ಕೂಡ್ಲಿಗಿ ಬಳಿ ಸರಣಿ ಅಪಘಾತ: ಇಬ್ಬರ ದುರ್ಮರಣ

Published : Dec 08, 2019, 09:03 AM IST
ಕೂಡ್ಲಿಗಿ ಬಳಿ ಸರಣಿ ಅಪಘಾತ: ಇಬ್ಬರ ದುರ್ಮರಣ

ಸಾರಾಂಶ

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸರಣಿ ಅಪಘಾತ| ಇಬ್ಬರು ಸಾವು| ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಒಂದು ಲಾರಿ ಹಾಗೂ ತಮಿಳುನಾಡಿಗೆ ಹೋಗುತ್ತಿದ್ದ ಮತ್ತೊಂದು ಲಾರಿ ಹಾಗೂ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕಂಟೇನರ್‌ ಲಾರಿಗಳ ಮಧ್ಯೆ ಡಿಕ್ಕಿ|

ಕೂಡ್ಲಿಗಿ(ಡಿ.08): ಕಾನಾಹೊಸಹಳ್ಳಿ ಸಮೀಪದ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಒಂದು ಲಾರಿ ಹಾಗೂ ತಮಿಳುನಾಡಿಗೆ ಹೋಗುತ್ತಿದ್ದ ಮತ್ತೊಂದು ಲಾರಿ ಹಾಗೂ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕಂಟೇನರ್‌ ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. 

ಸರಣಿ ಅಪಘಾತವಾದ ಪರಿಣಾಮ ಚಾಲಕ ಗಣೇಶ್‌(35) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚಾಲಕ ಕೂಡ್ಲಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈತನ ಹೆಸರು ತಿಳಿದು ಬಂದಿಲ್ಲ ಎಂದು ಪೂಲೀಸರು ತಿಳಿಸಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ರವೀಂದ್ರ ಕುರುಬಗಟ್ಟಿ, ಪಿಎಸ್‌ಐ ನಾಗರಾಜು ಭೇಟಿ ನೀಡಿ ಪರಿಶೀಲಸಿದ್ದಾರೆ.

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ