ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕೊಳಚೆ ನೀರು

Published : Jun 07, 2024, 11:39 PM ISTUpdated : Jun 07, 2024, 11:41 PM IST
ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕೊಳಚೆ ನೀರು

ಸಾರಾಂಶ

ಗರ್ಭಗುಡಿಗೆ ಹೊಕ್ಕ ನೀರು ಹೊರಹಾಕಲು ದೇವಸ್ಥಾನದ ಸಿಬ್ಬಂದಿ ಪರದಾಡುತ್ತಿದ್ದಾರೆ. ಕಳೆದ ವರ್ಷವೂ ಮಹಾಬಲೇಶ್ವರನ ಆತ್ಮಲಿಂಗವರೆಗೂ ಕೊಳಚೆ ನೀರು ಸಾಗಿತ್ತು. ಗೋಕರ್ಣದ ಸಂಗಮನಾಲಾದ ಮೂಲಕ ಸಮುದ್ರ ಸೇರಬೇಕಿದ್ದ ಮಳೆ ನೀರು ಆದರೆ, ಶ್ರೀ ಮಹಾಬಲೇಶ್ವರ ಕ್ಷೇತ್ರದ ಸೋಮಸೂತ್ರದಿಂದ ಗರ್ಭಗುಡಿಗೆ ನುಗ್ಗಿ ಮಹಾಪೂಜೆಗೆ ತೊಡಕು ಉಂಟಾಗಿತ್ತು. 

ಕಾರವಾರ(ಜೂ.07): ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾದ ಪರಿಣಾಮ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದೆ. ಕ್ಷೇತ್ರದ ಆತ್ಮಲಿಂಗದವರೆಗೆ ಕೊಳಚೆ ನೀರು ಹೊಕ್ಕಿದೆ. 

ಗರ್ಭಗುಡಿಗೆ ಹೊಕ್ಕ ನೀರು ಹೊರಹಾಕಲು ದೇವಸ್ಥಾನದ ಸಿಬ್ಬಂದಿ ಪರದಾಡುತ್ತಿದ್ದಾರೆ. ಕಳೆದ ವರ್ಷವೂ ಮಹಾಬಲೇಶ್ವರನ ಆತ್ಮಲಿಂಗವರೆಗೂ ಕೊಳಚೆ ನೀರು ಸಾಗಿತ್ತು. ಗೋಕರ್ಣದ ಸಂಗಮನಾಲಾದ ಮೂಲಕ ಸಮುದ್ರ ಸೇರಬೇಕಿದ್ದ ಮಳೆ ನೀರು ಆದರೆ, ಶ್ರೀ ಮಹಾಬಲೇಶ್ವರ ಕ್ಷೇತ್ರದ ಸೋಮಸೂತ್ರದಿಂದ ಗರ್ಭಗುಡಿಗೆ ನುಗ್ಗಿ ಮಹಾಪೂಜೆಗೆ ತೊಡಕು ಉಂಟಾಗಿತ್ತು. 

ಕೊಡಗು: ಕುಸಿಯುವ ಹಂತಕ್ಕೆ ತಲುಪಿದ ಆನೆಹಳ್ಳ ಸೇತುವೆ, ಆತಂಕದಲ್ಲಿ ಜನತೆ..!

ಸ್ಮಶಾನಕಾಳಿ ಮಂದಿರದ ಹತ್ತಿರ ಸಂಗಮ ನಾಲಾಕ್ಕೆ ಸೇರುವ ಬಳಿ ಸೇತುವೆ ನಿರ್ಮಿಸಲಾಗಿದೆ. ಸೇತುವೆ ಅಡಿಪಾಯದ ಎತ್ತರ ಹೆಚ್ಚಿಸಿರೋದು ಹಾಗೂ ಪಕ್ಕದಲ್ಲಿ ಹಾಕಿದ ಮಣ್ಣು ತೆಗೆಯದಿರೋದೇ ಈ ಅವಾಂತರಕ್ಕೆ ಕಾರಣ ಎಂದು ತಿಳಿದು ಬಂದಿದೆ. 

ಸಂಗಮ ನಾಲಾ ಸಮುದ್ರ ಸೇರುವಲ್ಲಿ ಮರಳ ದಿನ್ನೆ ಕಡಿದು ನೀರು ಸಾಗುವಂತೆ ಮಾಡಲು ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಸುರಿಯುವ ಮಳೆಯನ್ನು ಲೆಕ್ಕಿಸಿದೇ ಶ್ರಮಿಸಿ ಗರ್ಭಗುಡಿಯಲ್ಲಿ ನೀರು ಖಾಲಿ ಮಾಡುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕ್ಷೇತ್ರದ ಗರ್ಭಗುಡಿಯನ್ನು ಸ್ವಚ್ಛಗೊಳಿಸಿದ ಬಳಿಕ ಪೂಜೆ‌ ಪುನಸ್ಕಾರ ನಡೆದಿದೆ. 

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ