ದೇವಾಲಯ ಉಳಿಸಲು ಸಹಿ ಸಂಗ್ರಹ ಅಭಿಯಾನ

Kannadaprabha News   | Asianet News
Published : Sep 15, 2021, 11:20 AM ISTUpdated : Sep 15, 2021, 12:16 PM IST
ದೇವಾಲಯ ಉಳಿಸಲು ಸಹಿ ಸಂಗ್ರಹ ಅಭಿಯಾನ

ಸಾರಾಂಶ

ದೇವಸ್ಥಾನಗಳನ್ನು ತೆರವುಗೊಳಿಸದಂತೆ ಪರಿಸರ ಸ್ನೇಹಿ ಬಳಗದವರು ಮಂಗಳವಾರ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ  ದೇವಸ್ಥಾನಗಳನ್ನು ಒಡೆಯುವ ಕೆಲಸ ಅಧಿಕಾರಿಗಳು ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದ ಮುಖಂಡರು

ಮೈಸೂರು (ಸೆ.15): ಮೈಸೂರಿನ ಎಂಜಿ ರಸ್ತೆಯಲ್ಲಿರುವ ದಿವಾನ್‌ ಪೂರ್ಣಯ್ಯ ಛತ್ರದ ಎದುರು ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಯಾವುದೇ ದೇವಸ್ಥಾನಗಳನ್ನು ತೆರವುಗೊಳಿಸದಂತೆ ಪರಿಸರ ಸ್ನೇಹಿ ಬಳಗದವರು ಮಂಗಳವಾರ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದರು.

ಈ ವೇಳೆ ನಗರ ಪಾಲಿಕೆ ನಾಮನಿರ್ದೇಶನ ಸದಸ್ಯ ಕೆ.ಜಿ. ರಮೇಶ್‌ ಮಾತನಾಡಿ, ದೇವಸ್ಥಾನಗಳನ್ನು ಒಡೆಯುವ ಕೆಲಸ ಅಧಿಕಾರಿಗಳು ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಯಾವ ದೇವರು ದೇವಸ್ಥಾನಗಳನ್ನ ಕಟ್ಟಬೇಕಾದರೆ ಯಾವುದೇ ವ್ಯಕ್ತಿ ಕಟ್ಟಲಾಗುವುದಿಲ್ಲ. ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ದೇವಸ್ಥಾನವನ್ನು ನಿರ್ಮಿಸಲಾಗುವುದು. ದೇವಸ್ಥಾನಗಳ ತೆರವುಗೊಳಿಸುವ ಕಾರ್ಯ ಹಿಂತೆಗೆದುಕೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ತುಮಕೂರು : ಜಿಲ್ಲೆಯಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳು

ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ. ಲೋಹಿತ್‌ ಮಾತನಾಡಿ, ನಾವು ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಭಕ್ತಾದಿಗಳು ಮತ್ತು ಸಾರ್ವಜನಿಕರು ದೇವಸ್ಥಾನಗಳನ್ನು ತೆರವುಗೊಳಿಸದಂತೆ ಸಹಿ ಸಂಗ್ರಹಿಸಿ, ಈ ಪಟ್ಟಿಯನ್ನು ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದರು.

ಮೈಸೂರು ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್‌, ಮುಖಂಡರಾದ ನಾಣಿಗೌಡ, ಹರೀಶ್‌ ನಾಯ್ಡು, ಕಿಶೋರ್‌, ಸುಚೀಂದ್ರ, ಲತಾ ಬಾಲಕೃಷ್ಣ, ಲತಾ ಮೋಹನ್‌, ಜ್ಯೋತಿ ಮೊದಲಾದವರು ಇದ್ದರು.

PREV
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್