ರಾಯಣ್ಣನ ಪ್ರತಿಮೆ ಸ್ಥಳಕ್ಕೆ ಶಿವಾಜಿ ಚೌಕ ನಾಮಕರಣ

Kannadaprabha News   | Asianet News
Published : Sep 04, 2020, 11:17 AM IST
ರಾಯಣ್ಣನ ಪ್ರತಿಮೆ ಸ್ಥಳಕ್ಕೆ ಶಿವಾಜಿ ಚೌಕ ನಾಮಕರಣ

ಸಾರಾಂಶ

ರಾಯಣ್ಣನ ಪ್ರತಿಮೆ ಇರುವ ಸ್ಥಳಕ್ಕೆ ಶಿವಾಜಿ ಚೌಕ ಎಂದು ಹೆಸರು ಇಡಲಾಗಿದೆ. ಈ ಮೂಲಕ ಸಾಮರಸ್ಯದ ಸಂದೇಶ ಸಾರಲಾಯಿತು.

ಬೆಳಗಾವಿ (ಸೆ.04): ತೀವ್ರ ವಿವಾದಕ್ಕೊಳಗಾಗಿ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಇರುವ ವೃತ್ತಕ್ಕೆ ಸಂಧಾನ ಸೂತ್ರದಂತೆ ‘ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಚೌಕ’ ಎಂದು ನಾಮಫಲಕ ಅನಾವರಣಗೊಳಿಸುವ ಮೂಲಕ ಈ ವೃತ್ತಕ್ಕೆ ಅಧಿಕೃತವಾಗಿ ನಾಮಕರಣ ಮಾಡಲಾಯಿತು. 

ಕನ್ನಡ ಮತ್ತು ಮರಾಠಿ ಎರಡೂ ಭಾಷೆಯಲ್ಲಿ ನಾಮಫಲಕದ ಮೇಲೆ ಬರೆಸುವ ಮೂಲಕ ಸಾಮರಸ್ಯದ ಸಂದೇಶನ್ನೂ ಸಾರಲಾಯಿತು.

ರಾಯಣ್ಣ, ಚನ್ನಮ್ಮ, ಕನಕರ ಭಾವಚಿತ್ರಕ್ಕೆ ರಾಡಿ ಎರಚಿ ಅವಮಾನ : ಪ್ರಕ್ಷುಬ್ದ ..

ಗುರುವಾರ ಗ್ರಾಮದ ಮರಾಠಿ ಭಾಷಿಕ ಪ್ರಮುಖರು 9/15 ಅಡಿಯ ಬೃಹತ್‌ ನಾಮಫಲಕ ಅನಾವರಣಗೊಳಿಸಿದರು. ಇದಕ್ಕೂ ಮೊದಲು ಛತ್ರಪತಿ ಶಿವಾಜಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಈ ಇಬ್ಬರೂ ಮಹಾಪುರುಷರ ಪರವಾಗಿ ಘೋಷಣೆಗಳು ಮೊಳಗಿದವು. ಶಿವಾಜಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

PREV
click me!

Recommended Stories

ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಸಿಗ್ತಿದ್ದಂತೆ ಹಮಾಲಿಯಾಗಿದ್ದ ತಂದೆಯ ನೆನೆದು ಭಾವುಕರಾದ ಶ್ರೀನಿವಾಸ್ ದಾಸಕರಿಯಪ್ಪ
ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆ ಕೇಸ್ ಸ್ಫೋಟಕ ಮಾಹಿತಿ, ಆರೋಪಿ ಶಬೀಲ್ ಕೌರ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು