ಆರು ಮಂದಿ ನಕ್ಸಲರು ಡಿಎಆರ್ ಘಟಕದಲ್ಲಿ: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ!

Published : Jan 18, 2025, 07:55 PM IST
ಆರು ಮಂದಿ ನಕ್ಸಲರು ಡಿಎಆರ್ ಘಟಕದಲ್ಲಿ: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ!

ಸಾರಾಂಶ

ಈಚೆಗೆ ಮುಖ್ಯಮಂತ್ರಿಗಳ ಎದುರು ಶರಣಾಗತರಾಗಿರುವ ಆರು ಮಂದಿ ನಕ್ಸಲರನ್ನು ಚಿಕ್ಕಮಗಳೂರು  ನಗರದ ಮಲ್ಲೇಗೌಡ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೊಳಪಡಿಸಲಾಯಿತು. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.18): ಈಚೆಗೆ ಮುಖ್ಯಮಂತ್ರಿಗಳ ಎದುರು ಶರಣಾಗತರಾಗಿರುವ ಆರು ಮಂದಿ ನಕ್ಸಲರನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೊಳಪಡಿಸಲಾಯಿತು. ತನಿಖಾಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ನಲ್ಲಿ ಆರೂ ಮಂದಿ ನಕ್ಸಲರನ್ನು ಗುರುವಾರ ರಾತ್ರಿಯೇ ನಗರಕ್ಕೆ ಕರೆತರಲಾಗಿತ್ತು. ಅವರನ್ನು ರಾಮನಹಳ್ಳಿ ಡಿಎಆರ್ ಘಟಕದಲ್ಲಿ ಇರಿಸಲಾಗಿತ್ತು. ಎಸ್ಪಿ ಡಾ.ವಿಕ್ರಮ ಅಮಟೆ ಅವರು ನಿನ್ನೆ ಬೆಂಗಳೂರಿಗೆ ತೆರಳಿದ್ದರಿಂದ ಇಂದು  ಆರೂ ಮಂದಿಯನ್ನು ಎಸ್ಪಿ ಅವರ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸಲಾಯಿತು. 

ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ: ಇದಕ್ಕೂ ಮುನ್ನ ಇಂದು ಬೆಳಗ್ಗೆ 10 ಗಂಟೆ ಸಮಯಕ್ಕೆ ಆರೂ ಮಂದಿ ನಕ್ಸಲೀಯರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಕರೆತಂದು ಆರೋಗ್ಯ ತಪಾಸಣೆಗೊಳಪಡಿಸಲಾಯಿತು. ಆರೋಗ್ಯ ತಪಾಸಣೆ ಸಣ್ಣಪುಟ್ಟ ನೋವುಗಳ ಬಗ್ಗೆ ವೈದ್ಯರ ಬಳಿ ಶರಣಾದ ನಕ್ಸಲರು ಹೇಳಿಕೊಂಡಿದ್ದಾರೆ. ಮುಂಡಗಾರು ಲತಾಗೆ ಥೈರಾಯ್ಡ್ ಇರುವ ಸಮಸ್ಯೆ ಬಗ್ಗೆ ವೈದ್ಯರು ಬಳಿ ಹೇಳಿಕೊಂಡಿದ್ದಾರೆ. ಇನ್ನೊಂಬ್ಬರಿಗೆ ಕೈ ಮೇಲೆ ಗನ್ ಶಾಟ್ ಆಗಿರುವುದು ಪತ್ತೆಯಾಗಿದೆ. ಆರು ಮಂದಿಯಲ್ಲಿ ಬಹುತೇಕರಿಗೆ ಬಿಪಿ, ಶುಗರ್ ಇರುವುದು ಪತ್ತೆಯಾಗಿದೆ. 

ಡಿಆರ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ: ಆರೂ ಮಂದಿಯನ್ನು ವಿಚಾರಣೆ ನಡೆಸುವ ಹಿನ್ನೆಲೆ ಎನ್ಐಎ ಕೋರ್ಟ್ ನಿಂದ ಅನುಮತಿ ಪಡೆದು ನಗರಕ್ಕೆ ಕರೆತರಲಾಗಿದೆ. ಶರಣಾದವರ ಪೈಕಿ ಮುಂಡಗಾರು ಲತಾ, ಜಯಣ್ಣ, ಸುಂದರಿ, ವನಜಾಕ್ಷಿ ನಾಲ್ವರ ಮೇಲೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. ಮುಂಡಗಾರು ಲತಾ ವಿರುದ್ಧ 33, ವನಜಾಕ್ಷಿ ವಿರುದ್ಧ 15 ಹಾಗೂ  ಸುಂದರಿ ಮತ್ತು ಜಯಣ್ಣ ವಿರುದ್ಧ ತಲಾ 3 ಪ್ರಕರಣಗಳಿವೆ. ವಸಂತ್ ಹಾಗೂ ಜೀಶ್ ಮೇಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ತನಿಖಾ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದುಕೊಂಡು ಹೋಗದಿರುವ ಹಿನ್ನೆಲೆಯಲ್ಲಿ ಆರೂ ಮಂದಿ ಡಿಆರ್ ಪೊಲೀಸ್ ಠಾಣೆಯಲ್ಲಿ ಬಾಕಿಯಾಗಿದ್ದಾರೆ. 14 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿರುವ ನಕ್ಸಲರ ವಿರುದ್ಧದ ಪ್ರಕರಣಗಳ ಬಗ್ಗೆ ನಗರದಲ್ಲಿಯೇ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಶೃಂಗೇರಿ, ಜಯಪುರ, ಕೊಪ್ಪ ಠಾಣೆಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ನಕ್ಸಲರು ಶೃಂಗೇರಿ ಕಾಡಲ್ಲಿಟ್ಟಿದ್ದ ಶಸ್ತ್ರಾಸ್ತ್ರ ವಶ!

ಅಕ್ರಮ ಬಂದೂಕಿನ ಪ್ರಕರಣದ ವಿಚಾರಣೆ ಇಲ್ಲ: ಜಯಪುರ ಸಮೀಪ ಕಿತ್ತಲೆಗುಳಿ ಅರಣ್ಯದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದ ಬಂದೂಕುಗಳ ಬಗ್ಗೆಯೂ ಸಧ್ಯಕ್ಕೆ ವಿಚಾರಣೆ ನಡೆಯುವುದಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ. ಎಸ್ಎಫ್ಎಲ್ ವರದಿ ಬಂದ ನಂತರವಷ್ಟೆ ಬಂದೂಕುಗಳ ಕುರಿತು ತನಿಖೆ ನಡೆಯುತ್ತದೆ ಎನ್ನಲಾಗುತ್ತಿದೆ. ಬಂದೂಕು, ಮದ್ದು ಗುಂಡುಗಳು ಪತ್ತೆಯಾದಾಗ ಅಪರಿಚಿತರ ಬಂದೂಕು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

PREV
Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ