ಕರ್ನಾಟಕದಿಂದ ಸೋಲಾಪುರ ಮಾರ್ಗವಾಗಿ ಹೋಗುವ ಹಲವು ರೈಲು ಸಂಚಾರ ನಿರ್ಬಂಧ, ಜೂ. 5ರಿಂದ10ರವರೆಗೆ ಹಲವು ಟ್ರೈನ್ ರದ್ದು!

Published : Jun 05, 2026, 12:14 PM IST
Indian Railways

ಸಾರಾಂಶ

ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್‌ನಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಯಿಂದಾಗಿ ಕೇಂದ್ರ ರೈಲ್ವೆಯು ಜೂನ್ 5 ರಿಂದ 10 ರವರೆಗೆ ಹಲವು ರೈಲುಗಳ ಸಂಚಾರವನ್ನು ನಿರ್ಬಂಧಿಸಿದೆ. ಈ ಅವಧಿಯಲ್ಲಿ ಕೆಲವು ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ ಹಾಗೂ ಸೋಲಾಪುರ-ಕಲಬುರಗಿ ವಿಶೇಷ ರೈಲು ರದ್ದತಿಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕಲಬುರಗಿ: ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್‌ನಲ್ಲಿ ಮೇಲ್ದರ್ಜೆ ಕಾಮಗಾರಿಗೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ನ್ನು ನಿಯೋಜಿಸಲು ಪೂರ್ವ-ಇಂಟರ್‌ಲಾಕಿಂಗ್ ಅಲ್ಲದ ಮತ್ತು ಇಂಟರ್‌ಲಾಕಿಂಗ್ ಅಲ್ಲದ ಕೆಲಸದಿಂದಾಗಿ ಜೂನ್ 5ರಿಂದ 10ರವರೆಗೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಹಲವು ರೈಲುಗಳ ಮೇಲೆ ಸಂಚಾರ ನಿರ್ಬಂಧ ವಿಧಿಸಿದೆ.

ನಿಯಂತ್ರಣ ಯಾವ ರೈಲುಗಳ ಮೇಲೆ ?

ಜೂನ್‌ 5 ರಂದು ರೈಲು ಸಂಖ್ಯೆ 11311 ಸೋಲಾಪುರ-ಹಾಸನ ಎಕ್ಸ್‌ಪ್ರೆಸ್ ಹಾಗೂ ರೈಲು ಸಂಖ್ಯೆ 17308 ಬಾಗಲಕೋಟೆ- ಮೈಸೂರು ಬಸವಾ ಎಕ್ಸ್‌ಪ್ರೆಸ್ ಸಂಚಾರದ ಮೇಲೆ 45 ನಿಮಿಷಗಳ ನಿಯಂತ್ರಣವಿರಲಿದೆ. ಜೂ. 8 ರಂದು ರೈಲು ಸಂಖ್ಯೆ 18520 ಎಲ್‌ಟಿಟಿ ಮುಂಬೈ- ವಿಶಾಖಪಟ್ಟಣ ಎಕ್ಸ್‌ಪ್ರೆಸ್ಜೂ 2 ಗಂಟೆ, ರೈಲು ಸಂಖ್ಯೆ 01465 ಸೋಲಾಪುರ-ಕಲಬುರಗಿ ವಿಶೇಷ 1 ಗಂಟೆ 30 ನಿಮಿಷ, ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್‌ಪ್ರೆಸ್ 30 ನಿಮಿಷ, ರೈಲು ಸಂಖ್ಯೆ 11301 ಸಿಎಸ್‌ಎಂಟಿ ಮುಂಬೈ-ಕೆಎಸ್‌ಆರ್ ಬೆಂಗಳೂರು ಉದ್ಯಾನ ಎಕ್ಸ್‌ಪ್ರೆಸ್ 30 ನಿಮಿಷ ನಿಯಂತ್ರಣದಲ್ಲಿರಲಿವೆ.

ಜೂನ್‌ 9 ರಂದು ರೈಲು ಸಂಖ್ಯೆ 16382 ಕನ್ಯಾಕುಮಾರಿ-ಪುಣೆ ಎಕ್ಸ್‌ಪ್ರೆಸ್ 1 ಗಂಟೆ 15 ನಿಮಿಷ, ರೈಲು ಸಂಖ್ಯೆ 11020 ಭುವನೇಶ್ವರ- ಸಿಎಸ್‌ಎಂಟಿ ಮುಂಬೈ ಎಕ್ಸ್‌ಪ್ರೆಸ್ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

ಕೆಲವು ರೈಲು ಮಾರ್ಗ ಬದಲಾವಣೆ:

ರೈಲು ಸಂಖ್ಯೆ 57662 ವಿಜಯಪುರ-ರಾಯಚೂರು ಪ್ಯಾಸೆಂಜರ್ ಜೂ. 5 ರಿಂದ 10 ರ ವರೆಗೆ ವಿಜಯಪುರ-ಹೋಟ್ಗಿ-ವಾಡಿ ಮಾರ್ಗ, ರೈಲು ಸಂಖ್ಯೆ 57661 ರಾಯಚೂರು-ವಿಜಯಪುರ ಪ್ಯಾಸೆಂಜರ್ ವಾಡಿ-ಹೋಟ್ಗಿ-ವಿಜಯಪುರ ಮೂಲಕ ಮಾರ್ಗ ಬದಲಾವಣೆ ಮಾಡಲಾಗುತ್ತದೆ.

ಕೆಳಗಿನ ರೈಲುಗಳನ್ನು ನಿರ್ದಿಷ್ಟಪಡಿಸಿದಂತೆ ಮರುಹೊಂದಿಸಲಾಗುತ್ತದೆ. ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್‌ಪ್ರೆಸ್ ಜೂ. 10 ರಂದು 2 ಗಂಟೆ 20 ನಿಮಿಷಗಳ ಕಾಲ ಮತ್ತು ರೈಲು ಸಂಖ್ಯೆ 11301 ಸಿಎಸ್‌ಎಂಟಿ ಮುಂಬೈ-ಕೆಎಸ್‌ಆರ್ ಬೆಂಗಳೂರು ಉದ್ಯಾನ ಎಕ್ಸ್‌ಪ್ರೆಸ್ 2 ಗಂಟೆ 15 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.

ರೈಲು ಸಂಖ್ಯೆ 01465 ಸೋಲಾಪುರ- ಕಲಬುರಗಿ ಮತ್ತು ರೈಲು ಸಂಖ್ಯೆ 01466 ಕಲಬುರಗಿ- ಸೋಲಾಪುರ ಈ ರೈಲು ಜೂ. 10 ರಂದು ರದ್ದು ಮಾಡಲಾಗಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

PREV
Read more Articles on
click me!

Recommended Stories

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬ್ಯಾನರ್, ಕಟೌಟ್ಸ್; ಅತ್ಯಾ**ರ ಅಪರಾಧಿಯನ್ನ ಆರಾಧಿಸಿದರೆ ಪಶ್ಚಾತ್ತಾಪಕ್ಕೆಲ್ಲಿದೆ ಅವಕಾಶ!
"ಸಾಮಾನ್ಯರಿಗಿರಲಿ, NRIಗಳಿಗೂ ಬೆಂಗಳೂರಲ್ಲಿ ಮನೆ ಕೊಳ್ಳೋದು ಕಷ್ಟ!": ಪ್ರತಿ ತಿಂಗಳ ಇಎಂಐ ಕೇಳಿದರೆ ಶಾಕ್!