ಮೈಸೂರು: 'ಶ್ರೀನಿವಾಸಪ್ರಸಾದ್‌, ಸಿದ್ದರಾಮಯ್ಯ ವಿರೋಧಿಗಳಲ್ಲ'

Kannadaprabha News   | Asianet News
Published : Dec 21, 2019, 11:18 AM ISTUpdated : Dec 21, 2019, 11:23 AM IST
ಮೈಸೂರು: 'ಶ್ರೀನಿವಾಸಪ್ರಸಾದ್‌, ಸಿದ್ದರಾಮಯ್ಯ ವಿರೋಧಿಗಳಲ್ಲ'

ಸಾರಾಂಶ

ಸಂಸದ ವಿ. ಶ್ರೀನಿವಾಸಪ್ರಸಾದ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ವಿರೋಧಿಗಳಲ್ಲ, ಅವರು ಒಳ್ಳೆಯ ಸ್ನೇಹಿತರು ಎಂದು ಶಾಸಕ ಡಾ.ಎಸ್‌. ಯತೀಂದ್ರ ಹೇಳಿದ್ದಾರೆ.  

ಮೈಸೂರು(ಡಿ.21): ಸಂಸದ ವಿ. ಶ್ರೀನಿವಾಸಪ್ರಸಾದ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ವಿರೋಧಿಗಳಲ್ಲ, ಅವರು ಒಳ್ಳೆಯ ಸ್ನೇಹಿತರು ಎಂದು ಶಾಸಕ ಡಾ.ಎಸ್‌. ಯತೀಂದ್ರ ಹೇಳಿದ್ದಾರೆ.

ಮೈಸೂರು ತಾಲೂಕು ವರುಣ ಕ್ಷೇತ್ರಕ್ಕೆ ಸೇರುವ ಮೋಸಂಬಾಯನ ಹಳ್ಳಿಯಲ್ಲಿ ಸುಮಾರು 9 ಲಕ್ಷ ರು. ಗೂ ಹೆಚ್ಚು ಅನುದಾನದಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸಿದ್ದರಾಮಯ್ಯಮತ್ತು ವಿ. ಶ್ರೀನಿವಾಸಪ್ರಸಾದ್‌ ಅವರ ಭೇಟಿ ಕುರಿತು ಅವರು ಮಾತನಾಡಿದ್ದಾರೆ.

'ಮೇಯರ್‌ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿಗೆ ತೊಂದರೆ ಇಲ್ಲ'

ಸಿದ್ದರಾಮಯ್ಯನವರಿಗೆ ಹೃದಯ ಚಿಕಿತ್ಸೆಗೊಳಗಾದಾಗ ಅವರ ಆರೋಗ್ಯ ವಿಚಾರಿಸಲು ಹಿರಿಯರೂ ಆದ ವಿ. ಶ್ರೀನಿವಾಸಪ್ರಸಾದ್‌ ಅವರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ವಿಚಾರಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರಲ್ಲದೇ, ವಿ. ಶ್ರೀನಿವಾಸ ಪ್ರಸಾದ್‌ ಅವರ ಹಾಗೂ ಸಿದ್ದರಾಮಯ್ಯನವರ ರಾಜಕೀಯ ಸಿದ್ಧಾಂತ ಒಂದೇ ಆಗಿದೆ. ಇಬ್ಬರೂ ಹಿಂದುಳಿದ ವರ್ಗದ ನಾಯಕರಾಗಿ ರಾಜಕೀಯವಾಗಿ ಬೆಳೆದಂತವಹರಾಗಿದ್ದಾರೆ ಎಂದಿದ್ದಾರೆ.

ಆ್ಯಕ್ಷನ್‌ ಇದ್ರೆ ರಿಯಾಕ್ಷನ್‌: ವಿಶ್ವನಾಥ್‌ ಜೊತೆ ಸಾರಾ ಮಹೇಶ್‌ ಕದನ ವಿರಾಮ!

ಆದ್ದರಿಂದಲೇ ಶ್ರೀನಿವಾಸ ಪ್ರಸಾದ್‌ ಅವರು ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಇಂದಿರಾ ಕ್ಯಾಂಟೀನ್‌ ಹೆಸರೇ ಮುಂದುವರೆಯಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ, ಆದ್ದರಿಂದ ಈ ಇಬ್ಬರು ನಾಯಕರ ರಾಜಕೀಯ ಸಿದ್ಧಾಂತ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಗ್ರಾಪಂ ಅಧ್ಯಕ್ಷೆ ನಿಂಗಮಣಿ, ತಾಪಂ ಸದಸ್ಯ ಮುದ್ದರಾಮೇಗೌಡ, ಕೆಪಿಸಿಸಿ ಕಾರ್ಯದರ್ಶಿ ಮಹೇಶ್‌ ಇದ್ದರು.

PREV
click me!

Recommended Stories

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್