Shivamogga Crime News: ರೌಡಿಶೀಟರ್ 'ಬ್ಯಾಟ್ ನರಸಿಂಹ' ಮಚ್ಚಿನೇಟಿಗೆ ಬಲಿ; ಗ್ಯಾಂಗ್ ವಾರ್ ಶಂಕೆ!

Published : Jun 12, 2026, 10:50 PM IST
Shivamogga Bat Narasimha

ಸಾರಾಂಶ

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ 'ಬ್ಯಾಟ್ ನರಸಿಂಹ' ಎಂಬ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಂಬು ಮತ್ತು ಆತನ ಗ್ಯಾಂಗ್ ಈ ಕೃತ್ಯ ಎಸಗಿದ್ದು, ಇದು ಗ್ಯಾಂಗ್ ವಾರ್‌ನ ಭಾಗವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. 

ಶಿವಮೊಗ್ಗ (ಜೂ.12): ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ನಗರದ ಲಷ್ಕರ್ ಮೊಹಲ್ಲಾದಲ್ಲಿ ಇಂದು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಹಾಗೂ ಇಸ್ಪೀಟ್ ಗ್ಯಾಂಬ್ಲರ್ ಆಗಿದ್ದ 'ಬ್ಯಾಟ್ ನರಸಿಂಹ' ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸಿನೆಮಾ ಶೈಲಿಯಲ್ಲಿ ದಾಳಿ:

ಕೊಲೆಯಾದ ನರಸಿಂಹ ಮತ್ತೊಬ್ಬ ಕುಖ್ಯಾತ ರೌಡಿಶೀಟರ್ ಕಾಡಾ ಕಾರ್ತಿಕ್‌ನ ಆಪ್ತ ಸಹಚರ ಎಂದು ತಿಳಿದುಬಂದಿದೆ. ಇಂದು ಲಷ್ಕರ್ ಮೊಹಲ್ಲಾ ಬಳಿ ನರಸಿಂಹ ಒಂಟಿಯಾಗಿ ಸಿಕ್ಕಿದ್ದನ್ನು ಗಮನಿಸಿದ ಅಂಬು ಮತ್ತವನ ಗ್ಯಾಂಗ್, ಮಚ್ಚು ಮತ್ತು ಲಾಂಗ್‌ಗಳಂತಹ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿದೆ. ರಕ್ತದ ಮಡುವಿನಲ್ಲಿ ಬಿದ್ದ ನರಸಿಂಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ದಾಳಿ ನಡೆಸಿದ ಅಂಬು ಮತ್ತು ಆತನ ಸಹಚರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ:

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಕೋಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಹತ್ಯೆಯು ಶಿವಮೊಗ್ಗದ ರೌಡಿಗಳ ನಡುವಿನ ಗ್ಯಾಂಗ್ ವಾರ್‌ನ ಭಾಗವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಅಂಬು ಮತ್ತು ಆತನ ಗ್ಯಾಂಗ್‌ಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಲಷ್ಕರ್ ಮೊಹಲ್ಲಾ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

PREV
Read more Articles on
click me!

Recommended Stories

Kodagu Kidnap Case: ಶಾಲೆ ಮುಂದೆ 5 ವರ್ಷದ ಮಗುವನ್ನು ಕರೆದೊಯ್ದ ತಂದೆ? ತಾಯಿಯ ಕಣ್ಣೀರು!
ಮಂಡ್ಯದಲ್ಲಿ ಜಮೀನು ಪೋಡಿ ಮಾಡಿಕೊಡಲು ಲಂಚ ವಸೂಲಿ; ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆರ್‌ಐ ಮಧುಸೂದನ್!