ಹೊಸ ವರ್ಷಾಚರಣೆ: ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

Suvarna News   | Asianet News
Published : Dec 26, 2020, 03:59 PM IST
ಹೊಸ ವರ್ಷಾಚರಣೆ: ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಸಾರಾಂಶ

ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ| ಮೊದಲ ಬಾರಿಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮ ಪ್ರವೇಶ ಪ್ರವಾಸಿಗರಿಗೆ ನಿರ್ಬಂಧ| ಜಿಲ್ಲಾಡಳಿತದ ಕ್ರಮದಿಂದಾಗಿ ಪ್ರವಾಸಿಗರಿಗೆ ನಿರಾಸೆ| 

ಚಿಕ್ಕಬಳ್ಳಾಪುರ(ಡಿ.26):  ಡಿ.30 ರಿಂದ ಜನವರಿ 2 ವರೆಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.

ಹೌದು, ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಪ್ರವಾಸಿಗರು ಹೆಚ್ವಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ‌ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. 

ನಂದಿ ಬೆಟ್ಟಕ್ಕೆ ಒಂದೇ ದಿನ 9 ಸಾವಿರ ಪ್ರವಾಸಿಗರು

ಪ್ರತಿ ವರ್ಷ ಹೊಸ ವರ್ಷಕ್ಕೆ ಒಂದು ದಿನದ ಮಟ್ಟಿಗೆ ನಂದಿಗಿರಿ ಧಾಮಕ್ಕೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಜಿಲ್ಲಾಡಳಿತದ ಈ ಕ್ರಮದಿಂದಾಗಿ ಪ್ರವಾಸಿಗರಿಗೆ ನಿರಾಸೆಯಾಗಿದೆ.
 

PREV
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!