ಗುಡ್ ನ್ಯೂಸ್ : ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ಶೀಘ್ರ ರೈಲು ಮಾರ್ಗ

Published : Jan 18, 2021, 04:07 PM IST
ಗುಡ್ ನ್ಯೂಸ್ : ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ಶೀಘ್ರ ರೈಲು ಮಾರ್ಗ

ಸಾರಾಂಶ

ಶೀಘ್ರವೇ ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ರೈಲು ಮಾರ್ಗ ನಿರ್ಮಾಣವಾಗಲಿದೆ ರಾಜ್ಯ ಸರ್ಕಾರದಿಂದ ರೈಲು ಮಾರ್ಗಕ್ಕೆ ಭೂಮಿ ಮಂಜೂರು  ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಮಾಹಿತಿ   

ಶಿವಮೊಗ್ಗ (ಜ.18):  ಶಿವಮೊಗ್ಗ - ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಮಿ ನೀಡಿದ್ದು ಶೀಘ್ರವಾಗಿ ಕಾಮಗಾರಿ ನಡೆಯಲಿದೆ  ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ. 

ಭದ್ರಾವತಿ ಯಲ್ಲಿ RAF ಘಟಕ ಆರಂಭದಿಂದ ಅಲ್ಲಿ ಟೌನ್ ಶಿಫ್ ನಿರ್ಮಾಣ ಆಗಲಿದೆ ಎಂದು ಶಿವಮೊಗ್ಗದಲ್ಲಿಂದು  ಸಂಸದ ರಾಘವೇಂದ್ರ ಹೇಳಿದರು. 

ಬೆಂಗ್ಳೂರು ಸಬರ್ಬನ್‌ ರೈಲು ಯೋಜನೆ: ಮಾರ್ಗ ನಿರ್ಮಾಣ ಅಂತಿಮ .

ಅಲ್ಲದೇ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಕೇಂದ್ರ ತೆರೆಯಲಾಗುತ್ತದೆ. ಅಲ್ಲದೇ ಕುವೆಂಪು ವಿಶ್ವವಿದ್ಯಾಲಯದಲ್ಲಿ ಡಿಆರ್ ಡಿಒ ಕೇಂದ್ರ ಆರಂಭವಾಗಲಿದೆ ಎಂದು ರಾಘವೇಂದ್ರ ಮಾಹಿತಿ ನೀಡಿದರು. 

ಈ ಹಿನ್ನೆಲೆಯಲ್ಲಿ ಮತ್ತೊಂದು ಕೇಂದ್ರೀಯ ವಿದ್ಯಾಲಯ ಆರಂಭಿಸಲಾಗುತ್ತಿದ್ದು ತ್ಯಾವರೆ ಚಟ್ನಳ್ಳಿಯಲ್ಲಿ  ಐದು ಏಕರೆ ಜಾಗ ಗುರುತಿಸಲಾಗಿದೆ ಎಂದೂ ಸಂಸದರು ಮಾಹಿತಿ ನೀಡಿದರು. 

PREV
click me!

Recommended Stories

ವಿಜಯಪುರ-ಯಶವಂತಪುರ ರೈಲಿನ ಇಂಜಿನ್ ವೈಫಲ್ಯ; ಬಸವ ಎಕ್ಸ್‌ಪ್ರೆಸ್ ತಡೆದು ಕಲ್ಲು ತೂರಾಟ
ಆರ್‌ಸಿಬಿ ಫ್ಯಾನ್ಸ್‌ಗೆ ಬಿಗ್‌ ಅಪ್ಡೇಟ್‌; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!