:07 AM ISTUpdated : May 26, 2021, 07:43 AM IST
ಪುತ್ರಿ ಕಾಣೆ ದೂರು : ಸೀಡಿ ಲೇಡಿ ಕುಟುಂಬಕ್ಕೆ ಸಿಸಿಬಿ ಬುಲಾವ್‌

ಸಾರಾಂಶ

‘ಸೀಡಿಯಲ್ಲಿರುವುದು ನಾನೇ’ ಎಂದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಸೀಡಿ ಲೇಡಿಯ ಕುಟುಂಬ  ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರ ನೋಟಿಸ್‌

ವಿಜಯಪುರ (ಮೇ.26): ಸೀಡಿಯಲ್ಲಿರುವುದು ನಾನೇ’ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಒಪ್ಪಿಕೊಂಡ ಬೆನ್ನಲ್ಲೇ, ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಸೀಡಿ ಲೇಡಿಯ ಕುಟುಂಬಸ್ಥರನ್ನು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಸೀಡಿ ಲೇಡಿ ಪೋಷಕರು ಬೆಳಗಾವಿ ಎಪಿಎಂಸಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ಬೆಂಗಳೂರಿನ ಆರ್‌.ಟಿ.ನಗರ ಠಾಣೆಗೆ ಹಸ್ತಾಂತರವಾಗಿತ್ತು. ಬಳಿಕ ಸಿಸಿಬಿ ಪೊಲೀಸರು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದರು. 

ಸೀಡಿಲಿದ್ದದ್ದು ನಾನೇ ಎಂದ ಜಾರಕಿಹೊಳಿ, ಶಂಕಿತ ಕಿಂಗ್‌ಪಿನ್‌ಗಳಿಂದ ಜಾಮೀನು ಅರ್ಜಿ ..

ಈ ಹಿನ್ನೆಲೆಯಲ್ಲಿ ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿರುವ ಯುವತಿ ಪೋಷಕರಿಗೆ ನೋಟಿಸ್‌ ನೀಡಿದ್ದಾರೆ. ಮೇ 21ರಂದು ಈ ನೋಟಿಸ್‌ ಹೊರಡಿಸಿದ್ದು, ಲಾಕ್‌ಡೌನ್‌ ಮುಗಿದ ಬಳಿಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

PREV
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!