ಯುವ ಸ್ವಾಮೀಜಿ ಆತ್ಮಹತ್ಯೆ ಕೇಸ್ : 8 ದಿನದಲ್ಲೇ ಮತ್ತೋರ್ವ ಉತ್ತರಾಧಿಕಾರಿ

Kannadaprabha News   | Asianet News
Published : Dec 01, 2020, 07:44 AM IST
ಯುವ ಸ್ವಾಮೀಜಿ ಆತ್ಮಹತ್ಯೆ ಕೇಸ್ : 8 ದಿನದಲ್ಲೇ ಮತ್ತೋರ್ವ ಉತ್ತರಾಧಿಕಾರಿ

ಸಾರಾಂಶ

ಕಾರ್ಜುವಳ್ಳಿ ಮಠದಲ್ಲಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಸ್ವಾಮೀಜಿಯನ್ನು ನೇಮಕ ಮಾಡಲಾಗಿದೆ. 

ಬಾಳೆಹೊನ್ನೂರು (ನ.01): ಹಾಸನ ಜಿಲ್ಲೆ ಅಲೂರು ತಾಲೂಕಿನ ಶ್ರೀಮದ್ರಂಭಾಪುರಿ ಶಾಖಾ ಕಾರ್ಜುವಳ್ಳಿ ಹಿರೇಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮಿಗಳು ಅಕಾಲಿಕವಾಗಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಉತ್ತರಾಧಿಕಾರಿಯಾಗಿ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿಯ ಸಿದ್ಧಲಿಂಗ ದೇವರನ್ನು ಶ್ರೀ ರಂಭಾಪುರಿ ಜಗದ್ಗುರುಗಳು ನಿಯುಕ್ತಿಗೊಳಿಸಿದ್ದಾರೆ.

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವ ಸ್ವಾಮೀಜಿ : ಸಿಕ್ಕ ಡೆತ್ ನೋಟ್

ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರು ಶಾಖಾ ಮಠ ಕಾರ್ಜುವಳ್ಳಿ ಹಿರೇಮಠದಲ್ಲಿ  ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದರು. 

ಅವರ ಸಾವಿನ ವೇಳೆ ಡೆತ್ ನೋಟ್ ಸಹ ಲಭ್ಯವಾಗಿತ್ತು. ಅದರಲ್ಲಿ ತನ್ನ ಸಾವಿಗೆ ತಾವೇ ಕಾರಣ ಎಮದು ಬರೆದಿದ್ದರು. ಈ ನಿಟ್ಟಿನಲ್ಲಿ  ಇದೀಗ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.
 

PREV
click me!

Recommended Stories

ಗದಗ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ; ತುಂಡಾದ 'ಡ್ಯಾನ್ಸಿಂಗ್ ಫ್ಲೈ' ತೊಟ್ಟಿಲು
ಭ್ರೂಣಹ*ತ್ಯೆ ತಡೆಗೆ ತಂದ ಭಾಗ್ಯಲಕ್ಷ್ಮಿ ಹೆಣ್ಮಕ್ಕಳ ಭವಿಷ್ಯಕ್ಕೆ ಆಸರೆ: ಸಂಸದ ಬಿ.ವೈ.ರಾಘವೇಂದ್ರ