ಶಾಸಕ ಬಸವರಾಜ ರಾಯರೆಡ್ಡಿ ಹಿಡಿದ ಕೆಲಸ ಬಿಡದ ಛಲಗಾರ: ಸಿಎಂ ಸಿದ್ದರಾಮಯ್ಯ

Published : Mar 17, 2026, 08:45 PM IST
Siddaramaiah

ಸಾರಾಂಶ

ನನ್ನ ಕ್ಷೇತ್ರದಲ್ಲೂ ನಿಮ್ಮ ರಾಯರೆಡ್ಡಿಯಷ್ಟು ನಾನ್ ಕೆಲಸ ಮಾಡಿಲ್ಲ, ಅಷ್ಟು ಅಭಿವೃದ್ಧಿ ಕೆಲಸಗಾರ ನಿಮ್ಮ ಶಾಸಕ ಬಸವರಾಜ ರಾಯರೆಡ್ಡಿ. ಹಿಡಿದ ಕೆಲಸ ಬಿಡದ ಛಲಗಾರ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಯಲಬುರ್ಗಾ (ಮಾ.17): ನನ್ನ ಕ್ಷೇತ್ರದಲ್ಲೂ ನಿಮ್ಮ ರಾಯರೆಡ್ಡಿಯಷ್ಟು ನಾನ್ ಕೆಲಸ ಮಾಡಿಲ್ಲ, ಅಷ್ಟು ಅಭಿವೃದ್ಧಿ ಕೆಲಸಗಾರ ನಿಮ್ಮ ಶಾಸಕ ಬಸವರಾಜ ರಾಯರೆಡ್ಡಿ. ಹಿಡಿದ ಕೆಲಸ ಬಿಡದ ಛಲಗಾರ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಯಲಬುರ್ಗಾ ಕ್ಷೇತ್ರಕ್ಕೆ ವಿಶೇಷ ಅನುದಾನ ಘೋಷಣೆಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಯಲಬುರ್ಗಾ ಕ್ಷೇತ್ರದ ಮಹಿಳಾ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು ಹಾಗೂ ಜನತೆ ಪರವಾಗಿ ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಜರುಗಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಶಾಸಕ ರಾಯರೆಡ್ಡಿ ಕೆಲಸಗಾರ ಕಣಪ್ಪ. ಅಂತಹ ವ್ಯಕ್ತಿಯನ್ನು ಸದಾ ಬೆಂಬಲಿಸಬೇಕು. ನನ್ನ ಕ್ಷೇತ್ರದಲ್ಲೂ ಆತನಷ್ಟು ನಾನ್ ಕೆಲಸ ಮಾಡಿಲ್ಲ. ಅಭಿವೃದ್ಧಿಗೆ ಸದಾ ಮುಂದಿರ್ತಾನೆ. ರಾಜ್ಯ ಬಜೆಟಿನಲ್ಲೂ ಆತನ ಕೊಡುಗೆ ಬಹಳ ಇದೆ ಎಂದಿದ್ದಾರೆ. ರಾಯರೆಡ್ಡಿ ಯಲಬುರ್ಗಾ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರಾಗಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಉತ್ತಮ ಸಲಹೆ ನೀಡಿದ್ದು, ಜನಸ್ನೇಹಿ ಬಜೆಟ್ ಆಗಿದೆ. ಇದಕ್ಕೆ ಅವರ ಶ್ರಮ ಅಪಾರವಾಗಿದೆ. ಅನುಭವ, ಬುದ್ಧಿವಂತಿಕೆಯಿಂದ ಯಲಬುರ್ಗಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕ್ಷೇತ್ರದ ಜನತೆ ನನಗೆ ಸನ್ಮಾನಿಸಿದ್ದು ಧನ್ಯವಾದ ತಿಳಿಸುತ್ತೇನೆ. ಅವರನ್ನು ಯಲಬುರ್ಗಾ ಕ್ಷೇತ್ರ ಜನರು ನಿರಂತರ ಆಶೀರ್ವದಿಸಬೇಕು ಎಂದರು‌

ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡಿ, ಕ್ಷೇತ್ರದ 2 ಸಾವಿರ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಬೇವೂರಿಗೆ ನೂತನ ಪ್ರಥಮ ದರ್ಜೆ ಕಾಲೇಜು, ಜಿಸಿಟಿಸಿಗೆ ₹20 ಕೋಟಿ ಅನುದಾನ, ಎರೆ ಭಾಗದ 23 ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಸುಮಾರ ₹125 ಕೋಟಿ ಅನುದಾನ, ಶಿರೂರು ಪಿಯು ಕಾಲೇಜು, ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ, ಸೇರಿದಂತೆ ಕಳೆದ ಎರಡೂವರೆ ವರ್ಷದಲ್ಲಿ ಯಲಬುರ್ಗಾ- ಕುಕನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಕ್ಷೇತ್ರಕ್ಕೆ ನೀಡಿ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದರು.

ಮಹಿಳೆಯರು, ವಿದ್ಯಾರ್ಥಿಗಳಿಂದ ಸನ್ಮಾನ

ಸಿಎಂ ಸಿದ್ದರಾಮಯ್ಯ ಅವರನ್ನು ಯಲಬುರ್ಗಾದ ಬಿಎಸ್ಸಿ ನರ್ಸಿಂಗ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಿಜಿ ಸೆಂಟರ್ ವಿದ್ಯಾರ್ಥಿಗಳು, ವಿವಿಧ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸನ್ಮಾನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಹನುಮಂತಗೌಡ ಚೆಂಡೂರು, ಯಂಕಣ್ಣ ಯರಾಶಿ, ಶರಣಪ್ಪ ಗಾಂಜಿ, ಹಂಪಯ್ಯಸ್ವಾಮಿ ಹಿರೇಮಠ, ಮಂಜುನಾಥ ಕಡೇಮನಿ, ಡಾ. ಶಿವನಗೌಡ ದಾನರೆಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ಸಂಗಮೇಶ ಗುತ್ತಿ, ಮಂಜುನಾಥ ಕಡೆಮನಿ, ರಾಘವೇಂದ್ರ ಕಾತರಕಿ, ಸಂತೋಷ ಬಿನ್ನಾಳ, ಹೊನ್ನಪ್ಪ ಮರಡಿ, ಮಹೇಂದ್ರ ಗದಗಿನ ಹಾಗೂ ಅವಳಿ ತಾಲೂಕಿನ ಜನರು ಇದ್ದರು‌.

PREV
Read more Articles on
click me!

Recommended Stories

ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆ: ಚಲುವರಾಯಸ್ವಾಮಿ
ಕಾಫಿನಾಡಿನ ಹೋಟೆಲ್‌ಗಳಿಗೆ ಗ್ಯಾಸ್ ಸಂಕಷ್ಟ; ಕಳಸ, ಹೊರನಾಡಿಗೆ ಹೋದ ಪ್ರವಾಸಿಗರಿಗೆ ಊಟಕ್ಕೂ ಪರದಾಟ!