ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಮನರಂಜನಾ ಗ್ರಾಮ... ಒಂದೆರಡಲ್ಲ ವಿಶೇಷ!

Published : Oct 07, 2021, 08:57 PM ISTUpdated : Oct 14, 2021, 01:06 AM IST
ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಮನರಂಜನಾ ಗ್ರಾಮ... ಒಂದೆರಡಲ್ಲ ವಿಶೇಷ!

ಸಾರಾಂಶ

* ಏರ್‌ಪೋರ್ಟ್ ಸಿಟಿಯಲ್ಲಿ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಶುರು * 23 ಎಕರೆ ಪ್ರದೇಶದಲ್ಲಿ ಮನರಂಜನಾ ಗ್ರಾಮ *  ಮನರಂಜನಾ  ಗ್ರಾಮಕ್ಕೆ ಬಿಎಂಟಿಸಿ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸಂಪರ್ಕ ಸಹ ಇರಲಿದೆ * ಬೆಂಗಳೂರಿಗೆ ಮತ್ತೊಂದು ಗರಿ ತಂದುಕೊಡಲಿರುವ ತಾಣ

ಬೆಂಗಳೂರು(ಅ. 07)  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ “ಏರ್‌ಪೋರ್ಟ್ ಸಿಟಿ” ಭಾಗವಾಗಿ “ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ (ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ ಆಂಡ್ ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆ ಆರ್ಕಿಟೆಕ್ಟ್ ವಿನ್ಯಾಸಕ್ಕಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ ಅಧೀನ ಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (ಬಿಎಸಿಎಲ್) ಈಗಾಗಲೇ ಏರ್‌ಪೋರ್ಟ್ ಸಿಟಿ ನಿರ್ಮಾಣದ ಕೆಲಸ ಪ್ರಾರಂಭಿಸಿದೆ. ಇದರ  ಭಾಗವಾಗಿ ಮನರಂಜನಾ  ಗ್ರಾಮವನ್ನು 23 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ಈ ಜವಾಬ್ದಾರಿಯನ್ನು ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆಗೆ ನೀಡಲಾಗಿದೆ. ಈ ಭಾಗದಲ್ಲಿ ಶಾಪಿಂಗ್ ಸೆಂಟರ್, ಮಾಲ್, ಐಟೆಕ್ ಸಿನಿಮಾ ಥಿಯೇಟರ್ ಸೇರಿದಂತೆ ಇತರೆ ಮನರಂಜನಾ ಸ್ಥಳಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ.  

ಎರಡು ರನ್ ವೇ ಪಡೆದುಕೊಂಡ ಮೊದಲ ವಿಮಾನ ನಿಲ್ದಾಣ ನಮ್ಮ ಬೆಂಗಳೂರು

ಈ ಬಗ್ಗೆ ಮಾತನಾಡಿದ ಬಿಎಎಸಿಎಲ್ ಸಿಇಒ ಶ್ರೀ ರಾಮ್ ಮುನುಕುಟ್ಲಾ, ಸಿಂಗಾಪುರ ಮಾದರಿಯ ಸಿಟಿ ನಿರ್ಮಾಣದ ಕನಸಿನಂತೆ ಈ ಭಾಗದಲ್ಲಿ ಏರ್‌ಪೋರ್ಟ್ ಸಿಟಿ ನಿರ್ಮಿಸಲಾಗುತ್ತಿದೆ. ಮನರಂಜನಾ ಗ್ರಾಮವನ್ನು ನಿರ್ಮಿಸಲು ಈಗಾಗಲೇ ಟೆಂಡರ್ ನೀಡಲಾಗಿದೆ. ಕೆಲವೇ ವರ್ಷಗಳಲ್ಲಿ ಈ ತಾಣ ತಲೆ ಎತ್ತಲಿದೆ. ಈ ಮನರಂಜನಾ  ಗ್ರಾಮಕ್ಕೆ ಬಿಎಂಟಿಸಿ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸಂಪರ್ಕ ಸಹ ಇರಲಿದೆ. ಈ  ಹೈಟೆಕ್ ಸಿಟಿಯಲ್ಲಿ ಬ್ಯುಸಿನೆಸ್ ಪಾರ್ಕ್, ಐಟಿ ಪಾರ್ಕ್, ಹಾಸ್ಪೆಟಲ್ ಸೆಂಟರ್, ಶಾಲಾ ಕಾಲೇಜುಗಳು, ಪ್ರದರ್ಶನ ಕೇಂದ್ರ ಹೀಗೆ ಹತ್ತಾರು ವಿಷಯಗಳು ಈ ಸಿಟಿಯಲ್ಲಿ ಇರಲಿದೆ. ಇದೊಂದು ದೇಶದಲ್ಲೇ  ಮಾದರಿ ಹೈಟೆಕ್ ಸಿಟಿಯಾಗಿ ಹೊರಬರುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಏಷ್ಯಾದಲ್ಲಿಯೇ ಅತ್ಯುತ್ತಮ ಸಿಬ್ಬಂದಿ ಹೋಂದಿರುವ ನಿಲ್ದಾಣ ಎಂಬ ಶ್ರೇಯಕ್ಕೂ ಪಾತ್ರವಾಗಿತ್ತು. ಬೆಂಗಳೂರಿನ ಹಿರಿಮೆಗಳ  ಜಾಗದಲ್ಲಿ ಈ ಮನರಂಜನಾ ಗ್ರಾಮ ಸಹ ಒಂದು ಸ್ಥಾನ ಪಡೆದುಕೊಳ್ಳುವುದರಲ್ಲಿ ಯಾವ ಅನುಮಾನ ಇಲ್ಲ.

 

PREV
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!