ಶಿವಮೊಗ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಕಲ ಸಿದ್ಧತೆ

Kannadaprabha News   | Asianet News
Published : Jun 24, 2020, 01:50 PM IST
ಶಿವಮೊಗ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಕಲ ಸಿದ್ಧತೆ

ಸಾರಾಂಶ

ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ 24,904 ಹಾಗೂ 2 ಖಾಸಗಿ ಕೇಂದ್ರಗಳಲ್ಲಿ ಖಾಸಗಿಯಾಗಿ 610 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೊರೋನಾ ಭೀತಿಯ ನಡುವೆ ಸುಗಮವಾಗಿ  ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಶಿವಮೊಗ್ಗ(ಜೂ.24): ಜಿಲ್ಲೆಯಲ್ಲಿ ಜೂ. 25 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 84 ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಜಿಲ್ಲೆಯಲ್ಲಿ ಈ ಬಾರಿ 24,904 ಹಾಗೂ 2 ಖಾಸಗಿ ಕೇಂದ್ರಗಳಲ್ಲಿ ಖಾಸಗಿಯಾಗಿ 610 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್‌ ತಿಳಿಸಿದ್ದಾರೆ.

ಸಾರಿಗೆ ವ್ಯವಸ್ಥೆ ಬಯಸಿದ ವಿದ್ಯಾರ್ಥಿಗಳಿಗಾಗಿ 142 ಖಾಸಗಿ ಬಸ್‌ ಹಾಗೂ 56 ಸರ್ಕಾರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ದಿನಂಪ್ರತಿ ಓಡಾಡುವ ಸರ್ಕಾರಿ ಬಸ್‌ ಮಾರ್ಗದ ಬಸ್‌ನಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 7ಕ್ಕೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಮಾಡಲಾಗಿದೆ. ತಾತ್ಕಾಲಿಕವಾಗಿ ಹಾಸ್ಟೆಲ್‌ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಿದೆ. ಕೇಂದ್ರಗಳ ಸುತ್ತಾ ಇರುವ ಎಲ್ಲಾ ಜೆರಾಕ್ಸ್‌ ಮತ್ತು ಸೈಬರ್‌ ಸೇವಾ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಎಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣಾ ವ್ಯವಸ್ಥೆ ಕಲ್ಪಿಸಲಾಗಿದೆ.

ಸಿಲಿಕಾನ್ ಸಿಟಿ ಗಂಡು ಮಕ್ಕಳೇ ಹುಷಾರ್: ಪುರುಷರನ್ನೇ ಬೆಂಬಿಡದೆ ಕಾಡ್ತಿದೆ ಡೆಡ್ಲಿ ಕೊರೋನಾ..!

ಕೊಠಡಿಯೊಳಗೆ ಬೆಳಗ್ಗೆ 8.30 ರಿಂದ ಪ್ರವೇಶಾವಕಾಶ. 10 ಗಂಟೆಯ ತನಕ ಮಕ್ಕಳು ಕೊಠಡಿಯಲ್ಲಿ ಅಭ್ಯಾಸ ಮಾಡಿಕೊಂಡು ನಂತರ ಬ್ಯಾಗನ್ನು ಕೊಠಡಿ ಹೊರಭಾಗದಲ್ಲಿ ಶೇಖರಿಸಿಡುವುದು. ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳ ಮೇಲೆ ಹೆಸರು ಮತ್ತು ನೋಂದಣಿ ಸಂಖ್ಯೆಯನ್ನು ಹಾಕಬೇಕು. ಮೊಬೈಲ್‌ ಮತ್ತು ವಿದ್ಯುದ್ಮಾನ ಉಪಕರಣಗಳನ್ನು ನಿಷೇಧಿಸಿದೆ. ಬೇಸಿಕ್‌ ವಾಚ್‌ ಮಾತ್ರ ತರಲು ಅವಕಾಶ ನೀಡಿದೆ ಎಂದು ಹೇಳಿದರು.

ಈ ಕೇಂದ್ರಗಳನ್ನು ಪರೀಕ್ಷೆಗೆ 2 ದಿನ ಮುನ್ನಾ ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದ್ದು, ಪೋಷಕರು ಮತ್ತು ಮಕ್ಕಳು ಆತಂಕ ಪಡುವ ಅಗತ್ಯವಿಲ್ಲ. ಪ್ರತಿ ದಿನ ಪರೀಕ್ಷೆ ಮುಗಿದ ಮೇಲೆ ಪುನಃ ಕೊಠಡಿಗಳನ್ನು ರಾಸಾಯನಿಕಗಳಿಂದ ಶುದ್ಧೀಕರಿಸಲಾಗುವುದು. ಕೇಂದ್ರದ ಒಳಗೆ ಮತ್ತು ಹೊರಗೆ ಮಕ್ಕಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಮಾಸ್ಕ್‌ ಧಾರಣೆ ಕಡ್ಡಾಯಗೊಳಿಸಲಾಗಿದೆ.

ಖಾಸಗಿ ಶಾಲೆಗಳ ಮತ್ತು ಒಪ್ಪಂದದ ಮೇಲೆ ಮಾರ್ಗಗಳಲ್ಲಿ ಬರುವ ಸರ್ಕಾರಿ ಬಸ್‌ಗಳಿಗೆ ಈಗಾಗಲೇ ನೀಡಿರುವ ಸಮಯಕ್ಕೆ ಸರಿಯಾಗಿ ಸಿದ್ಧರಾಗಿ ಪಿಕ್‌ಅಪ್‌ ಪಾಯಿಂಟ್‌ಗಳಲ್ಲಿ ಇರಬೇಕು. ಬಸ್‌ನಲ್ಲಿ ಬರುವ ಮಕ್ಕಳು ಶಾಲೆಗೆ ಆಗಮಿಸಿದ ಬಸ್‌ನಲ್ಲೇ ವಾಪಾಸ್ಸು ಹೋಗಬೇಕು. ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡ ಖಾಸಗಿ ಅಭ್ಯರ್ಥಿಗಳಿಗೆ ಪ್ರತೀ ತಾಲೂಕು ಕೇಂದ್ರದ ಬಸ್‌ನಿಲ್ದಾಣದಿಂದ ಜಿಲ್ಲಾ ಕೇಂದ್ರದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದ್ದಾರೆ.

PREV
click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಲಾಪ ಮುಂದಕ್ಕೆ ಇದೇ ಮೊದಲು