ಶೀಘ್ರ ಹೊಸ ಮರಳು ನೀತಿ ಜಾರಿ: ಸಚಿವ ಮುರುಗೇಶ ನಿರಾಣಿ

Kannadaprabha News   | Asianet News
Published : Mar 03, 2021, 03:38 PM IST
ಶೀಘ್ರ ಹೊಸ ಮರಳು ನೀತಿ ಜಾರಿ: ಸಚಿವ ಮುರುಗೇಶ ನಿರಾಣಿ

ಸಾರಾಂಶ

ರಾಜ್ಯದೆಲ್ಲಡೆ ಅನಧಿಕೃವಾಗಿ ಮರಳು ಹಾಗೂ ಜಲ್ಲಿಕಲ್ಲು ಸಾಗಾಣಿಕೆ| ಸರ್ಕಾರಕ್ಕೆ ಬರುವ ಆದಾಯ ಪೋಲಾಗುತ್ತಿದ್ದು, ನಿಯಂತ್ರಣ ಮಾಡಿದಷ್ಟು ಅನಧಿಕೃತ ಗಣಿಗಾರಿಕೆ ಹೆಚ್ಚಾಗುತ್ತಿದೆ| ಮರಳು ಉಚಿತವಾಗಿ ದೊರೆಯುವಂತೆ ಮಾಡಿದಲ್ಲಿ ಸಾಮಾನ್ಯ ಜನರಿಗೆ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸಲು ಅನುಕೂಲ: ನಿರಾಣಿ| 

ಬಾಗಲಕೋಟೆ(ಮಾ.03): ಬಡ ಜನರ ಕೈಗೆಟಕುವ ದರದಲ್ಲಿ ಮರಳು ಒದಗಿಸಿದಲ್ಲಿ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹೊಸ ಮರಳು ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದೆಲ್ಲಡೆ ಅನಧಿಕೃವಾಗಿ ಮರಳು ಹಾಗೂ ಜಲ್ಲಿಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಬರುವ ಆದಾಯ ಪೋಲಾಗುತ್ತಿದ್ದು, ನಿಯಂತ್ರಣ ಮಾಡಿದಷ್ಟುಅನಧಿಕೃತ ಗಣಿಗಾರಿಕೆ ಹೆಚ್ಚಾಗುತ್ತಿದೆ. ಮರಳು ಉಚಿತವಾಗಿ ದೊರೆಯುವಂತೆ ಮಾಡಿದಲ್ಲಿ ಸಾಮಾನ್ಯ ಜನರಿಗೆ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸಲು ಅನುಕೂಲವಾಗಲಿದೆ ಎಂದರು.

ಬೇರೆ ಜಿಲ್ಲೆಗಳಿಗೆ ಸಾಗಾಣಿಕೆ ಮಾಡಿದ್ರೆ ಕೇಸ್:

ಉಚಿತವಾಗಿ ಮರಳು ಸಿಗುವಂತೆ ಮಾಡಿದಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವವರಿಗೆ ವರದಾನವಾಗಲಿದ್ದು, ಇದರಿಂದ ಮರಳು ಅಭಾವ ತಪ್ಪಿಸಬಹುದಾಗಿದೆ. ಅಲ್ಲದೇ ಸರಕಾರಕ್ಕೆ ಬರುವ ಆದಾಯ ಹೆಚ್ಚಾಗಲಿದೆ. 10 ಲಕ್ಷ ರು.ಗಳ ಒಳಗೆ ನಿರ್ಮಿಸುತ್ತಿರುವ ಮನೆಗಳಿಗೆ ಇದು ಅನ್ವಯವಾಗಲಿದೆ. ಹೊಸ ನೀತಿಯನ್ವಯ ಟ್ರ್ಯಾಕ್ಟರ್, ಎತ್ತಿನ ಬಂಡಿ, ದ್ವಿಚಕ್ರ ವಾಹನ, ಮರಳು ಸಾಗಣೆ ಮಾಡಿದರೆ ಕೇಸ್ದಾಖಲಿಸುವಂತಿಲ್ಲ. ಬೇರೆ ಜಿಲ್ಲೆಗಳಿಗೆ ಸಾಗಾಣಿಕೆ ಮಾಡಿದರೆ ಮಾತ್ರ ಕೇಸ್ದಾಖಲಿಸಲಾಗುವುದೆಂದು ತಿಳಿಸಿದರು.

'ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಮಾಡಿದ ಪ್ರಧಾನಿ: ಮೋದಿ ಹೇಳಿದ ಅಚ್ಚೇದಿನ್‌ ಎಲ್ಲಿದೆ?'

15 ದಿನಗಳಲ್ಲಿ ಅನುಮತಿ:

ಜಿಲ್ಲೆಯಲ್ಲಿ ಜೆಲ್ಲಿ ಕ್ರಷರ್ಘಟಕಗಳು 16 ಮಾತ್ರ ಚಾಲ್ತಿಯಲ್ಲಿದ್ದು, ನಮೂನೆ ಡಿ ವಿತರಿಸಿದ 29 ಜೆಲ್ಲಿ ಕ್ರಷರ್ಘಟಕಗಳಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಬೇಗನೇ ಅನುಮತಿ ನೀಡಬೇಕು. ಏಕೆಂದರೆ ಘಟಕ ಸ್ಥಾಪನೆಗೆ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದು, ಕಂತು ತುಂಬಲು ಸಾಧ್ಯವಾಗುತ್ತಿಲ್ಲ. ಅನುಮತಿ ತುರ್ತು ನೀಡಿದಲ್ಲಿ ಕ್ರಷರ್ಪ್ರಾರಂಭವಾದರೆ ಅವರಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದಾಗ ಇನ್ನು 15 ದಿನಗಳಲ್ಲಿ ಅನುಮತಿಗಾಗಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲೆಯಲ್ಲಿ ಓವರ್ಲೋಡ್ಆಗುತ್ತಿರುವ ಬಗ್ಗೆ ಗಣನೆಗೆ ಬಂದಿದ್ದು, ಅವುಗಳ ತಡೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಹುನಗುಂದ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಮೂರು ತರಹದ ಕಲ್ಲು ಸಿಗುತ್ತಿದ್ದು, ಅವುಗಳಲ್ಲಿರುವ ವ್ಯತ್ಯಾಸದಿಂದ ಹೆಚ್ಚಿನ ಲಾಭವಾಗಲಿದ್ದು, ಬೇರೆಡೆ ರಫ್ತು ಮಾಡುವಾಗ ಗಣನೆಗೆ ತೆಗೆದುಕೊಳ್ಳಲು ತಿಳಿಸಿದರು.

ಸಭೆಯಲ್ಲಿ ಎಸ್ಪಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಪಂ ಸದಸ್ಯ ಹೂವಪ್ಪ ರಾಠೋಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಂಜಿನಿಯರ್ಶಿವಶಂಕರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

2 ಕಬ್ಬಿಣ ಅದಿರಿನ ಘಟಕ, 28 ಕ್ವಾರಿ, 21 ಪಿಂಕ್ಗ್ರಾನೈಟ್ಸ್, 15 ಮರಳು ಘಟಕ, 13 ಬಿಲ್ಡಿಂಗ್ಸ್ಟೋನ್, 16 ಜೆಲ್ಲಿ ಕ್ರಷರ್ಗಳು ಚಾಲ್ತಿಯಲ್ಲಿವೆ. ನವೀಕರಣಕ್ಕೆ ಬಂದ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ಅನುಮತಿಗೆ ಕ್ರಮವಹಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ರೋಹಿತ ತಿಳಿಸಿದ್ದಾರೆ. 
 

PREV
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?