ರಾ.ಹೆ. 275ರ ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ರು. ಕೇಂದ್ರ ವಿಶೇಷ ಅನುದಾನ

Published : Jul 08, 2026, 07:42 AM IST
Mani Sampaje road

ಸಾರಾಂಶ

ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಕೇಂದ್ರ ಸರ್ಕಾರವು 49.22 ಕೋಟಿ ರು.ಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದೆ. ಇದರೊಂದಿಗೆ, ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಸದ ಬ್ರಿಜೇಶ್ ಚೌಟ ಅವರು ಹೆದ್ದಾರಿ ಸಚಿವಾಲಯವನ್ನು ಒತ್ತಾಯಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಕೇಂದ್ರ ಸರ್ಕಾರ 49.22 ಕೋಟಿ ರು.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯವನ್ನು ಖುದ್ದು ಭೇಟಿ ಮಾಡಿರುವ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸಲು ನಿಟ್ಟಿನಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಕರಾವಳಿ ಮತ್ತು ಒಳನಾಡು ಪ್ರದೇಶಗಳ ನಡುವಿನ ಸಂಪರ್ಕವನ್ನು ಸುಧಾರಿಸಿ ವಾಹನ ಸಂಚಾರ ಸುಗಮಗೊಳಿಸುವ ಅತ್ಯಂತ ನಿರ್ಣಾಯಕ ಹಾಗೂ ದೀರ್ಘಕಾಲದಿಂದ ಬಾಕಿ ಉಳಿದಿರುವ ರಾ.ಹೆ.-275ರ ಮಾಣಿ-ಸಂಪಾಜೆ ರಸ್ತೆಯ ಮೇಲ್ದರ್ಜೀಕರಣ ಯೋಜನೆಗೆ ಶೀಘ್ರದಲ್ಲೇ ಅಲೈನ್‌ಮೆಂಟ್ ಅನುಮೋದನೆ ಮತ್ತು ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ಸಂಚಾರ ಸುರಕ್ಷತೆ ಹೆಚ್ಚಿಸಲು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಮೂಲಕ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಈ ಯೋಜನೆ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕಾದ ಅತ್ಯಗತ್ಯತೆಯಿದೆ ಎಂದು ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿದ್ದಾರೆ.

ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ

ಇದೇ ವೇಳೆ ಮಂಗಳೂರು -ಬೆಂಗಳೂರು ಎಕ್ಸ್‌ಪ್ರೆಸ್‌ ವೇಗೆ ಸಂಬಂಧಿಸಿದಂತೆಯೂ ಚರ್ಚಿಸಿದ್ದು, ಈ ಯೋಜನೆಯ ಮಹತ್ವದ ಭಾಗವಾಗಿರುವ ಶಿರಾಡಿ ಘಾಟ್ ವಿಭಾಗದ ನೂತನ ರಸ್ತೆ ವಿನ್ಯಾಸಕ್ಕೆ ‘ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ’ ಅನುಮೋದನೆಯನ್ನು ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಪ್ರಸ್ತುತ ಈ ಯೋಜನೆಯು ಡಿಪಿಆರ್‌ ತಯಾರಿ ಹಂತದಲ್ಲಿದ್ದು,

ಮಾಣಿ-ಸಂಪಾಜೆ ಹೆದ್ದಾರಿ ದುರಸ್ತಿಗೆ 49.22 ಕೋಟಿ ರು. ವಿಶೇಷ ನೆರವು: ದ.ಕ. ಸಂಸದರ ನಿರಂತರ ಪ್ರಯತ್ನದ ಫಲವಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಣಿ-ಸಂಪಾಜೆ ವಿಭಾಗದ ಒಟ್ಟು 71.60 ಕಿ.ಮೀ. ರಸ್ತೆಯ ವಿಶೇಷ ತುರ್ತು ದುರಸ್ತಿ ಕಾಮಗಾರಿಗೆ ಇಪಿಸಿ ಮಾದರಿಯಲ್ಲಿ ಒಟ್ಟು 49.22 ಕೋಟಿ ರು. ಗಳ ವಿಶೇಷ ಅನುದಾನ ಮಂಜೂರು ಮಾಡಿದೆ.

ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಇಡೀ ರಸ್ತೆಗೆ 40 ಮಿ.ಮೀ ದಪ್ಪದ ಬಿಟುಮಿನಸ್, ರಸ್ತೆ ಇಕ್ಕೆಲಗಳ ನಿರ್ವಹಣೆ, ಸಂಚಾರ ಸೂಚಕ ಫಲಕಗಳು ಮತ್ತು ರೋಡ್ ಮಾರ್ಕಿಂಗ್‌ ಸೇರಿದಂತೆ ಅಗತ್ಯ ಅಭಿವೃದ್ದಿ ಕಾಮಗಾರಿಗಳು ನಡೆಯುವ ಸಾಧ್ಯತೆ ಇದೆ. ಸಚಿವಾಲಯದಿಂದ ಆರ್ಥಿಕ ಮಂಜೂರಾತಿ ಮತ್ತು ಟೆಂಡರ್ ದಾಖಲೆಗಳ ಅನುಮೋದನೆ ಸಿಕ್ಕ ತಕ್ಷಣವೇ ಅತ್ಯಂತ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು.

ಪೇವ್ಡ್ ಶೋಲ್ಡರ್ ಒಳಗೊಂಡ ಚತುಷ್ಪಥ

 ಇದರ ಜೊತೆಯಲ್ಲೇ, ಈ ಹೆದ್ದಾರಿಯನ್ನು ಪೇವ್ಡ್ ಶೋಲ್ಡರ್ ಒಳಗೊಂಡ ಚತುಷ್ಪಥ (4-ಲೇನ್) ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಯನ್ನು ಈಗಾಗಲೇ 2026-27ರ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಪ್ರಸ್ತುತ ಇದರ ವಿಸ್ತೃತ ಯೋಜನಾ ವರದಿ ಸಿದ್ಧತೆಯ ಹಂತದಲ್ಲಿದ್ದು ಶೀಘ್ರದಲ್ಲೇ ರಸ್ತೆ ವಿನ್ಯಾಸಕ್ಕೆ ಅನುಮೋದನೆ ಸಿಗುವ ನಿರೀಕ್ಷೆಯಿದೆ ಎಂದು ಸಂಸದರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

PREV
Read more Articles on
click me!

Recommended Stories

ರೈಲು ಇಂಜಿನ್ ಡಿಕ್ಕಿ: ಪತ್ನಿಯನ್ನ ಸುರಕ್ಷಿತ ಸ್ಥಳಕ್ಕೆ ತಳ್ಳಿ ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು
ನಿವೃತ್ತಿ ದಿನ ಮಧ್ಯಾಹ್ನ ನಂತರ ಬಡ್ತಿಪಡೆದ್ರೂ ಪಿಂಚಣಿಗೆ ಅರ್ಹರು: ಹೈಕೋರ್ಟ್