ರಾಸಲೀಲೆ ಸಿಡಿ- ಮಾಜಿ ಸಿಎಂ ವೈನಾಡ್ ಕಥೆ : ಯೂ ಟರ್ನ್

Published : Mar 09, 2021, 07:52 AM IST
ರಾಸಲೀಲೆ ಸಿಡಿ- ಮಾಜಿ ಸಿಎಂ ವೈನಾಡ್ ಕಥೆ : ಯೂ ಟರ್ನ್

ಸಾರಾಂಶ

ರಾಸಲೀಲೆ ಸಿಡಿ ಹಾಗೂ ಮಾಜಿ ಸಿಎಂ ಓರ್ವರ ವೈನಾಡ್ ಕಥೆ ಹೇಳಿದ್ದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಇದೀಗ ಉಲ್ಟಾ ಹೊಡೆದಿದ್ದಾರೆ. 

ಬೆಳಗಾವಿ (ಮಾ.09): ನನ್ನ ಬಳಿ ರಾಜಕಾರಣಿಗಳ ಸೀಡಿ ಇದೆ ಎಂದು ಎಲ್ಲೂ ಹೇಳಿಲ್ಲ. ನನ್ನ ಬಳಿ ಯಾವುದೇ ರಾಜಕಾರಣಿಗಳ ಸೀಡಿಗಳಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಪುನರುಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವರು ಪ್ರಭಾವಿ ರಾಜಕಾರಣಿ. ಬಿಜೆಪಿ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಪ್ರಮುಖವಾದದ್ದು. ಹೀಗಾಗಿ ಉತ್ತರ ಕರ್ನಾಟಕದ ರಾಜಕಾರಣಿಗಳು ಪ್ರಭಾವಿಗಳಾಗಿ ಬೆಳೆಯದಂತೆ ಎಲ್ಲ ಪಕ್ಷಗಳಲ್ಲಿಯೂ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.

ಸಿಡಿ ಕೇಸ್‌: 'ಪ್ರವಾಸಕ್ಕೆ ಹೋಗಿದ್ದ, ಮುಂದೆ ಹೋಗುವ ರಾಜಕಾರಣಿಗಳು ಎಚ್ಚರದಿಂದಿರಿ' ...

ಉತ್ತರ ಕರ್ನಾಟಕದ ರಾಜಕಾರಣಿಗಳು ಮುಗ್ಧರು, ನೇರ ನುಡಿಯವರು. ಮಾಜಿ ಸಚಿವರೊಬ್ಬರ ಸೀಡಿಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದರು.

PREV
click me!

Recommended Stories

ಆ.12ರ ಯುರೋಪ್ ಸೂರ್ಯಗ್ರಹಣಕ್ಕೆ ಕರೋನ ಮುನ್ಸೂಚನೆ ನೀಡಿದ ಭಾರತೀಯ ವಿಜ್ಞಾನಿಗಳು, ಬೆಂಗಳೂರಿನ RRIನಲ್ಲಿ ಸಂಶೋಧನೆ!
ಸಂಪೂರ್ಣವಾಗಿ ಬದಲಾಗಲಿದೆ ಬೆಂಗಳೂರಿನ ಮೊಟ್ಟಮೊದಲ ಫ್ಲೈಓವರ್‌, 10 ಕೋಟಿ ವೆಚ್ಚ ಮಾಡಲಿರುವ GBA