ಈ ಸಲ ಕಪ್‌ ನಮ್ದೆ ಎಂದು ಮಾದಪ್ಪನ ತೇರಿಗೆ ಬಾಳೆ ಹಣ್ಣೆಸೆದ

Kannadaprabha News   | Asianet News
Published : Feb 27, 2020, 11:24 AM IST
ಈ ಸಲ ಕಪ್‌ ನಮ್ದೆ ಎಂದು ಮಾದಪ್ಪನ ತೇರಿಗೆ ಬಾಳೆ ಹಣ್ಣೆಸೆದ

ಸಾರಾಂಶ

ಇಲ್ಲೊಬ್ಬ ಐಪಿಎಲ್‌ನ ಆರ್‌ಸಿಬಿ ತಂಡದ ಅಭಿಮಾನಿ ಈ ಸಲ ಕಪ್‌ ನಮ್ದೆ ಎಂದು ಹನೂರಿನಲ್ಲಿ ಹಣ್ಣು ಜವನಕ್ಕೆ ಬರೆದು ಮಾದಪ್ಪನ ತೇರಿಗೆ ಎಸೆದಿರುವ ವಿಡಿಯೋ ಸಖತ್‌ ವೈರಲ್ಲಾಗಿದೆ.  

ಚಾಮರಾಜನಗರ(ಫೆ.27) : ಇಲ್ಲೊಬ್ಬ ಐಪಿಎಲ್‌ನ ಆರ್‌ಸಿಬಿ ತಂಡದ ಅಭಿಮಾನಿ ಈ ಸಲ ಕಪ್‌ ನಮ್ದೆ ಎಂದು ಹನೂರಿನಲ್ಲಿ ಹಣ್ಣು ಜವನಕ್ಕೆ ಬರೆದು ಮಾದಪ್ಪನ ತೇರಿಗೆ ಎಸೆದಿರುವ ವಿಡಿಯೋ ಸಖತ್‌ ವೈರಲ್ಲಾಗಿದೆ.

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಫೆ.24 ರಂದು ರಥೋತ್ಸವ ಜರುಗಿತ್ತು. ಆ ವೇಳೆ, ಹನೂರಿನ ರಘು ಎಂಬ ಆರ್‌ಸಿಬಿಯ ಕಟ್ಟಾಅಭಿಮಾನಿ. ಈ ಸಲವಾದರೂ ತಮ್ಮ ನೆಚ್ಚಿನ ತಂಡ ಚಾಂಪಿಯನ್‌ ಆಗಲೆಂದು ಮಹದೇಶ್ವರನ ಮೊರೆ ಹೋಗಿದ್ದಾರೆ.

'BJPಯವ್ರಿಗೆ ಅಧಿಕಾರದ ಅಮಲು ತಲೆಗೇರಿದೆ'..!

ಬಾಳೆ ಹಣ್ಣಿನ ಮೇಲೆ ಈ ಸಲ ಕಪ್‌ ನಮ್ದೆ ಎಂದು ಬರೆದು ಮಾದಪ್ಪನ ತೇರಿಗೆ ಎಸೆದು ಬೇಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್‌ ಆಗಿದೆ. ರಥೋತ್ಸವ ಸಂದರ್ಭ ತೇರಿಗೆ ಬಾಳೆ ಹಣ್ಣು ಎಸೆಯುವ ಸಂಪ್ರದಾಯ ಹಲವು ಕಡೆ ಇದೆ.

PREV
click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!