Mysuru : ರೈತರಿಗೆ ತೊಂದರೆಯಾದರೆ ಕಠಿಣ ಕ್ರಮಕ್ಕೆ ಶಿಫಾರಸ್ಸು

Published : Dec 16, 2022, 05:24 AM IST
Mysuru :  ರೈತರಿಗೆ ತೊಂದರೆಯಾದರೆ ಕಠಿಣ ಕ್ರಮಕ್ಕೆ ಶಿಫಾರಸ್ಸು

ಸಾರಾಂಶ

ಭತ್ತ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೊಂದರೆಯಾಗುವ ಯಾವುದೇ ಕೆಲಸ ಮಾಡಿದರು ಅಂತಹವರ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ದ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್‌ ಎಚ್ಚರಿಕೆ ನೀಡಿದರು.

  ಕೆ.ಆರ್‌. ನಗರ (ಡಿ. 16): ಭತ್ತ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೊಂದರೆಯಾಗುವ ಯಾವುದೇ ಕೆಲಸ ಮಾಡಿದರು ಅಂತಹವರ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ದ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್‌ ಎಚ್ಚರಿಕೆ ನೀಡಿದರು.

ಪಟ್ಟಣದ ಎಪಿಎಂಸಿ (APMC)  ಆವರಣದಲ್ಲಿ ಆರಂಭವಾದ ಭತ್ತ (Paddy)  ಖರೀದಿ ಕೇಂದ್ರವನ್ನು ರೈತರೊಡಗೂಡಿ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ವರ್ಷದ ತಪ್ಪುಗಳು ಪುನಾರಾವರ್ತನೆಯಾಗದಂತೆ ಗಮನ ಹರಿಸಬೇಕೆಂದು ಸೂಚಿಸಿದರು.

ಸರ್ಕಾರದ ಆದೇಶದಂತೆ ಬೆಂಬಲ ಬೆಲೆಯಡಿ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ 2,040, ಗ್ರೇಡ್‌ ಎ. ಭತ್ತಕ್ಕೆ 2,060 ರು. ಗಳು ಮತ್ತು ರಾಗಿಗೆ 3,578 ರು. ಗಳನ್ನು ನೀಡಲಿದ್ದು, ಹೆಚ್ಚಿನ ಮಾಹಿತಿಗೆ ರೈತರು ಎಪಿಎಂಸಿ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ತಿಳಿಸಿದರು.

ಸಾಲಿಗ್ರಾಮ ತಾಲೂಕಿನ ಎಪಿಎಂಸಿ ಮತ್ತು ಚುಂಚನಕಟ್ಟೆ ಪ್ರವಾಸಿ ಮಂದಿರ ಆವರಣ ಹಾಗೂ ಕೆ.ಆರ್‌. ನಗರದ ಎಪಿಎಂಸಿ ಆವರಣದಲ್ಲಿ ಭತ್ತ ಮತ್ತು ರಾಗಿಯನ್ನು ಖರೀದಿ ಮಾಡಲಿದ್ದು, ಈ ವಿಚಾರವನ್ನು ಅಧಿಕಾರಿಗಳು ವ್ಯಾಪಕವಾಗಿ ಪ್ರಚಾರ ಮಾಡಬೇಕೆಂದು ಆದೇಶಿಸಿದರು.

ಡಿ. 16ರಿಂದ ನೋಂದಣಿ ಆರಂಭವಾಗಲಿದ್ದು, ಜ. 1ರಿಂದ ಖರೀದಿ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ ಅವರು, ಯಾವುದೇ ಕಾರಣಕ್ಕೂ ರಾತ್ರಿ ವೇಳೆ ನೋಂದಣಿ ಮಾಡಬಾರದು ಎಂದು ಕಟ್ಟಪ್ಪಣೆ ಮಾಡಿದರು.

ಟಿಎಪಿಸಿಎಂಎಸ್‌ ಅಧ್ಯಕ್ಷ ಟಿ.ಎಲ್‌. ಪರಶಿವಮೂರ್ತಿ, ತಹಸೀಲ್ದಾರ್‌ಗಳಾದ ಎಸ್‌. ಸಂತೋಷ್‌, ಮೋಹನಕುಮಾರ್‌, ಎಪಿಎಂಸಿ ಕಾರ್ಯದರ್ಶಿ ಬಿ. ಮಹೇಶ, ಮುಂಜನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಅನೀಫ್‌ಗೌಡ, ಆಹಾರ ಶಿರಸ್ತೇದಾರ್‌ ಸದಾನಂದ, ನಿರೀಕ್ಷಕರಾದ ಡಿ.ಆರ್‌. ಕುಮಾರ್‌, ಕೆ.ಪಿ. ಸುರೇಶ್‌ ಮತ್ತು ರೈತರು ಇದ್ದರು.

ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ

ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್ 

ಕೊಡಗು (ಡಿ.12): ಮಾಂಡೌಸ್ ಚಂಡಮಾರುತ್ತದ ಪರಿಣಾಮವಾಗಿ ಕೊಡಗು ಜಿಲ್ಲೆಯಲ್ಲೂ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ಕೊಯ್ಲಿಗೆ ಬಂದಿರುವ ಭತ್ತ, ಕಾಫಿ ಹಾಗೂ ಕರಿಮೆಣಸು ಬೆಳೆಗಳು ನಷ್ಟವಾಗುವಾಗುತ್ತಿವೆ. ಇದರಿಂದ ವರ್ಷದಿಂದ ಕಷ್ಟಪಟ್ಟು ಬೆಳೆದಿದ್ದ ಬೆಳೆ ಹಾಳಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುವ ಆತಂಕದಲ್ಲಿ ಇದ್ದಾರೆ. ಕುಶಾಲನಗರ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕುಗಳು ಸೇರಿದಂತೆ ಎಲ್ಲೆಡೆ ಸುತ್ತಮುತ್ತ ಸಾಕಷ್ಟು ಮಳೆಯಾಗುತ್ತಿದೆ. ಹೀಗಾಗಿ ರೈತರು ಕಷ್ಟಪಟ್ಟು ಬೆಳೆದಿರುವ ಭತ್ತದ ಬೆಳೆ , ಮಳೆಗೆ ಉದುರಿ ಹೋಗುತ್ತಿದೆ. ಕೊಡಗಿನಲ್ಲಿ ಹಲವು ವರ್ಷಗಳ ಹಿಂದಿನ ಸ್ಥಿತಿಗೆ ಹೋಲಿಸಿದರೆ ಪ್ರಸ್ತುತ ಭತ್ತ ಬೆಳೆಯುವ ರೈತರ ಸಂಖ್ಯೆ ಕಡಿಮೆ ಆಗಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರ ಗದ್ದೆಗಳನ್ನು ತುಳಿದು ಹಾಳು ಮಾಡುತ್ತಿವೆ. ಇದರಿಂದ ಬೇಸತ್ತ ರೈತರು ಭತ್ತ ಬೆಳೆಯುವುದನ್ನೇ ಕಡಿಮೆ ಮಾಡಿದ್ದಾರೆ. ಇದರ ನಡುವೆ ರೈತರು ಕಷ್ಟಪಟ್ಟು ಬೆಳೆದಿದ್ದ ಭತ್ತದ ಬೆಳೆಗಳು ಬಲಿತು ಸಂಪೂರ್ಣವಾಗಿ ಒಣಗಿ ನಿಂತಿವೆ. ಹೀಗಾಗಿ ಅದನ್ನು ಈಗಾಗಲೇ ಕೊಯ್ಲು ಮಾಡಬೇಕಾಗಿತ್ತು. ಆದರೆ ನಾಲ್ಕು ದಿನಗಳಿಂದ ಆಗಿಂದಾಗ್ಗೆ ಮಳೆ ಸುರಿಯುತ್ತಿರುವುದರಿಂದ ಕೊಯ್ಲು ಮಾಡಲು ಸಾಧ್ಯವಾಗುತ್ತಿಲ್ಲ. ಕೊಯ್ಲು ಮಾಡಿದರೆ ಗದ್ದೆಯಲ್ಲಿ ಭತ್ತದ ಹುಲ್ಲು ನೆನೆದು ಕರಗುವ ಆತಂಕವಿದೆ. ಗದ್ದೆಯಲ್ಲಿ ಹುಲ್ಲು ನೆನೆಯಿತ್ತೆಂದರೆ ಮತ್ತೆ ಅದನ್ನು ಒಣಗಿಸಿ ಒಕ್ಕಣೆ ಮಾಡಲು ಸಾಗಿಸುವುದು ಇನ್ನೂ ಕಷ್ಟದ ಕೆಲಸ. ಒಣಗಲಿ ಎಂದು ಗದ್ದೆಯಲ್ಲಿ ಬಿಟ್ಟರೆ ಅಲ್ಲಿಯೇ ಭತ್ತವೆಲ್ಲಾ ಮೊಳಕೆಯೊಡೆದು ಹಾಳಾಗಲಿದೆ.

ಹೀಗಾಗಿ ಕೊಯ್ಲು ಮಾಡುತ್ತಿಲ್ಲ ಎನ್ನುತ್ತಾರೆ ರೈತರು. ಕೊಯ್ಲು ಮಾಡದೆ  ಹಾಗೆಯೇ ಬಿಟ್ಟಿರುವುದರಿಂದ ಮಳೆಗೆ ಸಾಕಷ್ಟು ಭತ್ತ ಉದುರಿ ಹೋಗುತ್ತಿದೆ. ಜೊತೆಗೆ ಮಳೆಯಲ್ಲಿ ನೆನೆದು ಭತ್ತ ಕಪ್ಪಾಗುತ್ತಿದೆ. ಇನ್ನಷ್ಟು ಜೊಳ್ಳುಗಳಾಗುತ್ತಿವೆ. ಇದರಿಂದ ಅರ್ಧಕ್ಕೆ ಅರ್ಧಷ್ಟು ಬೆಳೆ ನಷ್ಟವಾಗುವ ಆತಂಕ ಎದುರಿಸುತ್ತಿದ್ದಾರೆ. ಮಳೆ ಹೀಗೆ ಮುಂದುವರೆದಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಲಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಪ್ರದೀಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಗಣಿಕಾರಿಕಾ ಕೇಂದ್ರದಲ್ಲಿ ಭೂಸುಕಿತ, 620 ಅಡಿ ಆಳದಲ್ಲಿ ಕಾಫಿ ಪುಡಿಯಿಂದ 9 ದಿನ ಬದುಕುಳಿದ ಕಾರ್ಮಿಕರು!

ಕೊಡಗಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಕಾಫಿ ಈಗಾಗಲೇ ಹಣ್ಣಾಗಿದ್ದು, ಕಾಫಿ ಕೊಯ್ಲು ಮಾಡಲಾಗುತಿತ್ತು. ಆದರೆ ಮಳೆ ಸುರಿಯುತ್ತಿರುವುದರಿಂದ ಕಾಫಿ ಹಣ್ಣನ್ನು ಕೊಯ್ಲು ಮಾಡಲು ಸಾಧ್ಯವಾಗುತ್ತಿಲ್ಲ. ಕೊಯ್ಲು ಮಾಡಿದರೆಂದರೆ ಮಳೆ ಸುರಿಯುತ್ತಿರುವುದರಿಂದ ಕಾಫಿ ಪಲ್ಪಿಂಗ್ ಮಾಡಿ ಒಣಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗಿಡದಲ್ಲಿಯೇ ಕಾಫಿ ಹಣ್ಣು ಉಳಿದಿದ್ದು, ಮಳೆಗೆ ಗಿಡದಲ್ಲಿಯೇ ಹಣ್ಣು ಒಡೆದು ಹಾಳಾಗುತ್ತಿದೆ. ಹೀಗಾಗಿ ಹಣ್ಣು ಕೊಳೆತು ಉದುರಿ ಭೂಮಿ ಸೇರುತ್ತಿದೆ. ಅಷ್ಟೇ ಅಲ್ಲ ಜೊತೆಗೆ ಕಾಫಿ ತೋಟದಲ್ಲಿಯೇ ಪರ್ಯಾಯ ಆದಾಯದ ಮೂಲವಾಗಿರುವ ಕಾಳುಮೆಣಸು ಬೆಳೆಕೂಡ ಹಾಳಾಗುತ್ತಿದೆ. ಕಾಳುಮೆಣಸು ಫಸಲು ಬಂದಿದ್ದ ಅದನ್ನು ಕೊಯ್ಲು ಮಾಡಿ ಒಣಗಿಸಲು ಆಗುತ್ತಿಲ್ಲ.

PREV
Read more Articles on
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!